ಶಾಯರಿ, ತಾಳ್ಮೆಯ ನೆನಪು ತರುವ ಅಜಾತಶತ್ರು ಧರಂ ಸಿಂಗ್
ಧರಂ ಸಿಂಗ್ ಅಂದಾಕ್ಷಣ ನೆನಪಾಗುವುದು ಅವರ ತಾಳ್ಮೆ. ಜೆಡಿಎಸ್ ಜತೆಗೆ ಕಾಂಗ್ರೆಸ್ ನ ದೋಸ್ತಿ ಸರಕಾರ ರಚನೆಯಾದಾಗ ಮುಖ್ಯಮಂತ್ರಿ ಆದವರು ಧರಂ ಸಿಂಗ್. ತುಂಬ ಒತ್ತಡದ ಸನ್ನಿವೇಶದಲ್ಲೂ ತಾಳ್ಮೆ ಕೆಡುತ್ತಿರಲಿಲ್ಲ. ಅದರಲ್ಲೂ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಜೆಡಿಎಸ್ ನಲ್ಲಿ ಸಿದ್ದರಾಮಯ್ಯ ಹಾಗೂ ದೇವೇಗೌಡರ ಮಧ್ಯೆ ತಿಕ್ಕಾಟ ತಾರಕಕ್ಕೇರಿತ್ತು.
ಇಪ್ಪತ್ತು ತಿಂಗಳ ಕಾಲ ಅವರು ಮುಖ್ಯಮಂತ್ರಿ ಆಗಿದ್ದರು. ಆ ನಂತರ ಎಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿ ಜತೆ ಸೇರಿ ಸರಕಾರ ರಚಿಸಿ, ಮುಖ್ಯಮಂತ್ರಿ ಕೂಡ ಆದರು. ಆದರೆ ಕೊನೆ ಕ್ಷಣದವರೆಗೆ ದೇವೇಗೌಡರು ತಮ್ಮ ನೇತೃತ್ವದ ಸರಕಾರವನ್ನು ಉಳಿಸುತ್ತಾರೆ ಎಂದೇ ಧರಂ ಸಿಂಗ್ ನಂಬಿದ್ದರು.

ಬಹಳ ಸೊಗಸಾಗಿ ಶಾಯರಿಗಳನ್ನು ಹೇಳುತ್ತಿದ್ದ ಅವರು, ಮುಖ್ಯಮಂತ್ರಿಯಾಗಿ ಮಾಡಿದ ಕೊನೆ ಪತ್ರಿಕಾಗೋಷ್ಠಿಯಲ್ಲೂ ಶಾಯರಿ ಹೇಳುವ ಮೂಲಕ ತಮ್ಮ ವಿಶ್ವಾಸ ಹೇಳಿಕೊಂಡಿದ್ದರು. ಮಲ್ಲಿಕಾರ್ಜುನ ಖರ್ಗೆ ಹಾಗೂ ಧರಂ ಸಿಂಗ್ ಅವರು ಒಂದೇ ಜಿಲ್ಲೆಯನ್ನು ಪ್ರತಿನಿಧಿಸುತ್ತಿದ್ದ ಆತ್ಮೀಯ ಸ್ನೇಹಿತರು. ಈ ಇಬ್ಬರ ಜೋಡಿ ಕಾಂಗ್ರೆಸ್ ನ ಶಕ್ತಿಯಾಗಿತ್ತು. ಇಬ್ಬರೂ ಹೈಕಮಾಂಡ್ ನ ನಿಷ್ಠರು.
ರಾಜಕಾರಣದಲ್ಲಿ ಅಜಾತಶತ್ರು ಎಂಬ ವಿಶೇಷಣ ಸಿಗುವುದು ಅಪರೂಪ. ಆದರೆ ಧರಂ ಸಿಂಗ್ ಅವರನ್ನು ಹಾಗೆ ಕರೆಯುವುದಕ್ಕೆ ರಾಜ್ಯ ರಾಜಕಾರಣದಲ್ಲಿ ಯಾರೂ ಎರಡನೇ ಯೋಚನೆ ಮಾಡುವುದಿಲ್ಲ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications