ಕೊವಿಡ್-19 ನೆಗೆಟಿವ್ ಬಂದರೂ ಮೊಬೈಲ್ ಸಂಖ್ಯೆಗೆ SMS
ಬೆಂಗಳೂರು, ಜುಲೈ.20: ಕೊರೊನಾವೈರಸ್ ಸೋಂಕಿನ ಭೀತಿಯಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿದ್ದೀವಿ. ಪಾಸಿಟಿವ್ ಬರುತ್ತೋ, ನೆಗೆಟಿವ್ ಬರುತ್ತೋ. ಪಾಸಿಟಿವ್ ಬಂದರೆ ಅಷ್ಟೇ ನಮಗೆ ಮಾಹಿತಿ ಕೊಡ್ತಾರಂತೆ. ನೆಗೆಟಿವ್ ಇದ್ದರೆ ಯಾವುದೇ ಮಾಹಿತಿ ಸಿಗೋದಿಲ್ಲ.
Recommended Video
ಕೊವಿಡ್-19 ಟೆಸ್ಟ್ ಕುರಿತು ಯಾವುದೇ ವರದಿಯ ಬಗ್ಗೆ ನಮಗೆ ಗೊತ್ತೇ ಆಗೋದಿಲ್ಲ. ಹೀಗೆ ಭಯದಲ್ಲೇ ಕಾಲ ಕಳೆಯುತ್ತಿದ್ದ ಜನರ ಆತಂಕವನ್ನು ನಿವಾರಿಸುವ ನಿಟ್ಟಿನಲ್ಲಿ ಸರ್ಕಾರದ ಹೊಸ ಸುತ್ತೋಲೆಯನ್ನು ಹೊರಡಿಸಿದೆ.
ಒಮ್ಮೆ ಕೊರೊನಾವೈರಸ್ ತಪಾಸಣೆಗೆ ಒಳಗಾದ ವ್ಯಕ್ತಿಗೆ ಸೋಂಕು ಪಾಸಿಟಿವ್ ಬಂದರೂ ನೆಗೆಟಿವ್ ಬಂದರೂ ಆತನಿಗೆ ಮಾಹಿತಿ ನೀಡಬೇಕು. ಎಸ್ಎಂಎಸ್ ಮೂಲಕ ಕಡ್ಡಾಯವಾಗಿ ಮಾಹಿತಿ ನೀಡುವಂತೆ ಖಡಕ್ ಸೂಚನೆ ನೀಡಲಾಗಿದೆ.

ಪಾಸಿಟಿವ್ ವರದಿ ಬಂದರೆ ಎಸ್ಎಂಎಸ್
ಕೊರೊನಾವೈರಸ್ ಸೋಂಕು ತಪಾಸಣೆ ಮಾಡಿಸಿಕೊಂಡ ಪ್ರತಿಯೊಬ್ಬರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ವಿಳಾಸದ ವಿವರವನ್ನು ನೀಡಿರುತ್ತಾರೆ. ಈ ಮೊದಲು ಸೋಂಕು ಪಾಸಿಟಿವ್ ಬಂದರೆ ಮೊದಲಿಗೆ ಮೊಬೈಲ್ ಗೆ ಸಂದೇಶ ರವಾನಿಸಿ, ನಂತರ ಸ್ವತಃ ವೈದ್ಯಕೀಯ ಸಿಬ್ಬಂದಿಯೇ ಆ ವಿಳಾಸಕ್ಕೆ ತೆರಳಿ ಸೋಂಕಿತನನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗಳಿಗೆ ಅಥವಾ ಕೊವಿಡ್ ಕೇರ್ ಸೆಂಟರ್ ಗೆ ಕರೆದುಕೊಂಡು ಬಂದು ದಾಖಲಿಸುತ್ತಿದ್ದರು.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಮಾಹಿತಿ
ಕೊರೊನಾವೈರಸ್ ಸೋಂಕು ಪರೀಕ್ಷೆಗೆ ಒಳಪಟ್ಟ ವ್ಯಕ್ತಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಕಡ್ಡಾಯವಾಗಿ ಮಾಹಿತಿ ನೀಡಬೇಕು. ಕೊವಿಡ್-19 ಸೋಂಕು ತಗಲಿದ್ದರೂ, ಸೋಂಕು ಇಲ್ಲದಿದ್ದರೂ ಈ ಬಗ್ಗೆ ಸ್ಥಳೀಯ ಭಾಷೆ ಮತ್ತು ಇಂಗ್ಲೀಷ್ ನಲ್ಲಿ ಸಂಬಂಧಪಟ್ಟವರ ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಕಳುಹಿಸುವಂತೆ ಆರೋಗ್ಯ ಇಲಾಖೆಯು ಸುತ್ತೋಲೆ ಹೊರಡಿಸಿದೆ.

ಜನರನ್ನು ಚಿಂತೆಗೀಡು ಮಾಡಿತ್ತು ಇದೊಂದು ಪದ್ಧತಿ
ಕೊರೊನಾವೈರಸ್ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಕೊವಿಡ್-19 ಪರೀಕ್ಷೆ ಮಾಡಿಸಿಕೊಂಡ ವ್ಯಕ್ತಿಗೆ ಪಾಸಿಟಿವ್ ವರದಿ ಬಂದಾಕ್ಷಣಕ್ಕೆ ಆತನ ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಮೂಲಕ ಮಾಹಿತಿ ನೀಡಲಾಗುತ್ತಿತ್ತು. ಆದರೆ ತಪಾಸಣಾ ವರದಿಯು ನೆಗೆಟಿವ್ ಬಂದರೆ ಯಾವುದೇ ಮಾಹಿತಿ ನೀಡಲಾಗುತ್ತಿರಲಿಲ್ಲ. ಇದರಿಂದ ತಮ್ಮ ವೈದ್ಯಕೀಯ ತಪಾಸಣಾ ವರದಿ ಬಗ್ಗೆ ಜನರು ಆತಂಕದಲ್ಲೇ ಕಾಲ ಕಳೆಯುವಂತಾ ಪರಿಸ್ಥಿತಿ ನಿರ್ಮಾಣವಾಗಿತ್ತು.

ಕೊವಿಡ್-19 ತಪಾಸಣೆ ನಡೆಸಿದ ಎಲ್ಲರಿಗೂ ಎಸ್ಎಂಎಸ್
ಒಮ್ಮೆ ಕೊವಿಡ್-19 ತಪಾಸಣೆ ಮಾಡಿಸಿಕೊಂಡ ವ್ಯಕ್ತಿಯು ತನ್ನ ವೈದ್ಯಕೀಯ ವರದಿ ಮಾಹಿತಿ ಬಗ್ಗೆ ಸಹಜವಾಗಿಯೇ ಆತಂಕದಲ್ಲಿ ಇರುತ್ತಾನೆ. ಇಂಥ ವ್ಯಕ್ತಿಗೆ ಸೋಂಕು ನೆಗೆಟಿವ್ ಬಂದಿದೆ ಎಂಬ ಮಾಹಿತಿ ನೀಡಿದರೆ ಆತ ನಿರಾಳನಾಗುತ್ತಾನೆ. ಇಲ್ಲದಿದ್ದರೆ ಏನಾಗುತ್ತೋ ಏನೋ ಎಂಬ ಭಯದಲ್ಲೇ ಬದುಕುವಂತಾಗುತ್ತದೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿಯೂ ಸಾಕಷ್ಟು ಆಕ್ಷೇಪಗಳು ಕೇಳಿ ಬಂದಿದ್ದವು. ನೆಗೆಟಿವ್ ವರದಿ ಬಂದಾಗ ಏಕೆ ಮಾಹಿತಿ ನೀಡುವುದಿಲ್ಲ ಎಂದು ಪ್ರಶ್ನೆ ಮಾಡಲಾಗುತ್ತಿತ್ತು. ಇದನ್ನು ಮನಗಂಡ ಆರೋಗ್ಯ ಇಲಾಖೆಯು ಇದೀಗ ನೆಗೆಟಿವ್ ವರದಿ ಬಂದಾಗಲೂ ಕೂಡಾ ಮಾಹಿತಿ ನೀಡುವಂತೆ ಸುತ್ತೋಲೆ ಹೊರಡಿಸಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications