ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳ ಪರದಾಟ: ವೆಬ್ಸೈಟ್ಗೆ ಹೇಳೋರಿಲ್ಲ.. ಕೇಳೋರಿಲ್ಲ!
ಬೆಂಗಳೂರು: ಸರ್ಕಾರ ಯಾವ ಯೋಜನೆ ತಂದರೂ ಅಧಿಕಾರಿಗಳು ಮಾಡುವ ಎಡವಟ್ಟು ದೊಡ್ಡ ಸಮಸ್ಯೆ ಹುಟ್ಟುಹಾಕುತ್ತಿದೆ. ಇದೇ ರೀತಿ ಪ್ಯಾರಾಮೆಡಿಕಲ್ ಕೋರ್ಸ್ಗೆ ಸೇರಿದ್ದ ವಿದ್ಯಾರ್ಥಿಗಳು ಅಧಿಕಾರಿಗಳು ಮಾಡಿದ ಎಡವಟ್ಟಿನಿಂದ ಪರದಾಡುತ್ತಿದ್ದಾರೆ. ಲಕ್ಷ ಲಕ್ಷ ಖರ್ಚು ಮಾಡಿ ರೂಪಿಸಿದ್ದ ವೆಬ್ಸೈಟ್ ಕೂಡ ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಿಲ್ಲ. ಈ ಸಮಸ್ಯೆಯ ಸಾಗರದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.
ರಾಜ್ಯದಲ್ಲಿ ಉದ್ಯೋಗ ಕಂಡುಕೊಳ್ಳಲು ಸರ್ಕಾರ ಹಲವು ವೃತ್ತಿಪರ ಕೋರ್ಸ್ಗಳನ್ನ ಶುರು ಮಾಡಿದೆ. ಇದೇ ರೀತಿ ರಾಜ್ಯದಲ್ಲಿ ಪ್ಯಾರಾಮೆಡಿಕಲ್ ಎಂಬ ಕೋರ್ಸ್ ಕೂಡ ಇದೆ. ಹೀಗೆ ಇದರಲ್ಲಿ ಡಿಪ್ಲೋಮಾ ಕೋರ್ಸ್ 2 ವರ್ಷದ್ದಾಗಿದ್ದು, ಲ್ಯಾಬ್ಗಳಲ್ಲಿ ಎಕ್ಸ್ರೇ, ಬ್ಲಡ್ ಟೆಸ್ಟಿಂಗ್ ಸಹಾಯಕರಾಗಿ ಕೆಲಸ ಮಾಡಲು ಈ ಕೋರ್ಸ್ ಮುಗಿಸಿದ್ದರೆ ಅವಕಾಶ ಸಿಗುತ್ತದೆ. ಹೀಗಾಗಿ ಸಾವಿರಾರು ಬಡ ವಿದ್ಯಾರ್ಥಿಗಳು ಕೋರ್ಸ್ಗೆ ಅಡ್ಮಿಶನ್ ಆಗಿದ್ದರು. ಆದರೆ ದಾಖಲಾಗಿರುವ ಅಭ್ಯರ್ಥಿಗಳು ಪರದಾಡುತ್ತಿದ್ದಾರೆ. ಯಾಕೆ ಗೊತ್ತಾ? ಮುಂದೆ ಓದಿ.

ಸಂಪರ್ಕ ಮಾಹಿತಿಯೇ ಮಾಯ!
ಹೌದು 'ಕರ್ನಾಟಕ ನರ್ಸಿಂಗ್ & ಅರೆ ವೈದ್ಯಕೀಯ ವಿಜ್ಞಾನಗಳ ನಿಯಂತ್ರಣ ಪ್ರಾಧಿಕಾರ'ದ ಪ್ಯಾರಾಮೆಡಿಕಲ್ ವೆಬ್ಸೈಟ್ನಲ್ಲಿ ಇರುವ ನಂಬರ್ ರಿಜಿಸ್ಟರ್ ಆಗಿಲ್ಲ ಎಂಬ ಆರೋಪ ಈಗ ವಿದ್ಯಾರ್ಥಿಗಳಿಂದ ಕೇಳಿಬಂದಿದೆ. ಹೀಗಾಗಿ ಕೋರ್ಸ್ ಸಂಬಂಧ ಈಗ ಯಾರನ್ನ ಸಂಪರ್ಕ ಮಾಡಬೇಕು ಅಂತಾ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಇದರ ಜೊತೆ ಅದೇ ವೆಬ್ಸೈಟ್ ನೀಡಿರುವ ಮುಖ್ಯಸ್ಥರ ಹೆಸರುಗಳ ಕೆಳಗೆ ಅವರ ಸಂಪರ್ಕ ಮಾಹಿತಿ ಕೂಡ ಇಲ್ಲ. ಕೇವಲ ಹೆಸರನ್ನ ಮಾತ್ರ ಹಾಕಲಾಗಿದ್ದು, ವಿದ್ಯಾರ್ಥಿಗಳಿಗೆ ದಾರಿ ಕಾಣದಾಗಿದೆ.

ವೆಬ್ಸೈಟ್ ಎರರ್.. ಎರರ್!
ಇದರ ಜೊತೆಗೆ ಕೋರ್ಸ್ ಕರೆದ ನಂತರ ನೋಟಿಫಿಕೇಷನ್ ನೀಡಬೇಕು, ಯಾವಾಗ ಕೋರ್ಸ್ ಶುರುವಾಗುತ್ತೆ ಮತ್ತು ಯಾವಾಗ ಕೋರ್ಸ್ ಮುಗಿಯುತ್ತೆ ಅನ್ನೋದನ್ನ ತಿಳಿಸಬೇಕಿತ್ತು. ಆದರೆ ಇದನ್ನೂ 'ಕರ್ನಾಟಕ ನರ್ಸಿಂಗ್ & ಅರೆ ವೈದ್ಯಕೀಯ ವಿಜ್ಞಾನಗಳ ನಿಯಂತ್ರಣ ಪ್ರಾಧಿಕಾರ' ಸರಿಯಾಗಿ ನಿರ್ವಹಿಸಿಲ್ಲ ಎಂಬ ಆರೋಪ ವಿದ್ಯಾರ್ಥಿಗಳಿಂದ ಕೇಳಿಬಂದಿದೆ. ಕೌನ್ಸಿಲಿಂಗ್ ಬಗ್ಗೆಯೂ ಇಲ್ಲಿಯ ತನಕ ಮಾಹಿತಿ ನೀಡಿಲ್ಲ. ವೆಬ್ಸೈಟ್ ಮೂಲಕ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ, 2023 ಮತ್ತು 2024ರ ಕೌನ್ಸಿಲಿಂಗ್ ಲಿಂಕ್ ಎರರ್ ಬರ್ತಿದೆ. ಇಷ್ಟೆಲ್ಲಾ ಸಮಸ್ಯೆ ಇದ್ದರೂ ಯಾರೊಬ್ಬರೂ ಸಂಪರ್ಕಕ್ಕೆ ಸಿಗುತ್ತಿಲ್ಲವಂತೆ.
ಒಟ್ನಲ್ಲಿ ಹೊಟ್ಟೆ, ಬಟ್ಟೆ ಕಟ್ಟಿ ಕೋರ್ಸ್ಗೆ ಸೇರಿರುವ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಇದೇ ರೀತಿ ಸಮಸ್ಯೆಗಳ ಸಾಗರವೇ ಇದ್ದರೂ 'ಕರ್ನಾಟಕ ನರ್ಸಿಂಗ್ & ಅರೆ ವೈದ್ಯಕೀಯ ವಿಜ್ಞಾನಗಳ ನಿಯಂತ್ರಣ ಪ್ರಾಧಿಕಾರ' ತಲೆಕೆಡಿಸಿಕೊಂಡಿಲ್ಲ ಎಂಬ ಆರೋಪ ಕೂಡ ಈಗ ಕೇಳಿಬರುತ್ತಿದೆ. ಹೀಗಾಗಿ ಕೂಡಲೇ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಬೇಕಿದೆ. ಅಕಸ್ಮಾತ್ ಹೀಗೆ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತೋರಿದರೆ, ಉಗ್ರ ಹೋರಾಟ ನಡೆಸುವುದಾಗಿಯೂ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ.
-
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ












Click it and Unblock the Notifications