ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರತಿಭಟನೆ ಕೈ ಬಿಡಲು ಪೊಲೀಸರಿಗೆ ಪೇಜಾವರ ಶ್ರೀ ಕರೆ

By ಒನ್ ಇಂಡಿಯಾ ಪ್ರತಿನಿಧಿ
|
Google Oneindia Kannada News

ಉಡುಪಿ, ಜೂನ್ 02 : 'ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪೊಲೀಸರು ನಡೆಸಲು ಉದ್ದೇಶಿಸಿರುವ ಪ್ರತಿಭಟನೆಯನ್ನು ವಾಪಸ್ ಪಡೆಯಬೇಕು. ಸರ್ಕಾರ ಆರಕ್ಷಕರ ಬೇಡಿಕೆಗಳಿಗೆ ಸ್ಪಂದಿಸಿ ಅವರಿಗೆ ನ್ಯಾಯವನ್ನು ಒದಗಿಸಬೇಕು' ಎಂದು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥರು ಮನವಿ ಮಾಡಿದ್ದಾರೆ.

ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀಗಳು, 'ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪೊಲೀಸರು ಜೂ.4ರಂದು ರಾಜ್ಯಾದ್ಯಂತ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯದ ರಕ್ಷಣೆಯ ವಿಶೇಷ ಹೊಣೆ ಹೊತ್ತಿರುವ ಆರಕ್ಷಕರ ಮುಷ್ಕರದಿಂದ ಜನರಿಗೆ ತೊಂದರೆಯಾಗುತ್ತದೆ' ಎಂದರು. [ಪೊಲೀಸರ ಪ್ರತಿಭಟನೆ ಏಕೆ?]

pejawar seer

'ಜನರ ದೈನಂದಿನ ವ್ಯವಹಾರ, ರಕ್ಷಣೆ, ಭದ್ರತೆಗಳ ವ್ಯವಸ್ಥೆಗಳೆಲ್ಲವೂ ಅಸ್ತವ್ಯಸ್ತವಾಗುತ್ತದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಆರಕ್ಷಕರು ತಮ್ಮ ನಿರ್ಧಾರವನ್ನು ಬದಲಿಸಿ ಮುಷ್ಕರವನ್ನು ಸ್ಥಗಿತಗೊಳಿಸಬೇಕು. ಬೇಡಿಕೆಗಳಿಗೆ ಸ್ಪಂದಿಸಿ ಅವರಿಗೆ ನ್ಯಾಯವನ್ನು ಒದಗಿಸಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತೇನೆ' ಎಂದು ಹೇಳಿದರು. [ಪೊಲೀಸರ ಪ್ರತಿಭಟನೆ : ಶಶಿಧರ್ ವೇಣುಗೋಪಾಲ್ ಬಂಧನ]

ಶಿರೂರು ಶ್ರೀ ಬೆಂಬಲ : ಹಗಲು-ರಾತ್ರಿ ಎನ್ನದೆ ಸಮಾಜದ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಾಮಾಣಿಕ ಕರ್ತವ್ಯ ನಿರ್ವಹಿಸುವ ಪೊಲೀಸರ ನ್ಯಾಯಸಮ್ಮತ ಬೇಡಿಕೆಗೆ ಬೆಂಬಲ ಸೂಚಿಸಿರುವ ಶಿರೂರು ಮಠದ ಶ್ರೀಲಕ್ಷ್ಮೀವರ ತೀರ್ಥರು, ಸರಕಾರ ಕೂಡಲೇ ಪೊಲೀಸ್ ಇಲಾಖೆಯ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ಹೇಳಿದ್ದಾರೆ.[ಪ್ರತಿಭಟನೆ : ಪೊಲೀಸರಿಂದ ಬಲವಂತದ ಮುಚ್ಚಳಿಕೆ]

English summary
The Akhila Karnataka Police Mahasabha called policemen to abstain from duty by applying leave on June 4, 2016. Udupi Sri Vishvesha Tirtha swamiji has urged them against the move.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X