ಅಮೆರಿಕಾ ವಿದ್ಯಾರ್ಥಿಗಳು ಧರ್ಮಸ್ಥಳಕ್ಕೆ ಬಂದಿದ್ದು ಯಾಕೆ?
ಬೆಳ್ತಂಗಡಿ,ಜನವರಿ,07: ಅಮೆರಿಕ ಪೆನ್ಸಿಲ್ವೇನಿಯ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಫೆಮಿಡಾ ಹ್ಯಾಂಡಿ ಹಾಗೂ 12 ವಿದ್ಯಾರ್ಥಿಗಳನ್ನೊಳಗೊಂಡ ತಂಡವು ಧರ್ಮಸ್ಥಳಕ್ಕೆ ಭೇಟಿ ನೀಡಿ 2 ದಿನಗಳ ಕಾಲ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಕಾರ್ಯಕ್ರಮಗಳ ಕುರಿತು ವಿಶೇಷ ಅಧ್ಯಯನ ನಡೆಸಿತು.
ಗ್ರಾಮೀಣಾಭಿವೃದ್ಧಿ, ಮಹಿಳಾ ಸಬಲೀಕರಣ ಕುರಿತಂತೆ ಅಧ್ಯಯನ ನಡೆಸಲು ಜನವರಿ 3ರ ಭಾನುವಾರ ಆಗಮಿಸಿದ್ದ ಅಮೆರಿಕ ಪೆನ್ಸಿಲ್ವೇನಿಯ ವಿಶ್ವವಿದ್ಯಾಲಯ ತಂಡವು ಗ್ರಾಮೀಣಾಭಿವೃದ್ಧಿ ಯೋಜನೆ ಅಧ್ಯಕ್ಷ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರು ಗ್ರಾಮೀಣಾಭಿವೃದ್ಧಿ, ಮಹಿಳಾ ಸಬಲೀಕರಣ ಹಾಗೂ ಬದಲಿ ಇಂಧನ ಕ್ಷೇತ್ರದಲ್ಲಿ ತಮಗೆ ಆದ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.[ಧರ್ಮಸ್ಥಳ ದೇವಾಲಯ ವಶ ಪಡಿಸಿಕೊಳ್ಳಲು ಹೊರಟಿತ್ತೇ ಸರಕಾರ?]

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಕೇಂದ್ರ ಕಚೇರಿ ಹಾಗೂ ಉತ್ಪಾದನಾ ಘಟಕ ಹಾಗೂ ಮಾರಾಟ ಮಳಿಗೆಗೆ ವಿದ್ಯಾರ್ಥಿ ತಂಡ ಭೇಟಿ ನೀಡಿತ್ತು. ಆಗ ತಂಡಕ್ಕೆ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕಿ ಮಮತಾ ಹರೀಶ್ ರಾವ್ ಸಂಸ್ಥೆಯ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.[ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಸಮಯ ಬದಲಾವಣೆ]
ಉಡುಪಿ ಜಿಲ್ಲೆಯಲ್ಲಿ ಯೋಜನೆ ಪ್ರಾಯೋಜಿತ ಪ್ರಗತಿ ಬಂಧು, ಸ್ವಸಹಾಯ, ಜ್ಞಾನವಿಕಾಸ ಕೇಂದ್ರ, ಒಕ್ಕೂಟ ಸಭೆಗೆ ತಂಡವು ಭೇಟಿ ನೀಡಿ ಅಧ್ಯಯನ ಕೈಗೊಂಡಿತು. ಸಿರಿ ನಿರ್ದೇಶಕಿ ಮನೋರಮಾ ಭಟ್, ಉಪನ್ಯಾಸಕ ವಸಂತ ನಾಯಕ್ ಉಪಸ್ಥಿತರಿದ್ದರು. ನಿಟ್ಟೆ ಹಾಗೂ ಪೆನ್ಸಿಲ್ವೇನಿಯಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ವಿನಿಮಯ ಯೋಜನೆಯಡಿ ಭಾರತಕ್ಕೆ ಆಗಮಿಸಿದ ಈ ತಂಡವು 11 ದಿನಗಳ ಕಾಲ ನಿಟ್ಟೆಯ ಪ್ರೊಫೆಸರ್ ವಿನೋದ್ ದೀಕ್ಷಿತ್ ನೇತೃತ್ವದಲ್ಲಿ ಅಧ್ಯಯನ ನಡೆಸಲಿದೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications