ಹಳೆಯ ವಾಹನಗಳ ಸಂಖ್ಯೆಯಲ್ಲಿ ದೇಶದಲ್ಲಿ ಕರ್ನಾಟಕವೇ ನಂಬರ್ 1
ಬೆಂಗಳೂರು, ಮಾರ್ಚ್ 29: ಹದಿನೈದಕ್ಕಿಂತ ಹೆಚ್ಚು ವರ್ಷ ಹಳೆಯದಾದ 4 ಕೋಟಿಗೂ ಹೆಚ್ಚು ವಾಹನಗಳು ದೇಶಾದ್ಯಂತ ಸಂಚರಿಸುತ್ತಿವೆ.
ಈ ಪೈಕಿ 70 ಲಕ್ಷಕ್ಕೂ ಅಧಿಕ ವಾಹನಗಳೊಂದಿಗೆ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶಗಳಲ್ಲಿ ಉಲ್ಲೇಖಿಸಲಾಗಿದೆ.
ಪರಿಸರ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಹಳೆಯ ವಾಹನಗಳ ಮೇಲೆ ಹಸಿರು ತೆರಿಗೆ ವಿಧಿಸುವ ಯೋಜನೆಯೊಂದನ್ನು ಕೇಂದ್ರ ಸರ್ಕಾರ ರೂಪಿಸಿದೆ. ಈ ಪ್ರಸ್ತಾಪವನ್ನು ಅದು ರಾಜ್ಯಗಳಿಗೆ ಕಳುಹಿಸಿಕೊಟ್ಟಿದ್ದು, ಅದರ ಬೆನ್ನಲ್ಲೇ ಇಂತಹ ತೆರಿಗೆ ವ್ಯಾಪ್ತಿಗೆ ಒಳಪಡುವ ವಾಹನಗಳ ರಾಜ್ಯವಾರು ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಹಸಿರು ತೆರಿಗೆ ಯಾವ ವಾಹನಗಳಿಗೆ ಅನ್ವಯ
8 ವರ್ಷಕ್ಕಿಂತ ಹಳೆಯ ಸಾರಿಗೆ ವಾಹನಗಳು, 15 ವರ್ಷಕ್ಕಿಂತ ಮೇಲ್ಪಟ್ಟ ಖಾಸಗಿ ವಾಹನಗಳಿಗೆ ಫಿಟ್ನೆಸ್ ಪರೀಕ್ಷೆ ವೇಳೆ ರಸ್ತೆ ತೆರಿಗೆಯ ಶೇ.10 ರಿಂದ ಶೇ.25ರಷ್ಟು ಹಸಿರು ತೆರಿಗೆ ವಿಧಿಸಲಾಗುತ್ತದೆ.

ಕೇಂದ್ರೀಕೃತ 'ವಾಹನ್' ದತ್ತಾಂಶ
ಕೇಂದ್ರೀಕೃತ ವಾಹನ್ ದತ್ತಾಂಶಗಳ ಅನ್ವಯ, 15 ವರ್ಷಕ್ಕೂ ಹಳೆಯದಾದ 4 ಕೋಟಿಗೂ ಹೆಚ್ಚಿನ ವಾಹನಗಳು ಸದ್ಯ ದೇಶಾದ್ಯಂತ ಸಂಚರಿಸುತ್ತಿವೆ. ಈ ಪೈಕಿ 2 ಕೋಟಿ ವಾಹನಗಳ ಪೈಕಿ 70 ಲಕ್ಷಕ್ಕೂ ಹೆಚ್ಚು ಹಳೆಯ ವಾಹನಗಳೊಂದಿಗೆ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ ಉತ್ತರ ಪ್ರದೇಶ(56.54ಲಕ್ಷ), ದೆಹಲಿ(49.93 ಲಕ್ಷ), ಕೇರಳ( 34.64 ಲಕ್ಷ), ತಮಿಳುನಾಡು( 33.43 ಲಕ್ಷ), ಪಂಜಾಬ್ (25.83 ಲಕ್ಷ), ಪಶ್ಚಿಮ ಬಂಗಾಳ( 22.69 ಲಕ್ಷ) ವಾಹನಗಳನ್ನು ಹೊಂದಿದೆ. ಇನ್ನು ಮಹಾರಾಷ್ಟ್ರ, ಒಡಿಶಾ, ಹರ್ಯಾಣ ಸರಾಸರಿ 13 ರಿಂದ 18 ಲಕ್ಷದಷ್ಟು ವಾಹನಗಳನ್ನು ಹೊಂದಿದೆ.

ಸಾರ್ವಜನಿಕ ಸಾರಿಗೆ ಬಸ್ಗಳಿಗೆ ತೆರಿಗೆ ಪ್ರಮಾಣ ಕಡಿಮೆ
ಸಾರ್ವಜನಿಕ ಸಾರಿಗೆ ಬಸ್ಗಳಿಗೆ ತೆರಿಗೆ ಪ್ರಮಾಣ ಕಡಿಮೆ ಇರಲಿದೆ. ಹೆಚ್ಚಿನ ಮಾಲಿನ್ಯ ಇರುವ ನಗರಗಳಲ್ಲಿ ತೆರಿಗೆ ಪ್ರಮಾಣ ಶೇ. 50ರವರೆಗೂ ಇರಲಿದೆ. ಹೈಬ್ರಿಡ್, ಎಲೆಕ್ಟ್ರಿಕ್, ಸಿಎನ್ಜಿ, ಎಲ್ಪಿಜಿ, ಕೃಷಿ ಚಟುವಟಿಕೆಗಳಿಗೆ ಬಳಸುವ ವಾಹನಗಳಿಗೆ ತೆರಿಗೆಯಿಂದ ವಿನಾಯಿತಿ ಇರಲಿದೆ.

ಪರಿಸರ ಮಾಲಿನ್ಯ ತಡೆಯಲು ಕ್ರಮ
ಪರಿಸರ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಹಳೆಯ ವಾಹನಗಳ ಮೇಲೆ ಹಸಿರು ತೆರಿಗೆ ವಿಧಿಸುವ ಯೋಜನೆಯೊಂದನ್ನು ಕೇಂದ್ರ ಸರ್ಕಾರ ರೂಪಿಸಿದೆ. ಈ ಪ್ರಸ್ತಾಪವನ್ನು ಅದು ರಾಜ್ಯಗಳಿಗೆ ಕಳುಹಿಸಿಕೊಟ್ಟಿದ್ದು, ಅದರ ಬೆನ್ನಲ್ಲೇ ಇಂತಹ ತೆರಿಗೆ ವ್ಯಾಪ್ತಿಗೆ ಒಳಪಡುವ ವಾಹನಗಳ ರಾಜ್ಯವಾರು ಪಟ್ಟಿಯನ್ನು ಬಿಡುಗಡೆ ಮಾಡಿದೆ.
-
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price Update: ಆಭರಣಪ್ರಿಯರೇ ಗಮನಿಸಿ, ಇಂದು ಚಿನ್ನದ ಬೆಲೆ ಏರಿಕೆ- ಬೆಳ್ಳಿ ಸ್ಥಿರ, ಮಾರುಕಟ್ಟೆ ದರ ವಿವರ -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
School Property: ಸರ್ಕಾರಿ ಶಾಲೆ 12 ವರ್ಷಗಳಿಂದ ಒಂದೇ ಭೂಮಿಯಲ್ಲಿದ್ದರೆ ಅದು ರಾಜ್ಯ ಸರ್ಕಾರದ ಆಸ್ತಿ: ಏನಿದು ಹೊಸ ಕಾನೂನು? -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ












Click it and Unblock the Notifications