Get Updates
Get notified of breaking news, exclusive insights, and must-see stories!

SL Bhairappa: ಕನ್ನಡದ ಖ್ಯಾತ ಬರಹಗಾರ ಎಸ್.ಎಲ್. ಭೈರಪ್ಪ ಇನ್ನಿಲ್ಲ...

ಕನ್ನಡ ಸಿನಿಮಾ ರಂಗದಲ್ಲಿ ಸಾಲು ಸಾಲು ಸಾವಿನ ಸುದ್ದಿ ಕೇಳಿ ಅಭಿಮಾನಿಗಳು ಆತಂಕ & ಭಯದಲ್ಲೇ ಇರುವಾಗ ಸಾಹಿತ್ಯ ಲೋಕಕ್ಕೂ ಇದೀಗ ಸಾವಿನ ಕಂಟಕ ಎದುರಾಗಿದೆ. ಕನ್ನಡ ಸಾಹಿತ್ಯ ಲೋಕಕ್ಕೆ ಬರೋಬ್ಬರಿ 3,000 ವರ್ಷಗಳ ಇತಿಹಾಸ ಇದ್ದು, ಕನ್ನಡಿಗರು ತಮ್ಮ ಸಾಹಿತ್ಯ ರಚನೆಗೆ ಜಗತ್ತಿನಾದ್ಯಂತ ಖ್ಯಾತಿ ಗಳಿಸಿದ್ದಾರೆ. ಜಗತ್ತಿನ ಲಿಪಿಗಳ ರಾಣಿ ಅಂತಾ ಕರೆಸಿಕೊಳ್ಳುವ ಕನ್ನಡ ಭಾಷೆಯಲ್ಲಿ ತಮ್ಮದೇ ಶೈಲಿಯ ಬರಹಗಳ ಮೂಲಕ ಹೆಸರು & ಖ್ಯಾತಿ ಗಳಿಸಿದ್ದ ಸಾಹಿತಿ ಎಸ್.ಎಲ್. ಭೈರಪ್ಪ ಅವರ ಕೋಟಿ ಕೋಟಿ ಅಭಿಮಾನಿಗಳಿಗೆ ಇಂದು ಆಘಾತವೇ ಎದುರಾಗಿದೆ...

ಹೌದು, ಜ್ಞಾನಪೀಠ ಪ್ರಶಸ್ತಿಯೇ ಇರಲಿ ಅಥವಾ ಸಾಹಿತ್ಯಕ್ಕೆ ಸಿಗುವ ಇನ್ಯಾವುದೇ ಅವಾರ್ಡ್ ಇರಲಿ ಅಲ್ಲಿ ಕನ್ನಡಿಗರು ಸದ್ದು ಮಾಡುವುದು ಖಂಡಿತ. ಅದರಲ್ಲೂ ಕನ್ನಡ ಸಾಹಿತ್ಯವನ್ನು ಪರಭಾಷಿಕರು ಕೂಡ ತಲೆಬಾಗಿ ಒಪ್ಪಿಕೊಳ್ಳುತ್ತಾರೆ. ಕನ್ನಡಿಗರ ಸಾಹಿತ್ಯ ಅಷ್ಟೊಂದು ಹೆಸರು ಮಾಡಿದ್ದು, ಜಗತ್ತಿನ ಮೂಲೆ ಮೂಲೆಗೂ ಹಬ್ಬುತ್ತಿದೆ. ಯುರೋಪ್, ಅಮೆರಿಕ, ಆಸ್ಟ್ರೇಲಿಯಾ ಸೇರಿದಂತೆ ಪ್ರಪಂಚದ ಹಲವು ದೇಶಗಳಲ್ಲಿ ಕನ್ನಡ ಸಾಹಿತ್ಯ ಓದುವ ಅಭಿಮಾನಿಗಳು ಇದ್ದಾರೆ. ಆದರೆ ಇಂತಹ ಮಹಾನ್ ಸಾಹಿತ್ಯ ಭಂಡಾರ ಹೊಂದಿರುವ ಕನ್ನಡ ಭಾಷಾ ಇತಿಹಾಸದಲ್ಲಿ ಎಂದೂ ಮರೆಯಲಾಗದ ಕಹಿ ಘಟನೆಯೂ ಇಂದು ಸಂಭವಿಸಿದೆ...

Padma Bhushan Awardee Senior Writer SL Bhairappa Passes Away

ಕನ್ನಡದ ಖ್ಯಾತ ಬರಹಗಾರ ಇನ್ನಿಲ್ಲ...

ಹೌದು, ಪದ್ಮಭೂಷಣ ಪ್ರಶಸ್ತಿ ವಿಜೇತರಾದ ಕನ್ನಡದ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರು ಇಂದು ಕನ್ನಡಿಗರನ್ನು ಬಿಟ್ಟು ಹೋಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರ ಆಸ್ಪತ್ರೆಯಲ್ಲಿ ಸಾಹಿತಿ ಎಸ್.ಎಲ್. ಭೈರಪ್ಪ ಅವರು ಕೊನೆಯುಸಿರು ಎಳೆದಿದ್ದಾರೆ. ವಯೋಸಹಜ ಕಾಯಿಲೆ ಹಿನ್ನೆಲೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಹೀಗಾಗಿಯೇ ಕಳೆದ 3 ತಿಂಗಳಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದ ಕನ್ನಡದ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರಿಗೆ ಚಿಕಿತ್ಸೆ ನೀಡಲಾಗ್ತಿತ್ತು. ಆದರೆ ಅವರೀಗ ಚಿಕಿತ್ಸೆ ಫಲಿಸದೆ ತಮ್ಮ 94ನೇ ವಯಸ್ಸಿನಲ್ಲಿ ಕೊನೆಯುಸಿರು ಎಳೆದಿದ್ದಾರೆ. ಈ ಸುದ್ದಿ ಕನ್ನಡ ಸಾಹಿತ್ಯ ಲೋಕದಲ್ಲಿ ಮಾತ್ರವಲ್ಲ ಇಡೀ ಕರ್ನಾಟಕದಲ್ಲಿ ನೋವಿನ ವಾತಾವರಣ ಸೃಷ್ಟಿಸಿದೆ.

ಪಿಎಂ ಮೋದಿ & ಸಿಎಂ ಸಿದ್ದರಾಮಯ್ಯ...

ಕನ್ನಡದ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರು ಇನ್ನಿಲ್ಲ ಎಂಬ ಸುದ್ದಿ ದೇಶಾದ್ಯಂತ ಭಾರಿ ನೋವು ತರಿಸಿದೆ. ಓದುಗರಿಗೆ ಮಾತ್ರವಲ್ಲದೆ ರಾಜಕೀಯ ನಾಯಕರಿಗೂ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರು ಇಷ್ಟವಾಗುತ್ತಿದ್ದರು. ತಮ್ಮ ನೇರ ನುಡಿಗಳಿಂದಲೂ ಸಾಹಿತಿ ಎಸ್.ಎಲ್. ಭೈರಪ್ಪ ಅವರು ಹೆಸರಾಗಿದ್ದರು. ಆದರೆ ಇದೀಗ ಎಸ್.ಎಲ್. ಭೈರಪ್ಪ ಅವರ ನಿಧನದ ಸುದ್ದಿಯು ಸಂಚಲನ ಸೃಷ್ಟಿಸಿದೆ. ಪಿಎಂ ನರೇಂದ್ರ ಮೋದಿ ಅವರು & ಸಿಎಂ ಸಿದ್ದರಾಮಯ್ಯ ಅವರು ಇದೀಗ ಕನ್ನಡದ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಕರ್ನಾಟಕ ಸೇರಿದಂತೆ ಇಡೀ ದೇಶಾದ್ಯಂತ ಗಣ್ಯರು ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಈ ನಷ್ಟವನ್ನು ಕನ್ನಡ ಸಾಹಿತ್ಯ ಲೋಕ ಭರಿಸುವಂತಾಗಲಿ ಎಂದು ಪ್ರಾರ್ಥಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+