ಕಾಡಿಗೆ ಹೋಗಲು ಒಲ್ಲೆ, ಬಿಳುವಾಲದಲ್ಲೇ ಇರುವೆ ಎನ್ನುತಿದೆ ಮಯೂರ!
ಚಿಕ್ಕಮಗಳೂರು, ಸೆಪ್ಟೆಂಬರ್.05: ಅರಣ್ಯದಲ್ಲಿರಬೇಕಾದ ರಾಷ್ಟ್ರ ಪಕ್ಷಿ ನವಿಲು ನಾಡನ್ನೇ ಮನೆ ಮಾಡಿಕೊಂಡು ಸ್ವಚ್ಛಂದವಾಗಿ ಆಡಿಕೊಂಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಬಿಳುವಾಲ ಗ್ರಾಮದಲ್ಲಿ ನಡೆದಿದೆ. ವಿಶೇಷವೆಂದರೆ ನವಿಲು ತನ್ನ ಗರಿ ಬಿಚ್ಚಿ ನೃತ್ಯ ಮಾಡಿಕೊಂಡು ಇಡೀ ಗ್ರಾಮವನ್ನೇ ರಂಜಿಸುತ್ತಿದ್ದು ಎಲ್ಲರ ಆಕರ್ಷಣೆಯಾಗಿದೆ.
ಕಳೆದ ಎರಡು ವರ್ಷದ ಹಿಂದೆ ಗ್ರಾಮದ ಸೋಮಶೇಖರ್ ಎಂಬುವವರು ಕಾಡಿನಲ್ಲಿ ಶ್ವಾನಗಳ ಬಾಯಿಗೆ ತುತ್ತಾಗುತ್ತಿದ್ದ ನವಿಲುಗಳ ಮೊಟ್ಟೆಯನ್ನು ತಂದು ತಮ್ಮ ಮನೆಯ ಕೋಳಿ ಮೊಟ್ಟೆಯ ಜೊತೆ ಇಟ್ಟಿದ್ದರು. ನಂತರ ಕೋಳಿ ನವಿಲು ಮರಿಗೆ ಜನ್ಮ ನೀಡಿತ್ತು.

ನಂತರ ನಾಡಿನ ಜನರೊಂದಿಗೆ ಬೆಳೆದ ನವಿಲು ಗ್ರಾಮದಲ್ಲೇ ತನ್ನ ಜೀವನ ಮುಂದುವರೆಸಿದೆ. ರೆಕ್ಕೆ ಬಿಚ್ಚಿ ನಾಟ್ಯವಾಡುತ್ತ ಇಡೀ ಗ್ರಾಮವನ್ನು ರಂಜಿಸುತ್ತಿದ್ದು, ಎಲ್ಲರ ಆಕರ್ಷಣೆಯಾಗಿದೆ. ಇಡೀ ಗ್ರಾಮದ ಜನ ನವಿಲು ನಾಟ್ಯವಾಡುತ್ತಿದ್ದರೆ ಸೆಲ್ಫಿ ತೆಗೆದುಕೊಂಡು ಎಂಜಾಯ್ ಮಾಡುತ್ತಿದ್ದಾರೆ.

ಎಷ್ಟೋ ಭಾರಿ ಸೋಮಶೇಖರ್ ನವಿಲನ್ನು ಕಾಡಿಗೆ ಬಿಟ್ಟು ಬಂದರೂ ಗ್ರಾಮವನ್ನು ತೊರೆಯದ ನವಿಲು ಮತ್ತೆ ವಾಪಾಸ್ ಗ್ರಾಮಕ್ಕೆ ತೆರಳುತ್ತಿರುವುದು ಎಲ್ಲರ ಆಶ್ಚರ್ಯಕ್ಕೆ ಕಾರಣವಾಗಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications