ಸಾಮಾಜಿಕ ಸಮಾನತೆಯ ಹರಿಕಾರ ದೇವರಾಜ್ ಅರಸ್
ಬೆಂಗಳೂರು, ಮಾರ್ಚ್ 30 : ಶ್ರೀಮಂತರ ಬಡವರ ಮನೆಗಳ ನಿರ್ಮಾಣದಲ್ಲಿ ಇರುವ ಅಸಮಾನತೆ ಸಮಾಜದಲ್ಲೂ ಇದೆ. ಆದರೆ, ದೇಶ ಕಟ್ಟುವಿಕೆಯು ಸಮಾನತೆ ಆಧಾರದ ಮೇಲೆ ನಡೆಯಬೇಕು ಎನ್ನುವ ಆಲೋಚನೆ 1972 ರಿಂದ 1979ರ ಎಂಟು ವರ್ಷಗಳ ದೀರ್ಘಕಾಲ ಕನ್ನಡ ನಾಡಿನ ಮುಖ್ಯಮಂತ್ರಿಯಾಗಿ ಚುಕ್ಕಾಣಿ ಹಿಡಿದ ಡಿ.ದೇವರಾಜ್ ಅರಸ್ ಅವರದ್ದಾಗಿತ್ತು.
ಈ ಹಿನ್ನೆಲೆಯಲ್ಲಿ 1972ರಲ್ಲಿ ಅಧಿಕಾರಕ್ಕೆ ಬಂದ ದೇವರಾಜ್ ಅರಸ್ ರಾಜ್ಯದ ಆರ್ಥಿಕ ವ್ಯವಸ್ಥೆಗೆ ಒಂದು ಹೊಸ ದಿಕ್ಕನ್ನು ನೀಡಲು ಯೋಜನೆಗಳನ್ನು ರೂಪಿಸಿ ಅವುಗಳನ್ನು ಅನುಷ್ಠಾನಕ್ಕೆ ತಂದರು. ಅವುಗಳಲ್ಲಿ ಬಡತನ ನಿರ್ಮೂಲನಾ ಯೋಜನೆ, ಕಿರು ಮತ್ತು ಮಧ್ಯಮ ಗಾತ್ರದ ನೀರಾವರಿ ಯೋಜನೆಗಳು, ಒಣಭೂಮಿ ಬೇಸಾಯಕ್ಕೆ ಪ್ರೋತ್ಸಾಹ, ಗೃಹ ಕೈಗಾರಿಕೆ, ಸಣ್ಣ ಕೈಗಾರಿಕೆಗಳ ಸ್ಥಾಪನೆ, ಇಪ್ಪತ್ತು ಅಂಶಗಳ ಕಾರ್ಯಕ್ರಮ ಮತ್ತು ಹಿಂದುಳಿದ ಪ್ರದೇಶಗಳ ಅಭಿವೃದ್ಧಿ ಯೋಜನೆಗಳು ಮುಖ್ಯವಾಗಿವೆ.[ಮೈಸೂರಲ್ಲಿ ಅರಸು ಜನ್ಮಶತಮಾನೋತ್ಸವಕ್ಕೆ ಚಾಲನೆ]

ಕೇವಲ ವ್ಯವಸಾಯದಿಂದಲೇ ರಾಜ್ಯ ಹಾಗೂ ದೇಶ ಅಬಿವೃದ್ಧಿ ಹೊಂದಲು ಸಾಧ್ಯವಿಲ್ಲ ಎಂಬುದನ್ನು ಮನಗಂಡಿದ್ದ ಅರಸ್, ಕೃಷಿ ಜೊತೆಯಲ್ಲಿ ಕೈಗಾರಿಕೆ ಬೆಳವಣಿಗೆಯಾಗಬೇಕು ಎಂದು ಒತ್ತಿ ಹೇಳಿದರು. ಆಲೋಚನೆಗೆ ತಕ್ಕಂತೆ ಬಹು ವರ್ಗಗಳಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಹಾವನೂರು ಆಯೋಗ ಹಾಗೂ ಶತಮಾನಗಳಿಂದ ಅಜ್ಞಾನ, ದಾಸ್ಯದಲ್ಲಿ ಕಾಲ ಕಳೆಯುತ್ತಿದ್ದ ಗೇಣಿದಾರರಿಗೆ ಭೂ ಸುಧಾರಣಾ ಕಾಯ್ದೆಯನ್ನು ಜಾರಿಗೆ ತಂದದ್ದು ಅವರ ದಿಟ್ಟ ನಿಲುವಿಗೆ ಹಾಗೂ ಕಾರ್ಯಕ್ಷಮತೆಯ ಉತ್ತುಂಗದ ನಿದರ್ಶನಗಳಾಗಿವೆ. [ಅರಸು ಹುಟ್ಟೂರು ದತ್ತು ಪಡೆದ ಸರ್ಕಾರ]
ಹುಣಸೂರಿನಲ್ಲಿ ಜನನ : ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಲ್ಲಳ್ಳಿಯಲ್ಲಿ 1915ರ ಅಗಸ್ಟ 20 ರಂದು ಜನಿಸಿದ ದೇವರಾಜ್ ಅರಸ್ ಅವರದ್ದು ಕೃಷಿಕರ ಬದುಕು. ಸ್ವಾತಂತ್ರ್ಯ ಪೂರ್ವದಲ್ಲೇ ಮೈಸೂರು ಸಂಸ್ಥಾನದ ಪ್ರಜಾಪ್ರತಿನಿಧಿ ಸಭೆಗೆ ಆಯ್ಕೆಯಾದರು. ಚಲೇ ಜಾವೋ ಚಳವಳಿಯಲ್ಲಿ ಸಕ್ರೀಯವಾಗಿ ಭಾಗವಹಿಸಿ ಕಾರಾಗೃಹವಾಸ ಅನುಭವಿಸಿದರು.
1972 ಹಾಗೂ 78ರ ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷವನ್ನು ಗೆಲ್ಲಿಸಿದ ಅವರು ರಾಜ್ಯದ ದೀರ್ಘಕಾಲ ಆಳಿದ ಮುಖ್ಯಮಂತ್ರಿಯೂ ಹೌದು. ಸಾಮಾಜಿಕ ಕಾಳಜಿ, ದಕ್ಷತೆ ಹಾಗೂ ಬದ್ಧತೆ ಇನ್ನೊಂದು ಹೆಸರೇ ದೇವರಾಜ್ ಅರಸ್ ಅವರು ಸಮಾಜವಾದವನ್ನು ಅನುಷ್ಠಾನಗೊಳಿಸಿದವರು.

ಉಳುವವನಿಗೆ ಭೂಮಿ, ಜೀತ ವಿಮುಕ್ತಿ, ಕೃಷಿ ಕಾರ್ಮಿಕರಿಗೆ ಕನಿಷ್ಠ ಕೂಲಿ, ಅಲ್ಪಸಂಖ್ಯಾತರಿಗೆ ಸಾಲದಿಂದ ಮುಕ್ತಿ, ಹಾವನೂರು ಆಯೋಗದ ಶಿಫಾರಸಿನ ಹಿಂದುಳಿದ ವರ್ಗದವರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ವೃದ್ಧಾಪ್ಯ ವೇತನ ಪದವೀಧರರಿಗೆ ಸ್ಟೈಫಂಡರಿ ಯೋಜನೆ, ಅಪೌಷ್ಠಿಕ ಮಕ್ಕಳಿಗೆ ಪೌಷ್ಠಿಕ ಆಹಾರ ಯೋಜನೆ, ಭಾಗ್ಯ ಜ್ಯೋತಿ, ಶಿಷ್ಯವೇತನ ಕಡಿಮೆ ವೆಚ್ಚದ ಗೃಹ ನಿರ್ಮಾಣ ಮುಂತಾದ ಅಸಾಧ್ಯ ಸಾಧನೆಗಳ ಸಾಧಿಸಿದ ದೇವರಾಜ್ ಅರಸ್ ಸಾಮಾಜಿಕ ಪರಿವರ್ತನೆಯ ಮೌನ ಹರಿಕಾರ.
ಈ ನಾಡು ಕಂಡ ಮಹಾನ್ ಚೇತನ ದೇವರಾಜ್ ಅರಸ್ ಅವರಲ್ಲಿ ರೈತನ ಆತ್ಮಾಭಿಮಾನ, ಶತ್ರುವನ್ನು ಪ್ರೇಮಿಸುವ ಮಾನವೀಯ ಪ್ರೀತಿ, ಹಿಡಿದ ಕಾರ್ಯ ಬಿಡದೇ ಪೂರ್ಣಗೊಳಿಸುವ ಛಲ, ದನಿಯಿಲ್ಲದವರ ದನಿಯಾಗಿ ಸಮಾಜವನ್ನು ಎದುರಿಸಿ ಪರಿವರ್ತನೆಗೆ ಪ್ರಯತ್ನಿಸಿ ಯಶಸ್ಸು ಕಂಡವರು.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ











Click it and Unblock the Notifications