ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳ ಪರದಾಟ: ವೆಬ್ಸೈಟ್ಗೆ ಹೇಳೋರಿಲ್ಲ.. ಕೇಳೋರಿಲ್ಲ!
ಬೆಂಗಳೂರು: ಸರ್ಕಾರ ಯಾವ ಯೋಜನೆ ತಂದರೂ ಅಧಿಕಾರಿಗಳು ಮಾಡುವ ಎಡವಟ್ಟು ದೊಡ್ಡ ಸಮಸ್ಯೆ ಹುಟ್ಟುಹಾಕುತ್ತಿದೆ. ಇದೇ ರೀತಿ ಪ್ಯಾರಾಮೆಡಿಕಲ್ ಕೋರ್ಸ್ಗೆ ಸೇರಿದ್ದ ವಿದ್ಯಾರ್ಥಿಗಳು ಅಧಿಕಾರಿಗಳು ಮಾಡಿದ ಎಡವಟ್ಟಿನಿಂದ ಪರದಾಡುತ್ತಿದ್ದಾರೆ. ಲಕ್ಷ ಲಕ್ಷ ಖರ್ಚು ಮಾಡಿ ರೂಪಿಸಿದ್ದ ವೆಬ್ಸೈಟ್ ಕೂಡ ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಿಲ್ಲ. ಈ ಸಮಸ್ಯೆಯ ಸಾಗರದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.
ರಾಜ್ಯದಲ್ಲಿ ಉದ್ಯೋಗ ಕಂಡುಕೊಳ್ಳಲು ಸರ್ಕಾರ ಹಲವು ವೃತ್ತಿಪರ ಕೋರ್ಸ್ಗಳನ್ನ ಶುರು ಮಾಡಿದೆ. ಇದೇ ರೀತಿ ರಾಜ್ಯದಲ್ಲಿ ಪ್ಯಾರಾಮೆಡಿಕಲ್ ಎಂಬ ಕೋರ್ಸ್ ಕೂಡ ಇದೆ. ಹೀಗೆ ಇದರಲ್ಲಿ ಡಿಪ್ಲೋಮಾ ಕೋರ್ಸ್ 2 ವರ್ಷದ್ದಾಗಿದ್ದು, ಲ್ಯಾಬ್ಗಳಲ್ಲಿ ಎಕ್ಸ್ರೇ, ಬ್ಲಡ್ ಟೆಸ್ಟಿಂಗ್ ಸಹಾಯಕರಾಗಿ ಕೆಲಸ ಮಾಡಲು ಈ ಕೋರ್ಸ್ ಮುಗಿಸಿದ್ದರೆ ಅವಕಾಶ ಸಿಗುತ್ತದೆ. ಹೀಗಾಗಿ ಸಾವಿರಾರು ಬಡ ವಿದ್ಯಾರ್ಥಿಗಳು ಕೋರ್ಸ್ಗೆ ಅಡ್ಮಿಶನ್ ಆಗಿದ್ದರು. ಆದರೆ ದಾಖಲಾಗಿರುವ ಅಭ್ಯರ್ಥಿಗಳು ಪರದಾಡುತ್ತಿದ್ದಾರೆ. ಯಾಕೆ ಗೊತ್ತಾ? ಮುಂದೆ ಓದಿ.

ಸಂಪರ್ಕ ಮಾಹಿತಿಯೇ ಮಾಯ!
ಹೌದು 'ಕರ್ನಾಟಕ ನರ್ಸಿಂಗ್ & ಅರೆ ವೈದ್ಯಕೀಯ ವಿಜ್ಞಾನಗಳ ನಿಯಂತ್ರಣ ಪ್ರಾಧಿಕಾರ'ದ ಪ್ಯಾರಾಮೆಡಿಕಲ್ ವೆಬ್ಸೈಟ್ನಲ್ಲಿ ಇರುವ ನಂಬರ್ ರಿಜಿಸ್ಟರ್ ಆಗಿಲ್ಲ ಎಂಬ ಆರೋಪ ಈಗ ವಿದ್ಯಾರ್ಥಿಗಳಿಂದ ಕೇಳಿಬಂದಿದೆ. ಹೀಗಾಗಿ ಕೋರ್ಸ್ ಸಂಬಂಧ ಈಗ ಯಾರನ್ನ ಸಂಪರ್ಕ ಮಾಡಬೇಕು ಅಂತಾ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಇದರ ಜೊತೆ ಅದೇ ವೆಬ್ಸೈಟ್ ನೀಡಿರುವ ಮುಖ್ಯಸ್ಥರ ಹೆಸರುಗಳ ಕೆಳಗೆ ಅವರ ಸಂಪರ್ಕ ಮಾಹಿತಿ ಕೂಡ ಇಲ್ಲ. ಕೇವಲ ಹೆಸರನ್ನ ಮಾತ್ರ ಹಾಕಲಾಗಿದ್ದು, ವಿದ್ಯಾರ್ಥಿಗಳಿಗೆ ದಾರಿ ಕಾಣದಾಗಿದೆ.

ವೆಬ್ಸೈಟ್ ಎರರ್.. ಎರರ್!
ಇದರ ಜೊತೆಗೆ ಕೋರ್ಸ್ ಕರೆದ ನಂತರ ನೋಟಿಫಿಕೇಷನ್ ನೀಡಬೇಕು, ಯಾವಾಗ ಕೋರ್ಸ್ ಶುರುವಾಗುತ್ತೆ ಮತ್ತು ಯಾವಾಗ ಕೋರ್ಸ್ ಮುಗಿಯುತ್ತೆ ಅನ್ನೋದನ್ನ ತಿಳಿಸಬೇಕಿತ್ತು. ಆದರೆ ಇದನ್ನೂ 'ಕರ್ನಾಟಕ ನರ್ಸಿಂಗ್ & ಅರೆ ವೈದ್ಯಕೀಯ ವಿಜ್ಞಾನಗಳ ನಿಯಂತ್ರಣ ಪ್ರಾಧಿಕಾರ' ಸರಿಯಾಗಿ ನಿರ್ವಹಿಸಿಲ್ಲ ಎಂಬ ಆರೋಪ ವಿದ್ಯಾರ್ಥಿಗಳಿಂದ ಕೇಳಿಬಂದಿದೆ. ಕೌನ್ಸಿಲಿಂಗ್ ಬಗ್ಗೆಯೂ ಇಲ್ಲಿಯ ತನಕ ಮಾಹಿತಿ ನೀಡಿಲ್ಲ. ವೆಬ್ಸೈಟ್ ಮೂಲಕ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ, 2023 ಮತ್ತು 2024ರ ಕೌನ್ಸಿಲಿಂಗ್ ಲಿಂಕ್ ಎರರ್ ಬರ್ತಿದೆ. ಇಷ್ಟೆಲ್ಲಾ ಸಮಸ್ಯೆ ಇದ್ದರೂ ಯಾರೊಬ್ಬರೂ ಸಂಪರ್ಕಕ್ಕೆ ಸಿಗುತ್ತಿಲ್ಲವಂತೆ.
ಒಟ್ನಲ್ಲಿ ಹೊಟ್ಟೆ, ಬಟ್ಟೆ ಕಟ್ಟಿ ಕೋರ್ಸ್ಗೆ ಸೇರಿರುವ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಇದೇ ರೀತಿ ಸಮಸ್ಯೆಗಳ ಸಾಗರವೇ ಇದ್ದರೂ 'ಕರ್ನಾಟಕ ನರ್ಸಿಂಗ್ & ಅರೆ ವೈದ್ಯಕೀಯ ವಿಜ್ಞಾನಗಳ ನಿಯಂತ್ರಣ ಪ್ರಾಧಿಕಾರ' ತಲೆಕೆಡಿಸಿಕೊಂಡಿಲ್ಲ ಎಂಬ ಆರೋಪ ಕೂಡ ಈಗ ಕೇಳಿಬರುತ್ತಿದೆ. ಹೀಗಾಗಿ ಕೂಡಲೇ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಬೇಕಿದೆ. ಅಕಸ್ಮಾತ್ ಹೀಗೆ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತೋರಿದರೆ, ಉಗ್ರ ಹೋರಾಟ ನಡೆಸುವುದಾಗಿಯೂ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications