ಏಷ್ಯಾ ಬುಕ್ ಆಫ್ ರೆಕಾರ್ಡ್ಸ್, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಎಚ್ಡಿ ಕುಮಾರಸ್ವಾಮಿಗೆ ಹಾಕಿದ ಬೃಹತ್ ಹಾರಗಳು
ತುಮಕೂರು, ಡಿಸೆಂಬರ್ 30: ಕಳೆದ ನವೆಂಬರ್ 18 ರಿಂದ ರಾಜ್ಯಾದ್ಯಂತ ಪಂಚರತ್ನ ರಥಯಾತ್ರೆ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೊಸ ದಾಖಲೆಗೆ ಪಾತ್ರರಾಗಿದ್ದಾರೆ.
ಪಂಚರತ್ನ ರಥಯಾತ್ರೆಯಲ್ಲಿ ರಾಜ್ಯದ ಜನರು ವಿವಿಧ ಬಗೆಯ ಬೃಹತ್ ಹಾರಗಳನ್ನು ಹಾಕಿ ಗೌರವಿಸಿದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿಗಳು ' ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ' ಹಾಗೂ ' ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ' ದಾಖಲೆಗೆ ಪಾತ್ರರಾಗಿದ್ದಾರೆ.
ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ನಿನ್ನೆ ಇಡೀ ದಿನ ಯಾತ್ರೆ ನಡೆಸಿ ಕಳೆದ ರಾತ್ರಿ ಕ್ಷೇತ್ರದ ಯಲ್ಲಾಪುರದಲ್ಲಿ ಮಾಜಿ ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯ ಹೂಡಿದ್ದರು. ಆ ಗ್ರಾಮಕ್ಕೆ ಆಗಮಿಸಿದ ' ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ' ತೀರ್ಪುಗಾರರಾದ ಮೋಹಿತ್ ಕುಮಾರ್ ವತ್ಸ ಹಾಗೂ ' ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ' ತೀರ್ಪುಗಾರರಾದ ಆರ್.ಹರೀಶ್ ಅವರು ಮಾಜಿ ಮುಖ್ಯಮಂತ್ರಿ ಅವರಿಗೆ ಎರಡೂ ದಾಖಲೆಗಳ ಪತ್ರಗಳು ಮತ್ತು ಮೆಡಲ್ ಗಳನ್ನು ನೀಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ' ತೀರ್ಪುಗಾರರಾದ ಮೋಹಿತ್ ಕುಮಾರ್ ಅವರು, ಇದೊಂದು ವಿಶೇಷವಾದ ದಾಖಲೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ರಾಜಕಾರಣಿಯೊಬ್ಬರು ಗೌರವಕ್ಕೆ ಪಾತ್ರರಾಗಿರುವುದು ಹಾಗೂ ರೈತರೇ ಬೇಳೆಗಳನ್ನೇ ಬೃಹತ್ ಹಾರಗಳನ್ನಾಗಿ ತಯಾರಿಸಿ ಅವರಿಗೆ ಹಾಕಿ ಸ್ವಾಗತಿಸುತ್ತಿರುವುದು ಸೋಜಿಗ, ಮೊದಲ ದಾಖಲೆ ಎಂದರು.
ನಾವು ಸದಾ ದಾಖಲೆಗಳನ್ನು ಹುಡುಕುತ್ತಿರುತ್ತೇವೆ. ದೇವನಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿ ನಡೆದ ಪಂಚರತ್ನ ರಥಯಾತ್ರೆ ಸಂದರ್ಭದಲ್ಲಿ ಕುಮಾರಸ್ವಾಮಿ ಅವರಿಗೆ ಕೃಷಿ ಬೆಳೆಗಳಿಂದ ತಯಾರಿಸಿದ ಭಾರೀ ಹಾರಗಳನ್ನು ಹಾಕಿ ಬರಮಾಡಿಕೊಂಡ ಬಗ್ಗೆ ಮಾಹಿತಿ ಸಿಕ್ಕಿತು. ಅಂದಿನಿಂದಲೇ ನಾವು ಖುದ್ದು ಪರಿಶೀಲನೆ ಮಾಡಿದೆವು. ನಿನ್ನೆಯೂ ನಾವು ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ರಥಯಾತ್ರೆಯ ಜತೆಗೆ ಪ್ರವಾಸ ಮಾಡಿದೆವು. ಬೃಹತ್ ಹಾರಗಳ ಗೌರವಕ್ಕೆ ಭಾಜನರಾದ ಏಕೈಕ ವ್ಯಕ್ತಿ ಕುಮಾರಸ್ವಾಮಿ ಅವರು ಎಂದು ಮೋಹಿತ್ ಕುಮಾರ್ ಮಾಹಿತಿ ನೀಡಿದರು.
ರೈತರಿಗೆ, ಕಾರ್ಯಕರ್ತರಿಗೆ ಸಮರ್ಪಣೆ
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಇದು ನನಗೆ ಅಚ್ಚರಿಯ ಗೌರವ. ಈ ದಾಖಲೆಗಳನ್ನು ನನ್ನ ನಾಡಿನ ರೈತರು ಹಾಗೂ ನಮ್ಮ ಪಕ್ಷದ ಕಾರ್ಯಕರ್ತರಿಗೆ ಸಮರ್ಪಣೆ ಮಾಡುತ್ತೇನೆ ಎಂದರು.

ನಾನು ರಥಯಾತ್ರೆ ಮಾಡುತ್ತಿರುವ ಎಲ್ಲಾ ಕಡೆ ಜನರು ನನ್ನನ್ನು ಪ್ರೀತಿಯಿಂದ ಸ್ವಾಗತ ಮಾಡುತ್ತಿದ್ದಾರೆ. ದೊಡ್ಡ ದೊಡ್ಡ ಹಾರಗಳನ್ನು ಹಾಕಿ ಸ್ವಾಗತ ಮಾಡುತ್ತಿದ್ದಾರೆ. ಆ ಜನರ ಪ್ರೀತಿಯಿಂದ ಮಾತ್ರ ಈ ದಾಖಲೆ ನಿರ್ಮಾಣವಾಗಲು ಸಾಧ್ಯವಾಗಿದೆ. ಹೀಗಾಗಿ ಈ ಎಲ್ಲಾ ದಾಖಲೆಯ ಹೆಗ್ಗಳಿಕೆ ಅವರಿಗೇ ಸಲ್ಲಬೇಕು ಎಂದು ಮಾಜಿ ಮುಖ್ಯಮಂತ್ರಿ ಅವರು ತಿಳಿಸಿದರು.
ಪಂಚರತ್ನ ಯಾತ್ರೆ ಆರಂಭವಾಗಿ 33ನೇ ದಿನ ಪೂರೈಸಿದೆ. ಈ ಯಾತ್ರೆಯಲ್ಲಿ ಜನರು ಪ್ರೀತಿಯಿಂದ ಹಾಕಿದ ಹಾರಗಳು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಮತ್ತು ಇಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲಾಗಿರುವುದು ಸಂತಸ ಉಂಟು ಮಾಡಿದೆ ಎಂದು ತಿಳಿಸಿದರು.
ಇನ್ನೊಂದೆಡೆ ಪಂಚರತ್ನ ಯಾತ್ರೆ ಇದೀಗ 34ನೆ ದಿನಕ್ಕೆ ಕಾಲಿಟ್ಟಿದೆ. ಹಾರಗಳ ಸಂಖ್ಯೆ 500ರ ಗಡಿ ದಾಟಿದೆ. ನಿನ್ನೆ ( ಗುರುವಾರ) ತುಮಕೂರು ಗ್ರಾಮಾಂತರ ಕ್ಷೇತ್ರ ಒಂದರಲ್ಲೇ 30ಕ್ಕೂ ಹೆಚ್ಚು ಬೃಹತ್ ಹಾರಗಳನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರಿಗೆ ಹಾಕಿ ಸ್ವಾಗತಿಸಿದ್ದಾರೆ
ಈ ಕ್ಷೇತ್ರದಲ್ಲಿ ಸೇಬು, ಸೌತೆಕಾಯಿ, ಕೊಬರಿ, ಕಬ್ಬಿನ ಹಾರಗಳ ಜತೆಗೆ ನಾಣ್ಯದ ಹಾರ, ಭತ್ತ ನೇಗಿಲು ಹಾರ, ಎತ್ತಿನ ಲಾಳದ ಹಾರ, ಜೆಡಿಎಸ್ ಚಿಹ್ನೆ ಹಾರ, ಮಣ್ಣಿನ ಹಾರ, ಕಿರೀಟದ ಹಾರ, ಮಹಿಳೆಯರು ಹಾಕಿದ ರಾಖಿ ಹಾರ, ಕರ್ಜಿಕಾಯಿ ಹಾರ, ವಿವಿಧ ತರಕಾರಿಗಳ ಹಾರ, ವಿವಿಧ ಹಣ್ಣುಗಳ ಹಾರ, ಎಲ್ ಇ ಡಿ ಹಾರ ಸೇರಿದಂತೆ ಒಂದೇ ದಿನ 30ಕ್ಕೂ ಹೆಚ್ಚು ಹಾರಗಳನ್ನು ಕುಮಾರಸ್ವಾಮಿ ಅವರಿಗೆ ಹಾಕಿ ಸ್ವಾಗತ ಕೋರಲಾಗಿತ್ತು.
ಈ ಸಂದರ್ಭದಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಗೌರಿಶಂಕರ್, ವಿಧಾನ ಪರಿಷತ್ ಸದಸ್ಯ ಭೋಜೇಗೌಡರು, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆಂಜಿನಪ್ಪ ಮುಂತಾದವರು ಉಪಸ್ಥಿತರಿದ್ದರು.
-
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications