Hijab: SSLC ಪರೀಕ್ಷೆಯಲ್ಲಿ ಹಿಜಾಬ್ಗೆ ಅವಕಾಶ : ಡಾ.ಜಿ.ಪರಮೇಶ್ವರ್ ಮಹತ್ವದ ಹೇಳಿಕೆ
ಬೆಂಗಳೂರು,ಫೆಬ್ರವರಿ 04: ದೇಶದಲ್ಲಿ ದೊಡ್ಡ ಮಟ್ಟದ ಸಂಚಲನಕ್ಕೆ ಕಾರಣವಾಗಿರುವ ಹಿಜಾಬ್ ನಿಷೇಧ ಪ್ರಕರಣ ಇದೀಗ ಮತ್ತೆ ಮುನ್ನಲೆಗೆ ಬಂದಿದೆ. ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಜಾಬ್ ಬಳಕೆಗೆ ಅವಕಾಶದ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮಹತ್ವದ ಹೇಳಿಕೆಯನ್ನ ನೀಡಿದ್ದಾರೆ.
ಈ ಕುರಿತು ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಜಾಬ್ ಗೆ ಅವಕಾಶ ನೀಡುವ ವಿಚಾರವಾಗಿ ಸುಧೀರ್ಘವಾಗಿ ಚರ್ಚೆ ಮಾಡುತ್ತೇವೆ. ಇನ್ನು ಒಂದು ತಿಂಗಳು ಸಮಯವಿದೆ ನೋಡೋಣ ಚರ್ಚೆ ಮಾಡುತ್ತೇವೆ ಎಂದು ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ಅವರು ಹೇಳಿದರು.

ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ದೌರ್ಜನ್ಯಕ್ಕೆ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ. ಇದರ ಮಧ್ಯ ನೆನ್ನೆ ರಾಜ್ಯಪಾಲರಿಗೆ ಮೈಕ್ರೋ ಫೈನಾನ್ಸ್ ದೌರ್ಜನ್ಯ ತಡೆ ಕುರಿತು ಕರಡು ಪ್ರತಿಯನ್ನು ಕಳುಹಿಸಲಾಗಿದ್ದು, ಇಂದು ರಾಜ್ಯಪಾಲರು ಕರಡು ಪ್ರತಿಯನ್ನು ಪರಿಶೀಲಿಸಿ ಅಂಕಿತ ಹಾಕುವ ಸಾಧ್ಯತೆ ಇದೆ.
ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿ ವಿಚಾರವಾಗಿ ಈ ಹಿಂದೆ ಶಿಕ್ಷೆ ಮೂರು ವರ್ಷ ಬಿಟ್ಟು ಈಗ 10 ವರ್ಷ ಮಾಡಿದ್ದೇವೆ.ದಂಡದ ಮತವನ್ನು 5 ಲಕ್ಷ ರೂಪಾಯಿಗೆ ಹೆಚ್ಚಿಸಿದ್ದೇವೆ. ಬಿಲ್ ಅನ್ನು ರಾಜ್ಯಪಾಲರಿಗೆ ಕಳುಹಿಸಿದ್ದೇವೆ. ಇವತ್ತು ಪರಿಶೀಲಿಸಿ ರಾಜಪಾಲರು ಅಂಕಿತ ಹಾಕಬಹುದು. ಕಾನೂನಿನ ತೊಡಕುಗಳನ್ನು ಸರಿಪಡಿಸಿದ್ದೇವೆ. ಕಾನೂನಿನ ತೊಂದರೆ ಬರುವುದಿಲ್ಲ ಅಂತ ಅಂದುಕೊಂಡಿದ್ದೇವೆ ಎಂದು ತಿಳಿಸಿದರು.
ಕರ್ನಾಟಕ ಭವನ ಉದ್ಘಾಟನೆ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮನ್ನ ಕರೆದರೆ ಹೋಗ್ತೇನೆ. ಈ ಹಿಂದೆ ಉಪಮುಖ್ಯಮಂತ್ರಿ ಇದ್ದಾಗ ನಾನೇ ಅಡಿಗಲ್ಲು ಹಾಕಿದ್ದೆ. ಅವರು ಕರೆದರೆ ಹೋಗ್ತೇನೆ
ಕರಿಯದೇ ಇದ್ರೆ ಹೇಗೆ ಹೋಗೋದು? ನನ್ನ ಲೀಡರ್ ಶಿಪ್ ನಲ್ಲಿ ದೆಹಲಿ ಹೋಗ್ತಾರೆ ಎನ್ನುತ್ತಿದ್ದಾರೆ. ಹೈಕಮಾಂಡ್ ಮೀಟ್ ಅಂತ ನೀವು ಹಾಕುತ್ತಿರಾ ಎಂದು ಹೇಳಿದರು.
ತುಮುಲ್ ಬಗ್ಗೆ ಗುಬ್ಬಿ ಶ್ರೀನಿವಾಸ್ ಬೇಸರ ವಿಚಾರವಾಗಿ ಮಾಧ್ಯಮಗಳ ಪ್ರಶ್ನಗೆ ಉತ್ತರಿಸಿ, ನಾವು ಪ್ರಾಮಾಣಿಕವಾಗಿ ಕೆಲಸ ಮಾಡುವವರು. ನಮಗೂ ಸಮಸ್ಯೆಗಳು ಹೆಚ್ಚಿವೆ, ಈ ಚುನಾವಣೆಯಲ್ಲಿ ಪದೇ ಪದೇ ಏನಿಲ್ಲ ಅಷ್ಟೇ. ನಾವೆಲ್ಲ ಸ್ನೇಹಿತರೇ,ಒಂದೇ ಪಕ್ಷದಲ್ಲಿದ್ದೇವೆ. ಇಂತವೆಲ್ಲ ರಾಜಕೀಯದಲ್ಲಿ ಬರುತ್ತವೆ, ಅವರ ಜೊತೆ ನಾನು ಮಾತನಾಡ್ತೇನೆ. ಮಾತು ಬಿಡದಷ್ಟು ರಾಜಕೀಯ ಇಲ್ಲ ಎಂದು ಪರಮೇಶ್ವರ್ ಹೇಳಿದರು.
ಗೋ ಹತ್ಯೆ ಮಾಡುವವರನ್ನು ಗುಂಡಿಕ್ಕಿ ಕೊಲ್ಲುತ್ತೇನೆ ಎಂದು ಶಾಸಕ ಮಂಕಾಳು ವೈದ್ಯ ಹೇಳಿಕೆ ಕುರಿತಾಗಿ ಮಂಕಾಳು ವೈದ್ಯ ವಯಕ್ತಿಕವಾಗಿ ಹೇಳಿರುತ್ತಾರೆ. ಕ್ಯೂಆರ್ ಕೋಡ್ ಮೂಲಕ ಮತಾಂತರ ಮಾಡುತ್ತಿರುವ ವಿಚಾರವಾಗಿ ಆ ಬಗ್ಗೆ ನನಗೆ ಗೊತ್ತಿಲ್ಲ ಏನಾದರೂ ದೂರು ಬಂದರೆ ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಮತಾಂತರ ನಿಷೇಧ ಕಾಯ್ದೆ ಹಿಂಪಡೆಯಲು ಕ್ರಮವಾಗುತ್ತಿದೆ ಎಂದು ತಿಳಿಸಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications