ರಾಜ್ಯದ 8 ಸಾಧಕರಿಗೆ ಪದ್ಮಶ್ರೀ, ಪೇಜಾವರ ಶ್ರೀಗಳಿಗೆ ಪದ್ಮ ವಿಭೂಷಣ
ನವದೆಹಲಿ, ಜನವರಿ 25: ಇತ್ತೀಚೆಗಷ್ಟೆ ಇಹಲೋಕ ತ್ಯಜಿಸಿದ ಪೇಜಾವರ ಶ್ರೀಗಳಿಗೆ ಮರಣೋತ್ತರ ಪದ್ಮ ವಿಭೂಷಣ ಪ್ರಶಸ್ತಿ ನೀಡಲಾಗಿದೆ. ಈ ಬಾರಿ ಏಳು ಮಂದಿ ಸಾಧಕರಿಗೆ ಪದ್ಮ ವಿಭೂಷಣ ನೀಡಲಾಗಿದ್ದು, ಅದರಲ್ಲಿ ಪೇಜಾವರ ಶ್ರೀಗಳ ಸಹ ಒಬ್ಬರಾಗಿದ್ದಾರೆ.
ಕರ್ನಾಟಕದ ಆರು ಮಂದಿ ಸಾಧಕರಿಗೆ ಪದ್ಮಶ್ರೀ ಗೌರವ ನೀಡಲಾಗಿದ್ದು, ಶಿಕ್ಷಣ ಸಂತ ಹೆರಕಳ ಹಾಜಬ್ಬ, ವೃಕ್ಷಮಾತೆ ತುಳಸಿ ಗೌಡ, ಕ್ರೀಡಾಸಾಧಕ ಎಂಪಿ ಗಣೇಶ್, ವೈದ್ಯಕೀಯ ಕ್ಷೇತ್ರ ಸಾಧಕ ಬೆಂಗಳೂರು ಗಂಗಾಧರ, ವ್ಯಾಪಾರ ವಿಭಾಗದಲ್ಲಿ ಗಣೇಶ್ ಗೋಯೆಂಕಾ, ವಿಜಯ ಸಂಕೇಶ್ವರ, ಶಿಕ್ಷಣ-ಸಾಹಿತ್ಯ-ಪತ್ರಿಕೋದ್ಯಮ ವಿಭಾಗದಲ್ಲಿ ಕೆ.ವಿ.ಸಂಪತ್, ವಿಧೂಶಿ ಜಯಲಕ್ಷ್ಮಿ ಅವರಿಗೆ ಪದ್ಮ ಶ್ರೀ ಗೌರವ ಪ್ರಾಪ್ತಿಯಾಗಿದೆ.
ಏಳು ಮಂದಿ ಸಾಧಕರಿಗೆ ಪದ್ಮ ವಿಭೂಷಣ ನೀಡಲಾಗಿದ್ದು, ಅದರಲ್ಲಿ ನಾಲ್ಕು ಮಂದಿಗೆ ಮರಣೋತ್ತರವಾಗಿ ಈ ಗೌರವ ನೀಡಲಾಗಿದೆ. ಮಾಜಿ ಕೇಂದ್ರ ಸಚಿವರಾದ ಜಾರ್ಜ್ ಫರ್ನಾಂಡೀಸ್, ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್ ಅವರಿಗೆ ಮರಣೋತ್ತರವಾಗಿ ಪದ್ಮ ವಿಭೂಷಣ ನೀಡಲಾಗಿದೆ.

ಇದರ ಜೊತೆಗೆ ಅಂತರರಾಷ್ಟ್ರೀಯ ಖ್ಯಾತ ಬಾಕ್ಸರ್ ಮೇರಿ ಕೋಮ್, ಉತ್ತರ ಪ್ರದೇಶದ ಚನ್ನೂಲಾಲ್ ಮಿಶ್ರಾ ಅವರಿಗೆ ಕಲಾ ಕ್ಷೇತ್ರದ ಸಾಧನೆಗೆ, ಸಾರ್ವಜನಿಕ ಜೀವನದ ಸಾಧನೆಗೆ ಮಾರಿಷಸ್ನ ಅನಿರುದ್ಧ ಜುಗನೌತ್ ಅವರಿಗೆ ಪದ್ಮ ವಿಭೂಷಣ ನೀಡಲಾಗಿದೆ.
ಪದ್ಮ ಭೂಷಣ ಪ್ರಶಸ್ತಿಯನ್ನು 16 ಮಂದಿಗೆ ನೀಡಲಾಗಿದ್ದು, ಬ್ಯಾಡ್ಮಿಂಟನ್ ಪಟು ಪಿ.ವಿ.ಸಿಂಧು ಅವರಿಗೆ ಈ ಗೌರವ ಪ್ರಾಪ್ತಿಯಾಗಿದೆ. ಉದ್ಯಮಿ ಆನಂದ್ ಮಹೀಂದ್ರಾ ಅವರಿಗೂ ಪದ್ಮ ಭೂಷಣ ಗೌರವ ದೊರೆತಿದೆ.
ಪದ್ಮಶ್ರೀ ಪ್ರಶಸ್ತಿಯನ್ನು ಒಟ್ಟು 118 ಮಂದಿಗೆ ನೀಡಲಾಗಿದ್ದು, ಇದರಲ್ಲಿ ಕರ್ನಾಟಕ ಏಳು ಸಾಧಕರು ಇದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications