ರಾಜ್ಯದಲ್ಲಿ ತಾರಕಕ್ಕೇರಿದ ಮೀಸಲಾತಿ ಸಂಘರ್ಷ: ಸಂಕಷ್ಟಕ್ಕೆ ಸಿಲುಕಲಿದೆಯೇ ಬಿಜೆಪಿ ಸರ್ಕಾರ?
ಬೆಂಗಳೂರು, ಡಿಸೆಂಬರ್ 23: ಚುನಾವಣೆ ಹೊಸ್ತಿಲಲ್ಲಿ ಇರುವಾಗ ರಾಜ್ಯದಲ್ಲಿ ಮೀಸಲಾತಿ ಸಂಘರ್ಷ ತಾರಕಕ್ಕೇರಿದೆ. ಮೀಸಲಾತಿ ಹೆಚ್ಚಿಸಲೇಬೇಕೆಂದು ಪ್ರಬಲ ಸಮುದಾಯಗಳು ಪಟ್ಟು ಹಿಡಿದಿವೆ. ಮೀಸಲಾತಿ ನೀಡಿದ್ದದ್ದರೆ ಸರ್ಕಾರದ ಪರ ಸಿಡಿದೇಳುವುದಾಗಿಯೂ ಎಚ್ಚರಿಕೆ ನೀಡಿವೆ. ಇದು ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಸಂಕಷ್ಟಕ್ಕೆ ಸಿಲುಕಿಸಿದೆ.
ಪಂಜಮಸಾಲಿ ಸಮುದಾಯದ ಬೇಡಿಕೆ
ಲಿಂಗಾಯತ ಸಮುದಾಯದ ಪ್ರಬಲ ಜಾತಿಯೆಂದೇ ಪರಿಗಣಿಸಲ್ಪಡುವ ಪಂಚಮಸಾಲಿ ಸಮುದಾಯವು ನಿನ್ನೆಯಷ್ಟೇ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಂಡಿತ್ತು. ಕಳೆದ ಕೆಲ ವರ್ಷಗಳಿಂದ ಈ ಸಮುದಾಯವು 2ಎ ಪ್ರವರ್ಗಕ್ಕೆ ಸೇರಿಸಬೇಕೆಂದು ಹೋರಾಡುತ್ತಲೇ ಬಂದಿದೆ. ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ಈ ಹೋರಾಟದ ನೇತೃತ್ವ ವಹಿಸಿದ್ದಾರೆ. ಈ ಹೋರಾಟದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ನ ಪಂಚಮಸಾಲಿ ಸಮುದಾಯಕ್ಕೆ ಸೇರಿದ ನಾಯಕರು ಮುಂಚೂಣಿಯಲ್ಲಿದ್ದಾರೆ. ವಿಧಾನಸಭಾ ಕಲಾಪ ನಡೆಯುತ್ತಿರುವ ಈ ಸಂದರ್ಭದಲ್ಲಿ ಪಂಚಮಸಾಲಿ ಸಮುದಾಯದ ಪ್ರತಿಭಟನೆ ಸರ್ಕಾರವನ್ನು ಪೇಚಿಗೆ ಸಿಲುಕಿಸಿದೆ. ಡಿಸೆಂಬರ್ 29ರಂದು ಪಂಚಮಸಾಲಿ ವರ್ಗಕ್ಕೆ ಮೀಸಲಾತಿ ಕೊಡುವ ಬಗ್ಗೆ ಘೋಷಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಒಕ್ಕಲಿಗ ಸಮುದಾಯದ ಬೇಡಿಕೆ
ಅತ್ತ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಘೋಷಿಸುವ ಬಗ್ಗೆ ಮುಖ್ಯಮಂತ್ರಿಗಳು ಆಶ್ವಾಸನೆ ಕೊಟ್ಟಿದ್ದಾರೆ. ಇತ್ತ ಒಕ್ಕಲಿಗ ಸಮುದಾಯವೂ ಮೀಸಲಾತಿಗೆ ಪಟ್ಟು ಹಿಡಿದಿದೆ. ಈ ವಿಚಾರವಾಗಿ ಬಿಜೆಪಿಯ ಒಕ್ಕಲಿಗ ನಾಯಕರು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಪಂಚಮಸಾಲಿ ಹಾಗೂ ಒಕ್ಕಲಿಗ ಸಮುದಾಯಗಳು ರಾಜ್ಯ ರಾಜಕಾರಣದಲ್ಲಿ ನಿರ್ಣಾಯಕ ಸಮುದಾಯಗಳೆಂದೇ ಹೇಳಬಹುದು. ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಬೇಕೆಂದು ಕಾಂಗ್ರೆಸ್ ನಾಯಕರು ಸಹ ಒತ್ತಾಯ ಮಾಡಿದ್ದಾರೆ.

ಕಾಂಗ್ರೆಸ್ ನಾಯಕರಿಂದಲೂ ಮೀಸಲಾತಿ ಬೇಡಿಕೆ
'ಒಕ್ಕಲಿಗರ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ಜನವರಿ 23ರ ಅಂತಿಮ ಗಡುವು ನೀಡಲಾಗಿದೆ. ಒಂದು ವೇಳೆ ನಮ್ಮ ಬೇಡಿಕೆ ಈಡೇರದಿದ್ದಲ್ಲಿ, ಬೀದಿಗಿಳಿದು ಉಗ್ರ ಪ್ರತಿಭಟನೆ ಮಾಡಲಾಗುತ್ತದೆ' ಎಂದು ಕಾಂಗ್ರೆಸ್ನ ಒಕ್ಕಲಿಗ ನಾಯಕರು ಎಚ್ಚರಿಕೆ ನೀಡಿದ್ದಾರೆ. ಇದು ರಾಜ್ಯ ಬಿಜೆಪಿ ಸರ್ಕಾರವನ್ನು ಪೇಚಿಗೆ ಸಿಲುಕಿಸಿದೆ. ಒಂದು ವೇಳೆ ಪ್ರಬಲ ಸಮುದಾಯಗಳಿಗೆ ಮೀಸಲಾತಿ ನೀಡಿದರೆ, ಹಿಂದುಳಿದ ಜಾತಿಗಳ ಸಂಘ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ತಿಳಿಸಿದೆ. ಈ ಸಂಘರ್ಷಮಯ ವಾತಾವರಣವನ್ನು ಸಿಎಂ ಬೊಮ್ಮಾಯಿ ಹೇಗೆ ನಿಭಾಯಿಸಲಿದ್ದಾರೆ ಎಂಬುದೇ ಕುತೂಹಲದ ಸಂಗತಿಯಾಗಿದೆ.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications