ವಿದ್ಯುತ್ ಖರೀದಿ, ನೈಸ್ ಅಕ್ರಮ ತನಿಖೆಗೆ ಸಮಿತಿ ರಚನೆ
ಬೆಂಗಳೂರು, ಸೆ.5 : ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ವಾಕ್ಸಮರಕ್ಕೆ ಕಾರಣವಾಗಿದ್ದ ವಿದ್ಯುತ್ ಖರೀದಿ ಹಗರಣ ಮತ್ತು ನೈಸ್ ಸಂಸ್ಥೆಯ ಅಕ್ರಮಗಳ ಕುರಿತು ತನಿಖೆ ನಡೆಸಲು ಸದಸ ಸಮಿತಿಯನ್ನು ರಚನೆ ಮಾಡಲಾಗಿದೆ. ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಸದಸನ ಸಮಿತಿ ರಚನೆ ಮಾಡಿ ಗುರುವಾರ ಆದೇಶ ಹೊರಡಿಸಿದ್ದಾರೆ.
2004ರ ಅವಧಿಯಿಂದ 2014ರವರೆಗಿನ ವಿದ್ಯುತ್ ಖರೀದಿಯ ಸಂಪೂರ್ಣ ತನಿಖೆ ನಡೆಸಲು ಕಾಗೋಡು ತಿಮ್ಮಪ್ಪ ಅವರು ಆದೇಶ ಹೊರಡಿಸಿದ್ದಾರೆ. ಇಂಧನ ಸಚಿವ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ಶಾಸಕರಾದ ರಮೇಶ್ ಕುಮಾರ್, ಶಿವಾನಂದ ಪಾಟೀಲ್, ಬಸವರಾಜ್ ಬೊಮ್ಮಾಯಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಎಚ್.ಡಿ ಕುಮಾರಸ್ವಾಮಿ ಸೇರಿದಂತೆ ಒಟ್ಟು 11 ಜನ ಸದಸ್ಯರು ಸಮಿತಿಯಲ್ಲಿದ್ದು, 3 ತಿಂಗಳಿನಲ್ಲಿ ಸಮಿತಿ ವರದಿ ನೀಡಬೇಕಾಗಿದೆ.

ನೈಸ್ ತನಿಖೆ ಸಮಿತಿ ಸದಸ್ಯರು : ನೈಸ್ ಯೋಜನೆಯಲ್ಲಿ ಆಗಿದೆ ಎಂಬ ಅವ್ಯವಹಾರದ ಕುರಿತು ತನಿಖೆ ನಡೆಸಲು ಸದನ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯಲ್ಲಿಯೂ 11 ಸದಸ್ಯರಿದ್ದು, ಮೂರು ತಿಂಗಳಿನಲ್ಲಿ ಸಮಿತಿ ತನಿಖೆ ನಡೆಸಿ ವರದಿಯನ್ನು ಸಲ್ಲಿಸಬೇಕಾಗಿದೆ.
ನೈಸ್ ಹಗರಣದ ಕುರಿತು ತನಿಖೆ ನಡೆಸುವ ಸಮಿತಿಗೆ ಕಾನೂನು ಸಚಿವ ಟಿ.ಬಿ ಜಯಚಂದ್ರ ಅವರು ನೇತೃತ್ವ ವಹಿಸಿದ್ದಾರೆ. ಪ್ರಿಯಾಂಕ ಖರ್ಗೆ, ಬಸವರಾಜ್ ರಾಯರೆಡ್ಡಿ, ಎಸ್.ಟಿ ಸೋಮಶೇಖರ್, ಎಸ್.ಆರ್.ವಿಶ್ವನಾಥ್, ಬಿ.ಆರ್.ಪಾಟೀಲ್ ಸೇರಿದಂತೆ 11 ಜನ ಸದಸ್ಯರು ಸಮಿತಿಯಲ್ಲಿದ್ದಾರೆ. [ನೈಸ್ ಅಕ್ರಮದ ತನಿಖೆ ಮಾಡಲಿದೆ ಸದನ ಸಮಿತಿ]
ನೈಸ್ ಸಂಸ್ಥೆಯ ಹಗರಣ ಬಗ್ಗೆ ವಿಧಾನಸಭೆ ಅಧಿವೇಶನದಲ್ಲಿ ಚರ್ಚೆ ನಡೆದಿತ್ತು. ಬಹುಕೋಟಿ ಮೌಲ್ಯದ ನೈಸ್ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ಸದನ ಸಮಿತಿ ರಚಿಸುವುದಾಗಿ ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ವಿಧಾನಸಭೆಯಲ್ಲಿ ಘೋಷಿಸಿದ್ದರು.
-
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications