ರಾಜ್ಯದಲ್ಲಿ ಎಚ್1 ಎನ್1 ಭೀತಿ: ಆರೋಗ್ಯ ಇಲಾಖೆ ಕಟ್ಟೆಚ್ಚರ
Recommended Video
ಬೆಂಗಳೂರು, ಸೆ.28: ರಾಜ್ಯದಲ್ಲಿ ಡೆಂಗ್ಯೂ, ಮಲೇರಿಯಾ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಮತ್ತೆ ಎಚ್ 1 ಎನ್ 1 ಭೀತಿ ಆರಂಭವಾಗಿದೆ. ಕಳೆದ 21 ದಿನಗಳಲ್ಲಿ 102 ಪ್ರಕರಗಳು ದಾಖಲಾಗಿವೆ.
ಶಿವಮೊಗ್ಗ : ತೀರ್ಥಹಳ್ಳಿಯಲ್ಲಿ ಹಂದಿ ಜ್ವರ, 14 ಪ್ರಕರಣ ಪತ್ತೆ
ರಾಜ್ಯಾದ್ಯಂತ ಬಹುತೇಕ ಆಸ್ಪತ್ರೆಗಳಲ್ಲಿ ನೆಗಡಿ, ಕೆಮ್ಮು, ಜ್ವರ ಸೇರಿದಂತೆ ಉಸಿರಾಟದ ತೊಂದರೆಯಿಂದ ಚಿಕಿತ್ಸೆಗೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಿದ್ದು, ಪರೀಕ್ಷೆಯಿಂದ ಎಚ್1 ಎನ್1 ಪ್ರಕರಣ ಪತ್ತೆಯಾಗಿದೆ.
ದೇಶಾದ್ಯಂತ ಔಷಧ ಅಂಗಡಿಗಳ ಮುಷ್ಕರ: ಶುಕ್ರವಾರ ಔಷಧ ಸಿಗಲ್
ಈ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಎಲ್ಲಾ ಆಸ್ಪತ್ರೆಗಳಿಗೂ ಸುತ್ತೋಲೆ ಹೊರಡಿಸಿದೆ. ಹೀಗಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಶಂಕಿತ ರೋಗಿಗಳಿಗೆ ಸೂಕ್ತ ಚಿಕಿತ್ಸೆ, ಸಗತ್ಯ ಸಲಹೆ ಸೂಚನೆ, ಚಿಕಿತ್ಸಾ ನಂತರದ ಅನುಸರಣೆ ಮುಂತಾದ ಕಾರ್ಯಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಆರೋಗ್ಯ ಇಲಾಖೆ ಆಯುಕ್ತರು ಎಲ್ಲಾ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಆದೇಶಿಸಿದ್ದಾರೆ.
ರಾಜ್ಯದಲ್ಲಿ ಜನವರಿ ಆರಂಭದಿಂದ ಇಲ್ಲಿಯವರೆಗೆ 3876ಶಂಕಿತ ಪಾದರಿಗಳನ್ನು ಪರೀಕ್ಷಿಸಲಾಗಿದ್ದು, 139 ಪ್ರಕರಣಗಳು ಪ್ರಕರಣಗಳು ದೃಢಪಟ್ಟಿವೆ. ಕಳೆದ ವರ್ಷ ಇದೇ ಸಮಯಕ್ಕೆ 13,849 ಶಂಕಿತ ಮಾದರಿ ಪರೀಕ್ಷೆಯಲ್ಲಿ 1134 ಪ್ರಕರಣಗಳು ದೃಢಪಟ್ಟಿತ್ತು.