ದುಷ್ಟ ಶಕ್ತಿಗಳ ವಿರುದ್ಧ ದುರ್ಗೆಯಂತೆ ಹೊರಹೊಮ್ಮಿದ ಮಮತಾ: ಎಚ್ಡಿಕೆ ಪ್ರತಿಕ್ರಿಯೆ
ಬೀದರ್, ಮೇ 2: ಬಸವಕಲ್ಯಾಣ ಅಸೆಂಬ್ಲಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗಾರ್ ವಿಜೇತರಾಗಿದ್ದಾರೆ. ಇವರು, ಕಾಂಗ್ರೆಸ್ಸಿನ ಪ್ರತಿಸ್ಪರ್ಧಿ ಮಲ್ಲಮ್ಮ ಬಿ ನಾರಾಯಣರಾವ್ರನ್ನು 20,448 ಮತಗಳ ಭಾರೀ ಅಂತರದಿಂದ ಸೋಲುಣಿಸಿದ್ದಾರೆ.
Recommended Video
ಕಣದಲ್ಲಿದ್ದ ಜೆಡಿಎಸ್ ಅಭ್ಯರ್ಥಿ ಸೈಯದ್ ಯಾಸ್ರಬ್ ಖಾದ್ರಿಗೆ ಕೇವಲ 11,390 ಮತಗಳು ಮಾತ್ರ ಲಭಿಸಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ, "ಬಸವಕಲ್ಯಾಣದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮತ ನೀಡಿದ ಎಲ್ಲರಿಗೂ ಧನ್ಯವಾದ. ಪಕ್ಷಕ್ಕಾಗಿ ಶ್ರಮಿಸಿದ ಕಾರ್ಯಕರ್ತರು, ಮುಖಂಡರ ಪರವಾಗಿ ನಾನು ಇರಲಿದ್ದೇನೆ. ಅಪಪ್ರಚಾರ, ಹಣಬಲ ನಮ್ಮ ಗೆಲುವು ಕಸಿದಿರಬಹುದು. ನಮ್ಮ ಅಸ್ತಿತ್ವವನ್ನಲ್ಲ. ರಾಷ್ಟ್ರೀಯ ಪಕ್ಷಗಳ ವಿರುದ್ಧ ಸೆಣಸಲು ನಾವು ಶಕ್ತರೆಂಬ ಸಂದೇಶ ರವಾನಿಸಿದ ಕಾರ್ಯಕರ್ತರಿಗೆ ನಾನು ಋಣಿ"ಎಂದು ಟ್ವೀಟ್ ಮಾಡಿದ್ದಾರೆ.
"ಕರ್ನಾಟಕದ ಉಪ ಚುನಾವಣೆ ಫಲಿತಾಂಶದ ಜೊತೆಗೇ, 5 ರಾಜ್ಯಗಳ ಚುನಾವಣೆಗಳ ಫಲಿತಾಂಶಗಳೂ ಬಂದಿವೆ. ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳನ್ನು ಮಣಿಸಲಾಗದು ಎಂಬ ಸಂದೇಶ ಹೊರಬಿದ್ದಿದೆ. ಸಾಂದರ್ಭಿಕ ಕಾರಣಗಳಿಗಾಗಿ ರಾಜ್ಯದಲ್ಲಿ ಸದ್ಯ ಸಂಕಷ್ಟದಲ್ಲಿರುವ ಜೆಡಿಎಸ್ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಸೆಟೆದು ನಿಲ್ಲಲಿದೆ, ಸಿಡಿದೆದ್ದು ಬರಲಿದೆ"ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

"ಅಧಿಕಾರ, ಹಣ, ಒತ್ತಡ, ಬಲ ಪ್ರಯೋಗಗಳನ್ನು ಮೆಟ್ಟಿನಿಂತ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಗಟ್ಟಿತನ ನಮಗೆ ಮಾದರಿಯಾಗಲಿದೆ. ಜೆಡಿಎಸ್ನಂತೆಯೇ ದಶಕಗಳ ಕಾಲ ರಾಜಕೀಯ ವನವಾಸ ಅನುಭವಿಸಿದ, ಸಂಕಷ್ಟ ಅನುಭವಿಸಿದ, ಕಠಿಣ ಸಂದರ್ಭದಲ್ಲು ಮುಂದಡಿ ಇಡುತ್ತಲೇ ಮುಂದೆ ಸಾಗಿದ ಡಿಎಂಕೆ ಮತ್ತು ಅದರ ನಾಯಕರ ತಾಳ್ಮೆ ನಮಗೆ ಪಾಠವಾಗಲಿದೆ" ಎಂದು ಎಚ್ಡಿಕೆ ಟ್ವೀಟ್ ಮಾಡಿದ್ದಾರೆ.
"ಅಧಿಕಾರ ದುರ್ಬಳಕೆಯ, ಅಪಪ್ರಚಾರದ ಪ್ರಯೋಗಗಳನ್ನು ಮೆಟ್ಟಿನಿಂತ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದುಷ್ಟ ಶಕ್ತಿಗಳ ವಿರುದ್ಧ ಗೆದ್ದ ದುರ್ಗೆಯಂತೆ ಹೊರಹೊಮ್ಮಿದ್ದಾರೆ. ಪ್ರಾದೇಶಿಕ ಅಸ್ಮಿತೆಯನ್ನು ದೇಶದ ಜನತೆ ಮತ್ತೆ ರುಜುವಾತುಪಡಿಸಿದ್ದಾರೆ. ಯಾವ ಅಧಿಕಾರ, ಹಣದ ದರ್ಪ, ಒತ್ತಡ ತಂತ್ರಗಳು, ಕುತಂತ್ರಗಳು, ಅಪಪ್ರಚಾರಗಳು ಪ್ರಾದೇಶಿಕ ಅಸ್ಮಿತೆಯನ್ನು ಚಿವುಟಿಹಾಕಲಾರವು. ಜನಮನಗೆದ್ದ ಪ್ರಾದೇಶಿಕ ಪಕ್ಷದ ನಾಯಕರನ್ನು ಜನತೆ ಕೈ ಹಿಡಿಯುತ್ತಾರೆ ಎಂಬುದಕ್ಕೆ ಇವತ್ತಿನ ಫಲಿತಾಂಶವೇ ತಾಜಾ ನಿದರ್ಶನ"ಎಂದು ಕುಮಾರಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.
"ಜೆಡಿಎಸ್ ತನ್ನ ಸಾಮರ್ಥ್ಯವನ್ನು ಮರಳಿ ಸಾಬೀತು ಮಾಡಲಿದೆ. ಈ ದುರಿತ ಕಾಲದಲ್ಲಿ ಕಾರ್ಯಕರ್ತರೊಂದಿಗೆ ನಾನು ನಿಲ್ಲಲಿದ್ದೇನೆ. ಸೋಲುಗಳ ಸರಣಿಯನ್ನು ಗೆಲುವಿನ ಪಾಠವಾಗಿ ಪರಿವರ್ತಿಸಿಕೊಳ್ಳುವ ಕಾಲ ನಮ್ಮೆದುರಿಗಿದೆ" ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಅಭಿಪ್ರಾಯ ಪಟ್ಟಿದ್ದಾರೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications