ಮೂಡಿಗೆರೆಯಲ್ಲಿ ಹುಲಿ ಪ್ರತ್ಯಕ್ಷ, ಜನರಲ್ಲಿ ಆತಂಕ
ಚಿಕ್ಕಮಗಳೂರು, ಡಿಸೆಂಬರ್ 05 : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಉದುಸೆ ಗ್ರಾಮದಲ್ಲಿ ಹುಲಿಯೊಂದು ಪತ್ತೆಯಾಗಿದೆ. ಇದರಿಂದಾಗಿ ಗ್ರಾಮದ ಜನರು ಆತಂಕದಲ್ಲಿ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಅರಣ್ಯ ಇಲಾಖೆ ಅಳವಡಿಸಿದ್ದ ಸಿಸಿಕ್ಯಾಮರಾದಲ್ಲಿ ಹುಲಿಯ ಓಡಾಟ ಪತ್ತೆಯಾಗಿದೆ. ನಾಲ್ಕು ದಿನದಿಂದ ಹುಲಿ ಈ ಭಾಗದಲ್ಲಿ ಸಂಚಾರ ನಡೆಸುತ್ತಿದ್ದು, ಎರಡು ಹಸು ಮತ್ತು ಒಂದು ಕರುವನ್ನು ತಿಂದು ಹಾಕಿದೆ.

ಚಕ್ಕೊಡಿಗೆ, ಹೆಗ್ಗರವಳ್ಳಿ, ದಿಣ್ಣೆಕೆರೆ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಹುಲಿ ಬಂದ ವಿಚಾರ ಕೇಳಿ ಆತಂಕಗೊಂಡಿದ್ದಾರೆ. ಮನೆಯಿಂದ ಹೊರಬರಲು ಮತ್ತು ಕಾಫಿ ಎಸ್ಟೇಟ್ಗಳಿಗೆ ಕೆಲಸಕ್ಕೆ ಹೋಗಲು ಭಯಪಡುವಂತಾಗಿದೆ.
ಉದುಸೆ ಗ್ರಾಮದ ರವಿ ಎಂಬುವವರ ತೋಟದಲ್ಲಿ ಹಸುವನ್ನು ಹುಲಿ ಕೊಂದು ಹಾಕಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಇಲ್ಲಿ ಸಿಸಿಟಿವಿ ಅಳವಡಿಸಿದ್ದರು. ಹುಲಿಯ ಓಡಾಟ ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ.

ಈ ಗ್ರಾಮದಲ್ಲಿ 2 ರಿಂದ 3 ಹುಲಿಗಳು ಇವೆ ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ. ಹುಲಿಗಳನ್ನು ಸೆರೆ ಹಿಡಿಯಲು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications