ಪ್ರಾಣ ಬಿಡುವುದಕ್ಕೆ ರೆಡಿಯಾಗಿದ್ದೇವೆ, ಮೀಸಲಾತಿ ಬಿಡಲ್ಲ: ವಚನಾನಂದ ಸ್ವಾಮೀಜಿ ಎಚ್ಚರಿಕೆ
ಬೆಂಗಳೂರು, ಡಿಸೆಂಬರ್ 6: ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರಕಾರ 2 ಎ ಮೀಸಲಾತಿ ಕೊಡದಿದ್ದರೆ ಪ್ರಾಣ ಬಿಡುವುದಕ್ಕೆ ರೆಡಿಯಾಗಿದ್ದೇವೆ, ಮೀಸಲಾತಿ ಬಿಡಲ್ಲ ಎಂದು ಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಮಹಾಸ್ವಾಮಿಗಳು ಹೇಳಿದ್ದಾರೆ.
ಈ ಕುರಿತು ಮಂಗಳವಾರ ಮುಖ್ಯಮಂತ್ರಿಗಳ ಸರ್ಕಾರಿ ಗೃಹದಲ್ಲಿ ಲಿಂಗಾಯತ ಪಂಚಮ ಸಾಲಿಗೆ 2 ಎ ಮೀಸಲಾತಿ ಕೊಡಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಚರ್ಚೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿ, ನಾನು ಸಿಎಂಗೆ ಬಹಳ ಸ್ಪಷ್ಟವಾಗಿ ಹೇಳಿದ್ದೇನೆ. ನಾವು ಉಗ್ರ ಆಗಬಾರದಂದ್ರೆ ಶೀಘ್ರವೇ ಮೀಸಲಾತಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಾಣ ಬಿಡುವುದಕ್ಕೆ ರೆಡಿಯಾಗಿದ್ದೇವೆ, ಮೀಸಲಾತಿ ಬಿಡಲ್ಲ. ಮೀಸಲಾತಿ ವಿಚಾರಕ್ಕೆ ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದುವರೆಗೆ ಕೂಡ ಸಮೀಕ್ಷೆ ಆಗಿರಲಿಲ್ಲ, ಹೀಗಾಗಿ ನಾವು ಯಾವುದೇ ನಿರ್ಧಾರವನ್ನು ಕೈಗೊಂಡಿರಲಿಲ್ಲ ಈಗ ಎಲ್ಲಾ ಜಿಲ್ಲೆಯ ಸಮೀಕ್ಷೆ ಆಗಿದೆ. ವಿಧಾನಸಭೆ ಅಧಿವೇಶದ ಒಳಗಾಗಿ ವರದಿಯನ್ನು ತೆಗೆದುಕೊಂಡು ಮೀಸಲಾತಿ ನೀಡಬೇಕು. ಮುಖ್ಯಮಂತ್ರಿಗಳಿಗೆ ಬಹಳ ಸ್ಪಷ್ಟವಾಗಿ ತಿಳಿಸಿದ್ದೇವೆ. ಇಲ್ಲವೇ ಅಂದ್ರೆ ಪಡಿ ಇಲ್ಲವೇ ಮಡಿ ಹೋರಾಟಕ್ಕೆ ಮುಂದಾಗುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಮೀಸಲಾತಿ ವಿಚಾರದಲ್ಲಿ ನಾವೀಗ ಕೊನೆ ಹಂತದಲ್ಲಿ ಇದ್ದೇವೆ. ಇನ್ನು ಸ್ವಲ್ಪ ದಿನದಲ್ಲಿ ಎಲೆಕ್ಷನ್ ಬರುತ್ತೆ, ಚುನಾವಣೆ ನೀತಿ ಸಂಹಿತೆಯ ನೆಪ ಆಗ್ಬಾರ್ದು. 28 ವರ್ಷಗಳ ಹೋರಾಟ ಮಾಡಿ ಸಾಕಾಗಿದೆ. ಸಚಿವರು, ಶಾಸಕರು ಇಲ್ಲಿಯವರೆಗೆ ಹೋರಾಟ ಮಾಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಅವರು ಮೀಸಲಾತಿ ಕೊಡ್ತಾರಂತೆ ಸಂಪೂರ್ಣ ವಿಶ್ವಾಸ ನಮಗಿದೆ. ಶೀಘ್ರವೇ ವರದಿ ತರಿಸಿಕೊಳ್ಳುತ್ತೇನೆ ಅಂತ ಮುಖ್ಯಮಂತ್ರಿಗಳು ಹೇಳಿದ್ದಾರೆ.

ವರದಿ ನಮಗೂ ಆಧಾರ ಸರ್ಕಾರಕ್ಕೂ ಆಧಾರ. ವರದಿ ಇಲ್ಲಾಂದ್ರೆ ಅನೇಕ ತೊಂದರೆಗಳು ಆಗ್ತಾವೆ, ನಮ್ಮ ಸಮುದಾಯದ ನಾಯಕರು ಅವರ ಕ್ಷೇತ್ರದಲ್ಲಿ ಮೂರು ಬಾರಿ ಬಸವರಾಜ ಬೊಮ್ಮಾಯಿ ಅವರನ್ನು ಶಾಸಕರನ್ನಾಗಿ ಮಾಡಿದ್ದಾರೆ. ಅವರಿಗೆ ಕೂಡ ಸಮಾಜದ ಬಗ್ಗೆ ಅರಿವಿದೆ, ಹೀಗಾಗಿ ಆದಷ್ಟು ಬೇಗ ಪಂಚಮಸಾಲಿ ಮೀಸಲಾತಿ ನೀಡಲಿದ್ದಾರೆ. ಅಕಸ್ಮಾತು ಮೀಸಲಾತಿ ಕೊಡಲಿಲ್ಲ ಅಂದ್ರೆ ಮತ್ತೆ ಸುದ್ದಿ ಗೋಷ್ಠಿ ಮಾಡಿ ಮುಂದಿನ ನಿರ್ಧಾರ ತಿಳಿಸುತ್ತೇನೆ ಎಂದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications