Government Employees: ಸರ್ಕಾರಿ ನೌಕರರಿಗೆ ಪಿಂಚಣಿ ಸೌಲಭ್ಯ: ಸರ್ಕಾರ ಮಹತ್ವದ ಆದೇಶ
ಬೆಂಗಳೂರು, ಮಾರ್ಚ್ 19: ಕರ್ನಾಟಕದ ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆ (ಎನ್ಪಿಎಸ್) ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿಗೊಳಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ಹಳೇ ಪಿಂಚಣಿ ಯೋಜನೆ ಜಾರಿಯಾಗಲಿದೆ ಎಂದು ಸರ್ಕಾರಿ ನೌಕರರು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಆ ನಿರೀಕ್ಷೆ ಹುಸಿಯಾಗಿದ್ದು, ನಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇನೆ. ಸ್ವಲ್ಪ ತಡವಾದರೂ ಹಳೆ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿಗೊಳಿಸುತ್ತೇವೆ ಎಂದು ಸರ್ಕಾರ ತಿಳಿಸಿದೆ.
ಹಳೆ ಪಿಂಚಣಿ ಯೋಜನೆ ಮರು ಜಾರಿ ಒಂದು ಕಡೆಯಾದರೇ. ಇತ್ತ ನಿವೃತ್ತಿ ಹೊಂದುವ ರಾಜ್ಯ ಸರ್ಕಾರಿ ನೌಕರರಿಗೆ ಪಿಂಚಣಿ ಸೌಲಭ್ಯ ಕುರಿತು ರಾಜ್ಯ ಸರ್ಕಾರ ಮಹತ್ವ ಆದೇಶವನ್ನ ಹೊರಡಿಸಿದೆ. ಖಜಾನೆ-2ರ ತಂತ್ರಾಂಶದ ಮುಖಾಂತರ ಮಹಾಲೇಖಪಾಲರಿಗೆ ವಯೋ ನಿವೃತ್ತಿ/ಸ್ವ- ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿ ಅರ್ಜಿಗಳನ್ನು ಸಲ್ಲಿಸುವ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸುವ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.

ಆದೇಶದಲ್ಲಿ ಏನಿದೆ?
ಓದಲಾದ (1)ರ ಆದೇಶದಲ್ಲಿ ಪಿಂಚಣಿ ಪ್ರಸ್ತಾವನೆಗೆ ಸಂಬಂದಿಸಿದ ಕಾಗದ ಪತ್ರಗಳನ್ನು ಮಹಾಲೇಖಪಾಲರಿಗೆ ಸಲ್ಲಿಸಲು ಸೂಚಿಸಲಾಗಿದೆ. ಓದಲಾದ (2) ರ ಆದೇಶದಲ್ಲಿ ಕರ್ನಾಟಕ ರಾಜ್ಯದ ಪಿಂಚಣೆಯನ್ನು ಸಾರ್ವಜನಿಕ ಕ್ಷೇತ್ರ ಬ್ಯಾಂಕುಗಳ ಮೂಲಕ ಪಾವತಿ ಮಾಡುವ ಪ್ರಕ್ರಿಯೆ ಮತ್ತು ಅನುಸರಿಸಬೇಕಾದ ಕ್ರಮಗಳನ್ನು ನೀಡಲಾಗಿದೆ.
ಓದಲಾದ (3)ರ ಆದೇಶದಲ್ಲಿ ಸಿಪಿಪಿಸಿ ಹೊಂದಿರುವ ಸಾರ್ವಜನಿಕ ಕ್ಷೇತ್ರ ಬ್ಯಾಂಕುಗಳೊಂದಿಗೆ ಅನುಕಲನದ ಮುಖಾಂತರ ಖಜಾನೆ-2 ರಲ್ಲಿ ಪಿಂಚಣಿ ದತ್ತಾಂಶವನ್ನು/ಲೆಕ್ಕ ಸಮನ್ವಯವನ್ನು ಅನ್ ಲೈನ್ ನಲ್ಲಿ ನಿರ್ವಹಿಸುವ ಉದ್ದೇಶದಿಂದ ಅರ್ಹ ರಾಜ್ಯ ಪಿಂಚಣಿ ನೌಕರರಿಗೆ ಆದೇಶದಲ್ಲಿ ನೀಡಿರುವ ಬ್ಯಾಂಕುಗಳ ಮುಖಾಂತರ ಪಾವತಿ ಮಾಡಲು ಅಭಿಮತವನ್ನು ನೀಡಬಹುದಾಗಿದೆ.
ಓದಲಾದ (4) ರಲ್ಲಿ ಖಜಾನೆ ಇಲಾಖೆಯ ಕಡತದಲ್ಲಿ ಕೆ.ಸಿ.ಎಸ್.ಆರ್. ನಿಯಮ 326 ಮತ್ತು 332 (ಸಿ) ರನ್ನಯ ವಯೋ ನಿವೃತ್ತಿ/ಸ್ವ-ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿ ಅರ್ಜಿಗಳನ್ನು ಅವರು ನಿವೃತ್ತಿ ಹೊಂದುವ 3 ತಿಂಗಳ ಮುಂಚಿತವಾಗಿ ಮಹಾಲೇಖಪಾಲರಿಗೆ ಸಲ್ಲಿಸುವುದು ಎಂದು ಇರುತ್ತದೆ ಹಾಗೂ ಕೆ.ಸಿ.ಎಸ್.ಆರ್.ನಿಯಮ 327 (1) ರನ್ವಯ ಎಲ್ಲಾ ಪತ್ರಂಕಿತ ಅಧಿಕಾರಿಗಳ ಪಿಂಚಣಿ ಪತ್ರಗಳನ್ನು ನಮೂನೆ-7ರಲ್ಲಿ ಒಂದು ವರ್ಷ ಮುಂಚಿತವಾಗಿ ಮಹಾಲೇಖಪಾಲರಿಗೆ ಸಲ್ಲಿಸಬೇಕಿರುತ್ತದೆ.
ಪ್ರಸ್ತುತ ಖಜಾನೆ-2 ಮತ್ತು ಅಕೌಂಟೆಂಟ್ ಜನರಲ್ ತಂತ್ರಾಂಶದ ನಡುವಿನ ಅನುಕಲನದ ಪ್ರಯೋಗಾತ್ಮಕ ಹಂತ ಪೂರ್ಣಗೊಂಡಿರುವುದರಿಂದ ಪ್ರಾಯೋಗಿಕವಾಗಿ ಜನವರಿ 2025 ರಿಂದ ಮಾರ್ಚ್ 2025ರವರೆಗೆ ಮೂರು ತಿಂಗಳ ಕಾಲ ರಾಜ್ಯದ ಎಲ್ಲಾ ಹಣ ಸೆಳೆಯುವ ಮತ್ತು ಬಟವಾಡ ಅಧಿಕಾರಿಗಳು (ಡಿಡಿಓ) ವಯೋ ನಿವೃತ್ತಿ/ಸ್ವ-ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿ ಅರ್ಜಿಗಳನ್ನು ಆನ್ಲೈನ್ ಮತ್ತು ಭೌತಿಕವಾಗಿ ಮಹಾಲೇಖಪಾಲರಿಗೆ ಸಲ್ಲಿಸುವುದನ್ನು ಅನುಷ್ಠಾನಗೊಳಿಸಲು ಆದೇಶ ಹೊರಡಿಸುವಂತೆ ಖಜಾನೆ ಆಯುಕ್ತರು ಕೋರಿರುವ ಪ್ರಸ್ತಾವನೆಯನ್ನು ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಲಾಗಿದೆ.
ಸರ್ಕಾರಿ ಆದೇಶ ಸಂಖ್ಯೆ: AE-PEN/ 39/2025, ಬೆಂಗಳೂರು, ದಿನಾಂಕ:14.3.2025. ಖಜಾನೆ-2ರ ತಂತ್ರಾಂಶದ ಮುಖಾಂತರ ಪ್ರಾಯೋಗಿಕವಾಗಿ ಏಪ್ರಿಲ್ 2025 ರಿಂದ ಮೂರು ತಿಂಗಳ ಕಾಲ ರಾಜ್ಯದ ಎಲ್ಲಾ ಹಣ ಸೆಳೆಯುವ ಮತ್ತು ಬಟವಾಡೆ ಅಧಿಕಾರಿಗಳು (ಡಿಡಿಓ) ವಯೋ ನಿವೃತ್ತಿ/ಸ್ವ-ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿಗೆ ಸಂಬಂಧಿಸಿದ ಅರ್ಜಿಗಳನ್ನು ಅನ್ಲೈನ್ ನಲ್ಲಿ ದಾಖಲಿಸಿ ಮಂಜೂರು ಮಾಡುವುದು ಮತ್ತು ಭೌತಿಕವಾಗಿ ಸಿದ್ಧಪಡಿಸಿರುವ ಅರ್ಜಿ ಹಾಗೂ ಸಂಬಂದಿಸಿದ ಎಲ್ಲಾ ದಾಖಲೆಗಳನ್ನು ಮಹಾಲೇಖಪಾಲರಿಗೆ ನಿಯಮಾನುಸಾರ ಸಲ್ಲಿಸಲು ಆದೇಶಿಸಿದೆ.
ಈ ಮೇಲಿನ ಪ್ರಾಯೋಗಿಕ ಹಂತವು ಯಶಸ್ವಿಯಾದಲ್ಲಿ ಖಜಾನೆ-2ರ ತಂತ್ರಾಂಶದ ಮುಖಾಂತರ ಪಿಂಚಣಿ ಅರ್ಜಿಗಳನ್ನು ಮಹಾಲೇಖಪಾಲರಿಗೆ ಸಲ್ಲಿಸಲು ಮುಂದುವರೆಸುವುದು. ಖಜಾನೆ-2ರ ತಂತ್ರಾಂಶದ ಮುಖಾಂತರ ವಯೋ ನಿವೃತ್ತಿ/ಸ್ಮ-ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿ ಅರ್ಜಿಗಳನ್ನು ಸಿದ್ಧಪಡಿಸುವ ಪ್ರಕ್ರಿಯೆಯಲ್ಲಿ ವಿವಿಧ ಪಾತ್ರದಾರಿಗಳು ಅನುಸರಿಸಬೇಕಾದ ಕ್ರಮಗಳನ್ನು ಈ ಆದೇಶದ ಅನುಬಂಧದಲ್ಲಿ ಲಗತ್ತಿಸಿದೆ.












Click it and Unblock the Notifications