ಯಾವುದೇ ಪರಿಸ್ಥಿತಿ ಎದುರಿಸಲು ಕಾರ್ಯಕರ್ತರು ಸಜ್ಜಾಗಿರಬೇಕು: ಡಿ.ಕೆ. ಶಿವಕುಮಾರ್
ಬೆಂಗಳೂರು, ಜು. 24: "ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಉತ್ತಮ ಆಡಳಿತ ಸಿಕ್ಕಿಲ್ಲ. ಇದು ಅತ್ಯಂತ ಭ್ರಷ್ಟ ಸರ್ಕಾರ ಎಂಬುದಕ್ಕೆ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆಯೇ ಸಾಕ್ಷಿ. ಮುಂದಿನ ದಿನಗಳಲ್ಲಿ ಯಾವುದೇ ಪರಿಸ್ಥಿತಿ ಬಂದರೂ ಅದನ್ನು ಎದುರಿಸಲು ನಮ್ಮ ಕಾರ್ಯಕರ್ತರನ್ನು ಸಜ್ಜುಗೊಳಿಸಬೇಕು" ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ತುಮಕೂರಿನಲ್ಲಿ ಶನಿವಾರ ನಡೆದ ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳನ್ನು ಒಳಗೊಂಡ ವಿಭಾಗೀಯ ಮಟ್ಟದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಾತನಾಡಿದರು.
"ಕಾಂಗ್ರೆಸ್ ಪಕ್ಷದ ವಿಭಾಗೀಯ ಮಟ್ಟದ ಸಭೆಯನ್ನು ಮಂಗಳೂರಿನಿಂದ ಆರಂಭಿಸಬೇಕಾಗಿತ್ತು. ಆದರೆ, ನಮ್ಮ ಹಿರಿಯ ನಾಯಕರಾದ ಆಸ್ಕರ್ ಫರ್ನಾಂಡೀಸ್ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ನಿನ್ನೆ ನಡೆಯಬೇಕಿದ್ದ ಸಭೆ ರದ್ದುಗೊಳಿಸಲಾಯ್ತು. ಆಸ್ಕರ್ ಫರ್ನಾಂಡೀಸ್ ಅವರ ಆರೋಗ್ಯ ವಿಚಾರಿಸಲು ನಾನು ಹಾಗೂ ಶಾಸಕಾಂಗ ಪಕ್ಷದ ನಾಯಕರು ಮಂಗಳೂರಿಗೆ ತೆರಳಿದ್ದೆವು" ಎಂದು ವಿವರಿಸಿದರು.

"ಹೀಗಾಗಿ ಈ ಸಭೆ ಈಗ ತುಮಕೂರಿನಿಂದ ಆರಂಭವಾಗಿದ್ದು, ಮುಂದೆ ಹುಬ್ಬಳ್ಳಿ, ಮೈಸೂರು, ಮಂಗಳೂರಿನಲ್ಲಿ ನಡೆಯಲಿದೆ. ನಾವು ಈಗಾಗಲೇ ಸಂಕಲ್ಪ ಯಾತ್ರೆ ಮೂಲಕ ಎಲ್ಲ ಬ್ಲಾಕ್ ಕಾಂಗ್ರೆಸ್ ನಾಯಕರ ಜತೆ ಮಾತನಾಡಿದ್ದೇವೆ. ಅವರ ಅಭಿಪ್ರಾಯವನ್ನು ಕೇಳಿದ್ದೇವೆ. ಈಗ ಎಐಸಿಸಿ ನಾಯಕರು ಜಿಲ್ಲಾ ಮಟ್ಟದ ನಾಯಕರ ಜತೆ ಸಭೆ ನಡೆಸುತ್ತಿದ್ದಾರೆ" ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಪಕ್ಷದ ಕಾರ್ಯಕರ್ತರ ಧ್ವನಿ ಅಧ್ಯಕ್ಷರ ಧ್ವನಿಯಾಗಬೇಕು. ಪ್ರತಿ ಜಿಲ್ಲೆಯಲ್ಲೂ ಸಾಮಾಜಿಕ, ರಾಜಕೀಯ ಸೇರಿದಂತೆ ಅನೇಕ ಸಮಸ್ಯೆಗಳಿದ್ದು, ಇವುಗಳನ್ನು ಭವಿಷ್ಯದಲ್ಲಿ ನಿಭಾಯಿಸಬೇಕಾಗುತ್ತದೆ. ಹೀಗಾಗಿ ನಾವು ಪ್ರತಿ ಜಿಲ್ಲೆಗೂ ಪ್ರತ್ಯೇಕ ಕಾರ್ಯತಂತ್ರ ರೂಪಿಸಬೇಕಿದೆ. ಮುಂದೆ ಜಿಲ್ಲಾ ಪಂಚಾಯ್ತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಾಗುತ್ತಿದೆ. ಇವುಗಳಿಗೆ ನಾವು ಸಜ್ಜಾಗಬೇಕು. ರಾಜ್ಯದ ಜನ ನಮ್ಮ ಆಡಳಿತವನ್ನು ಕಳೆದೆರಡು ವರ್ಷದ ಆಡಳಿತದ ಜತೆ ಹೋಲಿಕೆ ಮಾಡುತ್ತಿದ್ದಾರೆ. ಈಗಿನ ಸರ್ಕಾರ ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಲಿಲ್ಲ. ಅವರು ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ತಲ್ಲೀನರಾಗಿದ್ದಾರೆ. ನಾವು ಅವರ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಬೇಡ.

"ಅವರು ಮುಖ್ಯಮಂತ್ರಿ ಬದಲಾವಣೆ ಮಾಡುತ್ತಾರೆ ಎಂದರೆ ಕಳೆದ ಎರಡು ವರ್ಷಗಳಲ್ಲಿ ಉತ್ತಮ ಆಡಳಿತ ಕೊಟ್ಟಿಲ್ಲ ಎಂದೇ ಅರ್ಥ. ಇದು ಅತ್ಯಂತ ಭ್ರಷ್ಟ ಸರ್ಕಾರ ಎಂದು ನಾವು ಈಗಾಗಲೇ ಹೇಳಿದ್ದೇವೆ. ನಾವು ನಮ್ಮ ಕಾರ್ಯಕರ್ತರನ್ನು ಸಜ್ಜುಗೊಳಿಸಿ, ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧವಾಗುತ್ತಿದ್ದೇವೆ. ಈ ಬಗ್ಗೆ ಎಲ್ಲರೂ ಗಮನ ಹರಿಸಬೇಕು" ಎಂದು ಇದೇ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
Recommended Video
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications