Get Updates
Get notified of breaking news, exclusive insights, and must-see stories!

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಸ್ತಾಪವಿರುವುದು ನಿಜ: ಕೆಎಸ್‌ ಈಶ್ವರಪ್ಪ

ಬೆಂಗಳೂರು, ಜೂನ್ 16: ''ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಸ್ತಾಪವಿರುವುದು ಸತ್ಯ'' ಎಂದು ಸಚಿವ ಕೆ.ಎಸ್. ಈಶ್ವರಪ್ಪ ಒಪ್ಪಿಕೊಂಡಿದ್ದಾರೆ.

ನಮ್ಮಲ್ಲಿ ಗೊಂದಲ ಇನ್ನೂ ಇದೆ, ಅದನ್ನು ಸರಿಪಡಿಸಲು ಅರುಣ್ ಸಿಂಗ್ ರಾಜ್ಯಕ್ಕೆ ಬರುತ್ತಿದ್ದಾರೆ, ಅರುಣ್ ಸಿಂಗ್ ಬಂದ ಬಳಿಕ ಏನು ಬೇಕಾದರೂ ಆಗಬಹುದು, ರಾಷ್ಟ್ರೀಯ ನಾಯಕರು ಇದರ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಅವರು ಹೇಳಿದರು.

''ನಾಯಕತ್ವ ಬದಲಾವಣೆಯಾಗುತ್ತಾ, ಏನಾಗುತ್ತೆ ನನಗೆ ತಿಳಿದಿಲ್ಲ, ಇವತ್ತಿನ ಸಭೆಯಲ್ಲಿ ಯಡಿಯೂರಪ್ಪ ಇರುತ್ತಾರೋ ಇಲ್ಲವೋ ಎಂಬುದು ಗೊತ್ತಿಲ್ಲ, ನಾಳೆ ಎಲ್ಲರ ವೈಯಕ್ತಿಕ ಅಭಿಪ್ರಾಯಕ್ಕೆ ಅವಕಾಶವಿದೆ, ಬಿಜೆಪಿಯಲ್ಲಿ ಗೊಂದಲವಿದೆ ನಾನು ಒಪ್ಪುತ್ತೇನೆ'' ಎಂದರು.

Panchayat Raj Minister KS Eshwarappa Talks About Leadership Change In karnataka

17 ಮಂದಿ ಕಾಂಗ್ರೆಸ್, ಜೆಡಿಎಸ್‌ನಿಂದ ಬಂದವರಿಂದ ಸರ್ಕಾರ ಬಂದಿದೆ, ಅವರ ಪರಿಶ್ರಮದಿಂದ ಸರ್ಕಾರವಿದೆ, ಅವರಿಂದ ಗೊಂದಲ ಆಗಿದೆ ಎಂದು ನಾನು ಹೇಳಲ್ಲ, ರಾಜ್ಯದ ಜನ ಬಹುಮತ ಕೊಡಲಿಲ್ಲ.

ಕೆಲವರು ಮುಖ್ಯಮಂತ್ರಿ ಬದಲಾವಣೆ ಬೇಕು ಎಂದು ಹೇಳಿದ್ದಾರೆ, ಕೆಲವರು ದೆಹಲಿಗೆ ಹೋಗಿ ಬಂದಿದ್ದಾರೆ, ನಾನು ಬಹಿರಂಗ ಹೇಳಿಕೆ ಕೊಡಬೇಡಿ ಎಂದು ಹೇಳಿದ್ದೆ, ನಾಲ್ಕು ಗೋಡೆ ಮಧ್ಯೆ ಚರ್ಚೆಯಾಗಬೇಕು ಎಂದು ಕೂಡ ಹೇಳಿದ್ದೆ ಆದರೆ ಅದು ಬಿಟ್ಟು ಹೊರಗಡೆ ಚರ್ಚೆಯಾಗುತ್ತಿದೆ ಎಂದರು.

ನಾಳೆ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಸಂಸದರ ಸಭೆ ಕರೆದಿದ್ದಾರೆ, ನಾಡಿದ್ದು ಕೋರ್ ಕಮಿಟಿ ಸಭೆ ಇದೆ. ಕೋರ್ ಕಮಿಟಿ ಸಭೆಯಲ್ಲಿ ಎಲ್ಲವೂ ಚರ್ಚೆಯಾಗಲಿದೆ, ಅರುಣ್ ಸಿಂಗ್ ಬಳಿ ಗೊಂದಲಗಳ ಬಗ್ಗೆ ನಾನು ಗಮನಕ್ಕೆ ತರುತ್ತೇನೆ ಎಂದು ಮಾಹಿತಿ ನೀಡಿದರು.

Recommended Video

      ಯಡಿಯೂರಪ್ಪನವರ ಸಿಎಂ ಕುರ್ಚಿಗೆ ಕಂಟಕ ತರುತ್ತಾ ಹಳೇ ಕೇಸ್!! | Oneindia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+