ಪಂಚಮಸಾಲಿ ಮತ್ತು ಒಕ್ಕಲಿಗ ಮೀಸಲಾತಿ; ಯಾವುದೇ ಅನುಮಾನ ಬೇಡ: ಸಚಿವ ಆರ್.ಅಶೋಕ್
ಬೆಂಗಳೂರು, ಡಿಸೆಂಬರ್ 30: ಪಂಚಮಸಾಲಿ ಮತ್ತು ಒಕ್ಕಲಿಗ ಸಮುದಾಯ ಮೀಸಲಾತಿ ನೀಡುವ ವಿಚಾರದಲ್ಲಿ ಯಾವುದೇ ಅನುಮಾನ ಬೇಡ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಈ ಕುರಿತು ಶುಕ್ರವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಮತ್ತು ಒಕ್ಕಲಿಗ ಸಮುದಾಯ ಮೀಸಲಾತಿಗಾಗಿ ಒತ್ತಾಯಿಸಿದ ಬೆನ್ನಲ್ಲೆ ಸರ್ಕಾರ ಎರಡು ಹೊಸ ಕ್ಯಾಟಗರಿ ಸೃಷ್ಠಿ ಮಾಡಿ ಮೀಸಲಾತಿ ನೀಡಲು ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಹೊಸ ಮೀಸಲಾತಿಯಿಂದ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ಸಿಗಲಿದೆ. 2ಸಿ 2 ಡಿ ಕ್ಯಾಟಗರಿಗೆ ಶಿಕ್ಷಣ ಔದ್ಯೋಗಿಕ ಮಿಸಲಾತಿ ಸಿಗಲಿದೆ. ಯಾರಿಗೂ ಸಮಸ್ಯೆಯಾಗದಂತೆ ಕ್ಯಾಟಗರಿ ಸೃಷ್ಠಸಲಾಗಿದೆ. ಕಾನೂನು ತೊಡಗು ಬಾರದಂತೆ ಪರಿಶೀಲಿಸಲಾಗಿದೆ ಎಂದು ತಿಳಿಸಿದರು.

ಲಿಂಗಾಯತ ಸಮುದಾಯಕ್ಕೆ 2ಡಿ ಕ್ಯಾಟಗಿರಿ ಹಾಗೂ ಒಕ್ಕಲಿಗ ಸಮುದಾಯಕ್ಕೆ 2ಸಿ ಕ್ಯಾಟಗಿರನ್ನು ರಚನೆ ಮಾಡಲು ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
ಲಿಂಗಾಯತ, ಒಕ್ಕಲಿಗರಿಗೆ 2ಸಿ, 2ಡಿ ಮೀಸಲಾತಿ ಕೊಟ್ಟ ಸರ್ಕಾರ
ರಾಜ್ಯ ಸರ್ಕಾರವು 2023 ರ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದಲ್ಲಿ ಮೀಸಲಾತಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ. ರಾಜ್ಯ ಸರ್ಕಾರ ಕೊನೆಗೂ ಪಂಚಮಸಾಲಿ ಸೇರಿದಂತೆ ವೀರಶೈವ ಲಿಂಗಾಯತ ಸಮುದಾಯಕ್ಕೆ ಮತ್ತು ಒಕ್ಕಲಿಗ ಸಮುದಾಯಕ್ಕೆ ಪ್ರತ್ಯೇಕ ಪ್ರವರ್ಗ ಸೃಷ್ಟಿಸಿ, ಮೀಸಲಾತಿ ನೀಡುವ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ.
ಈ ಕುರಿತು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಮಾತನಾಡಿ, ಪಂಚಮಸಾಲಿ ಹಾಗೂ ಒಕ್ಕಲಿಗ ಸಮುದಾಯದ ಮೀಸಲಾತಿ ಬೇಡಿಕೆ ಹಿನ್ನೆಲೆಯಲ್ಲಿ 2 ಎ ಹಾಗೂ 2 ಬಿ ಜೊತೆಗೆ 2 ಸಿ ಹಾಗೂ 2 ಡಿ ಪ್ರವರ್ಗ ಸೃಷ್ಟಿ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದ್ದು, 3 ಎ ನಲ್ಲಿ ಇರುವ ಒಕ್ಕಲಿಗರನ್ನು 2 ಸಿ ಗೆ ಸೇರ್ಪಡೆ ಹಾಗೂ 3 ಬಿ ಯಲ್ಲಿ ಇದ್ದ ಲಿಂಗಾಯತರನ್ನು 2 ಡಿ ಗೆ ಸೇರ್ಪಡೆ ಮಾಡಲು ತೀರ್ಮಾನ ಮಾಡಲಾಗಿದೆ. ಆದರೆ ಎಷ್ಟು ಪ್ರಮಾಣದಲ್ಲಿ ಮೀಸಲಾತಿ ನೀಡಬೇಕು ಎಂಬುದನ್ನು ಹಿಂದುಳಿದ ಹಿಂದುಳಿದ ವರ್ಗಗಳ ಆಯೋಗದ ವರದಿ ಬಂದ ಬಳಿಕ ನಿರ್ಧಾರ ಮಾಡಲು ಸಂಪುಟ ಸಭೆ ತೀರ್ಮಾನ ಮಾಡಿದೆ ಎಂದು ಹೇಳಿದರು.

ಇನ್ನೂ ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿಯನ್ನು ರಾಜ್ಯ ಸರ್ಕಾರ ಒಪ್ಪಿಕೊಂಡಿದೆ. 2 ಎ ನಲ್ಲಿ 15% ಜನಸಂಖ್ಯೆ ಇದ್ದು, ಅವರಿಗೆ ನೀಡಲಾಗಿರುವ ಮೀಸಲಾತಿಯನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡದಿರಲು ತೀರ್ಮಾನ ಮಾಡಲಾಗಿದೆ. ಅದೇ ರೀತಿ 2 ಬಿ ಪ್ರವರ್ಗದಲ್ಲಿಯೂ ಯಾವುದೇ ಬದಲಾವಣೆ ಮಾಡದೆ ಇರಲು ನಿರ್ಧಾರ ಮಾಡಲಾಗಿದೆ. 3 ಎ ನಲ್ಲಿ ಇದ್ದ ಒಕ್ಕಲಿಗರನ್ನು 2 ಸಿ ಗೆ ತರಲು ಹಾಗೂ 3 ಬಿ ನಲ್ಲಿ ಇದ್ದ ಲಿಂಗಾಯತರನ್ನು 2 ಡಿ ಪ್ರವರ್ಗಕ್ಕೆ ಸೇರ್ಪಡೆ ಮಾಡಲಾಗುವುದು. 2 ಸಿ ಹಾಗೂ 2 ಡಿ ನಲ್ಲಿ 3 ಎ ಹಾಗೂ 3 ಬಿ ನಲ್ಲಿ ಇದ್ದ ಸವಲತ್ತುಗಳನ್ನು ಈವರೆಗೆ ಅನುಭವಿಸುತ್ತಿದ್ದರು ಅದನ್ನು ಮುಂದುವರಿಸಿಕೊಂಡು ಹೋಗುತ್ತೇವೆ ಎಂದರು.
ಇನ್ನು, Ews 10% ಮೀಸಲಾತಿಯ ಹೆಚ್ಚಳ ಮಾಡಲು ಅವಕಾಶ ಇದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ 10% ಮೀಸಲಾತಿ ನೀಡಲು ನಿರ್ಧಾರ ಮಾಡಲಾಗಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರುವ ಜನರ ಸಂಖ್ಯೆಯಲ್ಲಿ ಎಷ್ಟು ಶೇಕಡಾ ಅವರಿಗೆ ನೀಡಬಹುದು ಎಂದು ನಿರ್ಧಾರ ಮಾಡಿ ಉಳಿದದ್ದನ್ನು 2 ಸಿ ಹಾಗೂ 2 ಡಿಗೆ ಶಿಕ್ಷಣ ಹಾಗೂ ಉದ್ಯೋಗಕ್ಕಾಗಿ ನೀಡಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.












Click it and Unblock the Notifications