ಸಂವಿಧಾನ ಬದಲಾಯಿಸಬೇಕು ಎಂದು ಪೇಜಾವರಶ್ರೀ ಹೇಳಿಕೆ ಆತಂಕಕಾರಿ ಮಾತ್ರವಲ್ಲ ಬೆದರಿಕೆಯೂ ಹೌದು: ಬಿ ಕೆ ಹರಿಪ್ರಸಾದ್
ಬೆಂಗಳೂರು, ನವೆಂಬರ್ 25: ಸಂವಿಧಾನ ಬದಲಾಯಿಸಬೇಕು ಎಂದು ಪೇಜಾವರಶ್ರೀ ಹಾಗೂ ಸಂಘ ಪರಿವಾರ ನಿಷ್ಠೆಯ ಸ್ವಾಮೀಜಿಗಳು ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವುದು ಆತಂಕಕಾರಿ ಹಾಗೂ ಕಳವಳಕಾರಿ ಮಾತ್ರವಲ್ಲ ಸಂವಿಧಾನಕ್ಕೆ ಬೆದರಿಕೆಯೂ ಹೌದು ಎಂದು ಹೇಳಿದರು.
ಈ ಕುರಿತು ಪ್ರತಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು, ಸಂವಿಧಾನ ವಿರೋಧಿ ಸಂಘಟನೆ ಆರ್ ಎಸ್ ಎಸ್ ನೂರು ವರ್ಷಕ್ಕೆ ಕಾಲಿಡುತ್ತಿರುವುದಕ್ಕೂ, ಸಂವಿಧಾನ ಬದಲಾಯಿಸಬೇಕು ಎಂದು ಪರಿವಾರ ನಿಷ್ಟೆಯ ಯತಿಗಳು ಬೀದಿಗಿಳಿದು ಮಾತಾಡುತ್ತಿರುವುದಕ್ಕೂ ಸಂಬಂಧವಿದೆ. ಇದು ಸಂಘ ಪರಿವಾರದ ನೂರು ವರ್ಷಗಳ ಸಂಭ್ರಮಾಚಾರಣೆಯ ಕಾರ್ಯಕ್ರಮದ ಗುಪ್ತ ಸೂಚಿ ಇರುವುದು ಸ್ಪಷ್ಟ ಎಂದು ಹೇಳಿದರು.

ಬುದ್ಧ, ಬಸವಾದಿ ಶಿವ ಶರಣರು, ನಾರಾಯಣ ಗುರುಗಳಂತಹ ಸಮಾಜ ಸುಧಾರಕರ ಆಶಯಗಳು ಹಾಗೂ ಗಾಂಧಿ,ನೆಹರೂ,ಬಾಬಾ ಸಾಹೇಬರಂತಹ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಪರಿಶ್ರಮದಿಂದ ರಚಿತವಾಗಿರುವ "ಸರ್ವ ಧರ್ಮ, ಸಹಬಾಳ್ವೆ"ಯ ತಿರುಳಿರುವ ಸಂವಿಧಾನವನ್ನು ಬದಲಾಯಿಸುವ ಹೊರಟಿರುವ ಪೇಜಾವರರು ತಮಗೆ ಗೌರವ ನೀಡುವ ಸಂವಿಧಾನ ಯಾವುದು ಎಂದು ಮೊದಲು ಸ್ಪಷಪಡಿಸಲಿ ಎಂದು ಬಿ ಕೆ ಹರಿಪ್ರಸಾದ್ ಹೇಳಿದರು.
ಪೇಜಾವರರು ಬಯಸುತ್ತಿರುವ ಗೌರವ ನೀಡುವ ವ್ಯವಸ್ಥೆಯಲ್ಲಿ ಸಾವಿರಾರು ವರ್ಷಗಳಿಂದ ದಲಿತರು-ಶೂದ್ರರು ಶ್ರೇಷ್ಟತೆಯ ವ್ಯಸನಕ್ಕೆ ತಲೆಬಾಗಬೇಕೆ? ಮಹಿಳೆಯರು ಅತ್ಯಾಚಾರಿಗಳನ್ನು ಆರಾಧಿಸಬೇಕೆನ್ನುವ ವ್ಯವಸ್ಥೆ ಇರಬೇಕೆ? ಜೀತದಾರರು, ಶ್ರಮಿಕ ವರ್ಗ ಮಾಲೀಕರ ಅಡಿಯಾಳಾಗಿರಬೇಕೆ? ನೂರಾರು ಕೋಟಿ ಜನಸಂಖ್ಯೆಯ ಭಾರತದಲ್ಲಿ ಪ್ರತಿಯೊಬ್ಬರು ಸ್ವಾಭಿಮಾನದಿಂದ ಬದುಕಲು ಸಂವಿಧಾನ ಅವಕಾಶ ನೀಡಿದೆ. ಆದರೆ ಪೇಜಾವರ ಸ್ವಾಮೀಜಿಗಳು ಯಾವ ವ್ಯವಸ್ಥೆಯಲ್ಲಿ ತಮ್ಮ ಗೌರವವನ್ನು ಬಯಸುತ್ತಿದ್ದಾರೆ ಎಂದೂ ಬಹಿರಂಗವಾಗಿ ಹೇಳಲಿ.
ಸ್ವಾತಂತ್ರ್ಯ ಪೂರ್ವ ಭಾರತದ ತಿಹಾಸದ ಬಗ್ಗೆ ಪುರಾವೇ ಇಲ್ಲದೆ ಮಾತಾಡಿರುವ ಸ್ವಾಮೀಜಿಗಳು ಒಂದಿಷ್ಟು ಇತಿಹಾಸ ಅರಿತು ಮಾತಾಡಲಿ. ಹರಿದು ಹಂಚಿ ಹೋಗಿದ್ದ ದೇಶವನ್ನು ಒಕ್ಕೂಟ ವ್ಯವಸ್ಥೆಯನ್ನಾಗಿ ಮಾಡಿ ಭಾರತವಾಗಿಸಲು ನಮ್ಮ ಪೂರ್ವಜರ ಪರಿಶ್ರಮವನ್ನು ಅವಮಾನಿಸುವ ಹಕ್ಕೂ ಸ್ವಾಮೀಜಿಗಳಿಗಿಲ್ಲ.
ಸಂವಿಧಾನದ ಬದಲಾಗಿ ಮನುಸ್ಮೃತಿ ಜಾರಿ ಮಾಡಲು ಹೊರಟಿರುವ ಸಂಘ ಪರಿವಾರದ ಹಿಡನ್ ಅಜೆಂಡಾವನ್ನೇ ಪೇಜಾವರರು ಮುಂದುವರೆಸುತ್ತಿದ್ದಾರೆ. ದಲಿತ-ಹಿಂದುಳಿದ-ಶೋಷಿತ ಸಮುದಾಯಗಳು ಸೇರಿದಂತೆ ಭಾರತದ ಪ್ರತಿಯೊಬ್ಬ ಪ್ರಜೆಯೂ ಸ್ವಾಭಿಮಾನ-ಘನತೆಯಿಂದ ಬದುಕುಬೇಕಾದ ವ್ಯವಸ್ಥೆ ಇರುವುದು ಸಂವಿಧಾನದಡಿಯಲ್ಲಿ ಮಾತ್ರ. ಸಾವಿರಾರು ವರ್ಷಗಳ ಶ್ರೇಣಿಕೃತ ವ್ಯವಸ್ಥೆಯನ್ನು ಪೋಷಿಸುತ್ತಿರುವ ಪೇಜಾವರ ಸ್ವಾಮೀಜಿಗಳಿಗೆ ಸಂವಿಧಾನದಡಿಯಲ್ಲಿ ಬದುಕುವ ಹಕ್ಕಿದೆ. ಸಮಾನತೆ ಬಿತ್ತಿದ ನಮ್ಮ ಪೂರ್ವಜರನ್ನು ಅವಮಾನಿಸುವ, ಸಂವಿಧಾನಕ್ಕೆ ದ್ರೋಹ ಬಗೆಯುವ ಹಕ್ಕಿಲ್ಲ ಎಂಬುದು ಮನವರಿಕೆಯಾಗಲಿ ಎಂದು ಹೇಳಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications