ಕರ್ನಾಟಕದ ಐವರು ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ
ಬೆಂಗಳೂರು, ಜನವರಿ 25; 73ನೇ ಗಣರಾಜ್ಯೋತ್ಸವದ ಮುನ್ನಾ ದಿನ ಕೇಂದ್ರ ಸರ್ಕಾರ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ. ಕವಿ ದಿ. ಸಿದ್ದಲಿಂಗಯ್ಯ ಸೇರಿದಂತೆ ಕರ್ನಾಟಕದ ಐವರು ಸಾಧಕರಿಗೆ ಪ್ರಶಸ್ತಿ ಲಭಿಸಿದೆ.
ಮಂಗಳವಾರ ಕೇಂದ್ರ ಸರ್ಕಾರ 2022ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟಿಸಿದೆ. ಬಂಡಾಯ ಸಾಹಿತಿ, ದಲಿತ ಕವಿ ಎಂದೇ ಖ್ಯಾತಿ ಪಡೆದಿದ್ದ ಡಾ. ಸಿದ್ದಲಿಂಗಯ್ಯಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಕೋವಿಡ್ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ಡಾ. ಸಿದ್ದಲಿಂಗಯ್ಯ ಚಿಕಿತ್ಸೆ ಫಲಕಾರಿಯಾಗದೆ ಜೂನ್ 11, 2021ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.

ಪ್ರಶಸ್ತಿ ಪಡೆದ ಸಾಧಕರು; ಕರ್ನಾಟಕದ ನಾಲ್ವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ. ಸುಬ್ಬಣ್ಣ ಅಯ್ಯಪ್ಪನ್ (ವಿಜ್ಞಾನ ಮತ್ತು ಇಂಜಿನಿಯರಿಂಗ್), ಎಚ್. ಆರ್. ಕೇಶವಮೂರ್ತಿ (ಕಲೆ), ಅಬ್ದುಲ್ ಖಾದರ್ ನಾದಕಟ್ಟಿನ್, ಅಮೈ ಮಹಾಲಿಂಗ ನಾಯ್ಕ (ಕೃಷಿ), ಡಾ. ಸಿದ್ದಲಿಂಗಯ್ಯ (ಸಾಹಿತ್ಯ ಮತ್ತು ಶಿಕ್ಷಣ) ಕ್ಷೇತ್ರದಲ್ಲಿ ಪ್ರಶಸ್ತಿ ಪಡೆದಿದ್ದಾರೆ.
ಅಬ್ದುಲ್ ಖಾದರ್ ನಾದಕಟ್ಟಿನ್ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ರೈತರು. ಕೃಷಿ ವಿಜ್ಞಾನಿಗಳೆಂದೇ ಪ್ರಸಿದ್ಧಿ ಪಡೆದಿದ್ದಾರೆ. ಬಿತ್ತನೆ ಮಾಡುವ ಕೂರಿಗೆ ಸಂಶೋಧನೆ ಮಾಡಿದ ಅವರಿಗೆ ದೇಶದ ಅತ್ಯುನ್ನತ ಪ್ರಶಸ್ತಿ ಗೌರವ ಸಿಕ್ಕಿದೆ.
ಅಮೈ ಮಹಾಲಿಂಗ ನಾಯ್ಕ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮೈ ನಿವಾಸಿ. ಪ್ರಗತಿಪರ ಕೃಷಿಕರು, ಕೃಷಿ ಕಾಯಕದ ಮೂಲಕ ಸ್ವಾವಲಂಬಿ ಜೀವನ ಸಾಧ್ಯ ಎಂದು ತೋರಿಸಿಕೊಟ್ಟವರು.
ಹಿಂದಿನ ತಲೆಮಾರಿನ ಜನರಂತೆ ಸುರಂಗ ವ್ಯವಸ್ಥೆ ನೀರಿನಲ್ಲಿ ನಂಬಿಕೆ ಇಟ್ಟು, ವಿದ್ಯುತ್ ರಹಿತವಾಗಿ ಗ್ರಾವಿಟಿ ನೆರವಿನಲ್ಲಿ ನೀರು ತಂದು ಕೃಷಿ ಮಾಡುತ್ತಿರುವವರು. ಏಕಾಂಗಿಯಾಗಿ 7 ಸುರಂಗಳಗಳನ್ನು ಕೊರೆದ ಸಾಹಸಿ ಮಹಾಲಿಂಗ ನಾಯ್ಕ.
ಮುಖ್ಯಮಂತ್ರಿಗಳ ಅಭಿನಂದನೆ; ಪದ್ಮ ಪ್ರಶಸ್ತಿಗೆ ಆಯ್ಕೆಯಾದ ಕರ್ನಾಟಕದ ಸಾಧಕರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದ್ದಾರೆ. "ಪದ್ಮಶ್ರೀ ಪುರಸ್ಕ್ರತರಿಗೆ ಹಾರ್ದಿಕ ಅಭಿನಂದನೆಗಳು. ನಾಡಿನ ಸಮಸ್ತ ಜನತೆಯ ಪರವಾಗಿ ಕೇಂದ್ರ ಸರ್ಕಾರಕ್ಕೆ ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ.
"ವಿವಿಧ ಕ್ಷೇತ್ರದಲ್ಲಿ ಸಾಧನೈಗೈದ ಕನ್ನಡದ ಹೆಮ್ಮೆಯ ಸಾಧಕರುಗಳಾದ ಶ್ರೀ ಹೆಚ್. ಆರ್. ಕೇಶವಮೂರ್ತಿ, ಶ್ರೀ ಅಬ್ದುಲ್ ಖಾದಿರ್ ನಾಡಕಟ್ಟಿನ್, ಶ್ರೀ ಅಮಾಯಿ ಮಹಾಲಿಂಗ ನಾಯ್ಕ್ ಹಾಗೂ ಡಾ. ಸಿದ್ದಲಿಂಗಯ್ಯ (ಮರಣೋತ್ತರ) ಅವರಿಗೆ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿರುವುದು ಅತೀವ ಸಂತಸ ತಂದಿದೆ" ಎಂದು ಹೇಳಿದ್ದಾರೆ.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Coconut: ರೈತರ ನಿದ್ದೆಗೆಡಿಸಿದ ತೆಂಗಿನ ರೋಗ: ಶೇ.14ರಷ್ಟು ತೋಟಗಳಿಗೆ ಕೀಟಬಾಧೆ; ತಜ್ಞರ ತಂಡ ಪರಿಶೀಲನೆ -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು?












Click it and Unblock the Notifications