ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೊಂದಲ ಸೃಷ್ಟಿಸಿದ ಕುಮಾರಸ್ವಾಮಿ, ಪರಮೇಶ್ವರ್ ಹೇಳಿಕೆ

|
Google Oneindia Kannada News

Recommended Video

ಗೊಂದಲ ಸೃಷ್ಟಿಸಿದ ಕುಮಾರಸ್ವಾಮಿ, ಪರಮೇಶ್ವರ್ ಹೇಳಿಕೆ | Oneindia Kannada

ಬೆಂಗಳೂರು, ನವೆಂಬರ್ 17: ಸಿಎಂ ಹುದ್ದೆ ಕೊಟ್ಟರೆ ನಿಭಾಯಿಸುತ್ತೇನೆ ಎಂಬ ಪರಮೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಕುಮಾರಸ್ವಾಮಿ ' ಪರಮೇಶ್ವರ್‌ ಅವರಿಗೆ ಸಿಎಂ ಆಗುವ ಅರ್ಹತೆ ಇದೆ' ಎಂದು ಹೇಳಿದ್ದಾರೆ.

ರಾಜ್ಯ ರೈತರಿಗೆ ಮೈತ್ರಿ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ರಾಜ್ಯ ರೈತರಿಗೆ ಮೈತ್ರಿ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ

ಇಂದು ಬೆಳಿಗ್ಗೆ ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ್ದ ಉಪಮುಖ್ಯಮಂತ್ರಿ ಪರಮೇಶ್ವರ್ ಅವರು, ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ, 'ಹೈಕಮಾಂಡ್ ನೀಡಿದರೆ ಸಿಎಂ ಹುದ್ದೆ ನಿಭಾಯಿಸಲು ಸಿದ್ಧ' ಎಂದಿದ್ದರು.

ಸಚಿವ ಪ್ರಿಯಾಂಕ್ ಖರ್ಗೆ ಎಚ್‌ಡಿ ಕುಮಾರಸ್ವಾಮಿಗೆ ಬರೆದ ಪತ್ರದಲ್ಲೇನಿದೆ? ಸಚಿವ ಪ್ರಿಯಾಂಕ್ ಖರ್ಗೆ ಎಚ್‌ಡಿ ಕುಮಾರಸ್ವಾಮಿಗೆ ಬರೆದ ಪತ್ರದಲ್ಲೇನಿದೆ?

ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ಪರಮೇಶ್ವರ್‌ಗೆ ಅರ್ಹತೆ ಇದೆ, ಅಲ್ಲದೆ, ಯಾವ ಅಧಿಕಾರವೂ ಶಾಶ್ವತವಲ್ಲ ಎಂದು ಹೇಳಿದ್ದಾರೆ. ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಣ್ಣ ಗೊಂದಲ ಸೃಷ್ಠಿಸಿದೆ.

Parameshwar has ability to handle CM post: Kumaraswamy

ಜೆಡಿಎಸ್-ಕಾಂಗ್ರೆಸ್ ಮಧ್ಯೆ ಸಿಎಂ ಹುದ್ದೆ ಹಂಚಿಕೆ ನಡೆಯುತ್ತದೆಯೇ, ಕುಮಾರಸ್ವಾಮಿ ನಂತರ ಪರಮೇಶ್ವರ್ ಅವರು ಸಿಎಂ ಆಗುತ್ತಾರೆಯೇ ಎಂಬೆಲ್ಲಾ ಚರ್ಚೆಗಳಿಗೆ ಎಚ್‌ಡಿಕೆ ಹೇಳಿಕೆ ನಾಂದಿ ಹಾಡಿದೆ.

ಮೈಸೂರು ಮೇಯರ್ ಸ್ಥಾನ: ಕುಮಾರಸ್ವಾಮಿ vs ಸಿದ್ದರಾಮಯ್ಯ ಮೈಸೂರು ಮೇಯರ್ ಸ್ಥಾನ: ಕುಮಾರಸ್ವಾಮಿ vs ಸಿದ್ದರಾಮಯ್ಯ

ಮುಂದುವರೆದು ಮಾತನಾಡಿದ ಕುಮಾರಸ್ವಾಮಿ, 'ಪರಮೇಶ್ವರ್ ಹೇಳಿಕೆಗೆ ಹೊಸ ಅರ್ಥ ಕಲ್ಪಿಸುವುದು ಬೇಡ, ಈಗಾಗಲೇ ಹಲವು ಜನ ರಾಜ್ಯದ ಮುಖ್ಯಮಂತ್ರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ, ಈಗ ಇರುವ ನಾಯಕರಲ್ಲಿ ಹಲವರಿಗೆ ಸಿಎಂ ಆಗುವ ಅರ್ಹತೆ ಇದೆ' ಎಂದು ಅವರು ಹೇಳಿದ್ದಾರೆ.

English summary
CM Kumaraswamy said G Parameshwar has ability to handle CM post. Parameshwar today said that i am ready to handle CM post if high command give me.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X