Pay ಚೆಲುವರಾಯಸ್ವಾಮಿ ಅಭಿಯಾನ: ಬಿಜೆಪಿ ಕಾರ್ಯಕರ್ತರ ಕೇಸಿಗೆ ತಡೆ
ಬೆಂಗಳೂರು, ಡಿಸೆಂಬರ್ 20: ಕರ್ನಾಟಕದ ಕೃಷಿ ಸಚಿವ ಎನ್. ಚೆಲುವರಾಯ ಸ್ವಾಮಿ ವಿರುದ್ಧ 'ಪೇ ಚೆವರಾಯಸ್ವಾಮಿ' ಅಭಿಯಾನ ನಡೆಸಿ ಸಾರ್ವಜನಿಕ ಪ್ರದೇಶದಲ್ಲಿ ಭಿತ್ತಿಪತ್ರ ಅಂಟಿಸಿದ ಆರೋಪದಡಿ ಮಂಡ್ಯದ ಐವರು ಬಿಜೆಪಿ ಕಾರ್ಯಕರ್ತರ ವಿರುದ್ಧದ ಕೇಸಿಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
ಬಿಜೆಪಿ ಕಾರ್ಯಕರ್ತರಾದ ಸಿ. ಟಿ. ಮಂಜುನಾಥ್, ಎಸ್. ಶಿವಕುಮಾರ್ ಆರಾಧ್ಯ, ಪ್ರಸನ್ನ ಕುಮಾರ್, ಶಿವ ಕುಮಾರ್ ಮತ್ತು ವಿನೂ ಭಾಯ್ ಅವರು ಸದ್ಯಕ್ಕೆ ನಿರಾಳರಾಗುವಂತೆ ಆಗಿದ್ದು, ಬಂಧನ ಭೀತಿಯಿಂದ ಪಾರಾಗಿದ್ದಾರೆ. ಅವರ ವಿರುದ್ಧ ದಾಖಲಾಗಿದ್ದ ದೋಷಾರೋಪ ಪಟ್ಟಿಗೆ ಮತ್ತು ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧ ಕರ್ನಾಟಕ ಮುಕ್ತ ಪ್ರದೇಶಗಳ ವಿರೂಪ ತಡೆ ಕಾಯ್ದೆಯಡಿ ದಾಖಲಿಸಿರುವ ದೋಷಾರೋಪ ಪಟ್ಟಿ ಮತ್ತು ಮಂಡ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಹಿರಿಯ ಸಿವಿಲ್ ಮತ್ತು ಸಿಜೆಎಂ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಸಿ. ಟಿ. ಮಂಜುನಾಥ್ ಸೇರಿ ಐವರು ಬಿಜೆಪಿ ಕಾರ್ಯಕರ್ತರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ಅವರ ನ್ಯಾಯಪೀಠ ಈ ಆದೇಶ ಮಾಡಿತು. ಜತೆಗೆ, ಪ್ರತಿವಾದಿಯಾಗಿರುವ ಮಂಡ್ಯ ಪಶ್ವಿಮ ಠಾಣಾ ಪೊಲೀಸರು ಮತ್ತು ದೂರುದಾರ ರುದ್ರೇಗೌಡಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
ಪ್ರಕರಣದ ಹಿನ್ನೆಲೆ: ಅರ್ಜಿದಾರರು ಸಚಿವ ಎನ್. ಚೆಲುರಾಯಸ್ವಾಮಿ ಮತ್ತು ಸರ್ಕಾರದ ವಿರುದ್ಧ 'ಪೇ ಸಿಎಸ್/ ಪೇ ಚೆಲುವರಾಯಸ್ವಾಮಿ ಅಭಿಯಾನ'ದ ಹೆಸರಿನಲ್ಲಿ 2023ರ ಆ.10ರಂದು ಮಂಡ್ಯದ ಸಂಜಯ್ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿದ್ದರು. ಜತೆಗೆ, ಚೆಲುವರಾಯ ಸ್ವಾಮಿ ಮತ್ತು ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ 6ರಿಂದ 8 ಲಕ್ಷ ರೂ. ಪಾವತಿಸುವಂತೆ ಅಡಿ ಬರಹ ಬರೆದು, ಕ್ಯೂಆರ್ ಕೋಡ್ ಸ್ಯಾನ್ ಜೊತೆಗೆ ಚೆಲುವರಾಯ ಸ್ವಾಮಿ ಅವರ ಪೋಟೋ ಇರುವ ಭಿತ್ತಿಪತ್ರವನ್ನು ಸಂಜಯ ಸರ್ಕಲ್ನಲ್ಲಿ ಅಂಟಿಸಿದ್ದರು.
ಈ ಸಂಬಂಧ ಮಂಡ್ಯದ ಕಾವೇರಿ ನಗರದ ರುದ್ರೇಗೌಡ ದೂರು ನೀಡಿದ್ದರು. ಅದನ್ನು ಆಧರಿಸಿ ಅರ್ಜಿದಾರರಾದ ಸಿ. ಟಿ. ಮಂಜುನಾಥ್, ಎಸ್. ಶಿವಕುಮಾರ್ ಆರಾಧ್ಯ, ಪ್ರಸನ್ನ ಕುಮಾರ್, ಶಿವ ಕುಮಾರ್ ಮತ್ತು ವಿನೂ ಭಾಯ್ ವಿರುದ್ಧ ಮಂಡ್ಯ ಪಶ್ಚಿಮ ಠಾಣಾ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.
ನಂತರ ತನಿಖೆ ಪೂರ್ಣಗೊಳಿಸಿ ಭಿತ್ತಿ ಪತ್ರ ಅಂಟಿಸಿ ಸಾರ್ವಜನಿಕ ಪ್ರದೇಶದ ಸೌಂದರ್ಯ ಹಾಳು ಮಾಡಿದ ಆರೋಪದ ಮೇಲೆ ಕರ್ನಾಟಕ ಮುಕ್ತ ಪ್ರದೇಶಗಳ ವಿರೂಪ ತಡೆ ಕಾಯ್ದೆಯಡಿ 2023ರ ಆ.30ರಂದು ಅಧೀನ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇದರಿಂದ ತಮ್ಮ ವಿರುದ್ಧದ ದೋಷಾರೋಪ ಪಟ್ಟಿ ಮತ್ತು ವಿಚಾರಣಾ ನ್ಯಾಯಾಲಯ ವಿಚಾರಣೆ ರದ್ದುಪಡಿಸುವಂತೆ ಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications