ಬಂಡಿಪುರ ಅರಣ್ಯದಲ್ಲಿ 1,600ಕ್ಕೂ ಹೆಚ್ಚು ಆನೆಗಳು: ಆಂತರಿಕ ಸಮೀಕ್ಷೆ ಮಾಹಿತಿ
ಬೆಂಗಳೂರು, ಸೆಪ್ಟೆಂಬರ್ 19: ಬಂಡಿಪುರ ಹುಲಿ ಸಂರಕ್ಷಿತಾರಣ್ಯದಲ್ಲಿ (ಬಿಟಿಆರ್) 1,600ಕ್ಕೂ ಅಧಿಕ ಆನೆಗಳು ಇವೆ ಎಂದು ವಲಯದ ಅರಣ್ಯಾಧಿಕಾರಿಗಳು ನಡೆಸಿದ ಆಂತರಿಕ ಸಮೀಕ್ಷೆ ತಿಳಿಸಿದೆ.
ಏಪ್ರಿಲ್ನಲ್ಲಿ ಲಾಕ್ಡೌನ್ ಅವಧಿಯಲ್ಲಿ ಪ್ರಾರಂಭಿಸಿದ ಸಮೀಕ್ಷೆಯನ್ನು ಅನ್ಲಾಕ್ ಅವಧಿಯವರೆಗೆ ನಾಲ್ಕು ತಿಂಗಳು ನಡೆಸಲಾಗಿದೆ. ಅಖಿಲ ಭಾರತ ಆನೆ ಗಣತಿಯಲ್ಲಿ ತೆಗೆದುಕೊಳ್ಳಲಾಗುವ ಎಲ್ಲ ಶಿಷ್ಟಾಚಾರಗಳನ್ನು ಅಧಿಕಾರಿಗಳು ಅನುಸರಿಸಿದ್ದರು.
ಒಂದು ನಿರ್ದಿಷ್ಟ ಅರಣ್ಯ ಪ್ರದೇಶದಲ್ಲಿ ಈ ರೀತಿ ತಂಡವೊಂದು ಆಂತರಿಕ ಸಮೀಕ್ಷೆ ನಡೆಸಿರುವುದು ಇದೇ ಮೊದಲು. ಕಳೆದ ಬಾರಿ ದೇಶದಾದ್ಯಂತ ನಡೆದ ಆನೆ ಗಣತಿಯಲ್ಲಿ ಕರ್ನಾಟಕದಲ್ಲಿ 8,500 ಆನೆಗಳಿವೆ ಎಂದು ಹೇಳಲಾಗಿದೆ.

'ನಾಲ್ಕು ತಿಂಗಳವರೆಗೂ ಪ್ರತಿ ತಿಂಗಳಲ್ಲಿ ಎರಡು ದಿನದಂತೆ ಸಮೀಕ್ಷೆಯನ್ನು ನಡೆಸಲಾಗಿದೆ. ಆನೆಗಳ ಚಟುವಟಿಕೆಗಳನ್ನು, ಅರಣ್ಯ ಪ್ರದೇಶವನ್ನು ಮತ್ತು ಅವುಗಳ ಆವಾಸವನ್ನು ಹೇಗೆ ಸುಧಾರಿಸಬಹುದು ಎಂಬುದನ್ನು ಅರ್ಥ ಮಾಡಿಕೊಳ್ಳಲು ಈ ಸಮೀಕ್ಷೆ ಮಾಡಲಾಗಿದೆ' ಎಂದು ಬಿಆರ್ಟಿ ನಿರ್ದೇಶಕ ಟಿ. ಬಾಲಚಂದ್ರ ತಿಳಿಸಿದ್ದಾಗಿ 'ಇಂಡಿಯನ್ ಎಕ್ಸ್ಪ್ರೆಸ್' ವರದಿ ಮಾಡಿದೆ.
ಈ ದತ್ತಾಂಶಗಳನ್ನು ವಿಶ್ಲೇಷಣೆ ಮಾಡಲು ನಿವೃತ್ತ ಜೀವಶಾಸ್ತ್ರಜ್ಞರ ಸಹಾಯ ಪಡೆದುಕೊಳ್ಳಲಾಗುತ್ತಿದೆ. ಮೈಸೂರು ಅರಣ್ಯ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿ ಕೂಡ ಈ ಚಟುವಟಿಕೆಯಲ್ಲಿ ಭಾಗಿಯಾಗಿದ್ದರು.
'ನಿರ್ದೇಶಕನಾಗಿ ಉತ್ತಮ ನಿರ್ವಹಣೆಗಾಗಿ ಈ ವಿಭಾಗವನ್ನು ಚೆನ್ನಾಗಿ ಅರಿತುಕೊಳ್ಳಲು ಬಯಸಿದ್ದೇನೆ. ಈ ಭಾಗದಲ್ಲಿರುವ ಆನೆಗಳ ಸಂಖ್ಯೆ ಮತ್ತು ಜಮಾವಣೆಯ ಸ್ಥಳಗಳನ್ನು ಅರಣ್ಯ ಸಿಬ್ಬಂದಿ ತಿಳಿದುಕೊಂಡರೆ ಅವುಗಳನ್ನು ಇನ್ನಷ್ಟು ಉತ್ತಮವಾಗಿ ನಿರ್ವಹಣೆ ಮಾಡಬಹುದು. ಕಾಂಕ್ರೀಟ್ ಮೂಲಸೌಕರ್ಯಕ್ಕಿಂತಲೂ ಸಸ್ಯ ಮೂಲಸೌಕರ್ಯವನ್ನು ಬಲಪಡಿಸಬೇಕು ಎನ್ನುವುದನ್ನು ನಾವು ಕಂಡುಕೊಂಡಿದ್ದೇವೆ.
ಪ್ರಾಥಮಿಕ ಮಾಹಿತಿಯ ಪ್ರಕಾರ ಈ ಸಂರಕ್ಷಿತಾರಣ್ಯದಲ್ಲಿ 1600ಕ್ಕೂ ಹೆಚ್ಚು ಆನೆಗಳಿವೆ. ಇನ್ನು 20 ದಿನಗಳಲ್ಲಿ ಅಂತಿಮ ವರದಿ ಸಿದ್ಧವಾಗಲಿದೆ' ಎಂದು ನಿರ್ದೇಶಕರು ತಿಳಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications