TV9 Exit Poll Result 2024: ಯಾರಾಗುತ್ತಾರೆ ದಕ್ಷಿಣೇಶ್ವರ? ಕರ್ನಾಟಕದಲ್ಲಿ ಬಿಜೆಪಿ, ಕಾಂಗ್ರೆಸ್ ಗೆಲ್ಲುವ ಸ್ಥಾನ ಎಷ್ಟು?
ಕರ್ನಾಟಕದಲ್ಲಿ ಮೋದಿ ಅಲೆಯೋ ಅಥವಾ ಕಾಂಗ್ರೆಸ್ ಗ್ಯಾರಂಟೀಯೋ ಎನ್ನುವ ಪ್ರಶ್ನೆಗೆ ಮತದಾನೋತ್ತರ ಸಮೀಕ್ಷೆಯಲ್ಲಿ ಉತ್ತರ ಲಭಿಸಿದೆ. ಕಳೆದ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶವನ್ನು ಪುನರಾವರ್ತಿಸುವ ಆಸೆಯನ್ನು ಹೊಂದಿದ್ದ ಬಿಜೆಪಿಗೆ ಈ ಬಾರಿ ಹಿನ್ನಡೆ ಆಗಿದೆ.
ಪೀಪಲ್ ಇನ್ಸೈಟ್ಸ್, ಪೋಲ್ಸ್ಟಾರ್ಟ್ ಹಾಗೂ ಟಿವಿ9 ಸಮೀಕ್ಷೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಗೆಲ್ಲಬಹುದಾದ ಸ್ಥಾನಗಳ ಬಗ್ಗೆ ಭವಿಷ್ಯ ನುಡಿಸಿದೆ. ಈ ಬಾರಿ ಬಿಜೆಪಿ ಸಿಂಗಲ್ ಲಾರ್ಜೆಸ್ಟ್ ಪಾರ್ಟಿ ಆಗುವುದರಲ್ಲಿ ಯಾವುದೇ ಸಂದೇಹವಿಲ್ಲ. ಆದರೆ ಕಳೆದ ಬಾರಿಯ ಫಲಿತಾಂಶವನ್ನು ಮತ್ತೊಮ್ಮೆ ಮುಟ್ಟುವ ಕಮಲ ಪಡೆಯ ಆಸೆ ಕಮರಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ ಈ ಬಾರಿ 18 ಸ್ಥಾನಗಳಿಗೆ ಕುಸಿದಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಕೇವಲ 1 ಸ್ಥಾನಕ್ಕೆ ಸೀಮಿತವಾಗಿದ್ದ ಕಾಂಗ್ರೆಸ್ ಈ ಬಾರಿ ಏಳು ಸ್ಥಾನ ಏರಿಕೆ ಕಂಡಿದ್ದು, 8 ಸ್ಥಾನಕ್ಕೆ ಮುಟ್ಟಲಿದೆ. ಜೆಡಿಎಸ್ 2 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ ಎಂದು ಪೀಪಲ್ ಇನ್ಸೈಟ್ಸ್, ಪೋಲ್ಸ್ಟಾರ್ಟ್ ಹಾಗೂ ಟಿವಿ9 ಸಮೀಕ್ಷೆ ತಿಳಿಸಿದೆ.
ಕಳೆದ ಬಾರಿ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಬಿಜೆಪಿ, ಇದನ್ನೆ ಮುಂದುವರೆಸುವ ಲೆಕ್ಕಾಚಾರವನ್ನು ಕಮಲ ಪಡೆ ಹಾಕಿಕೊಂಡಿತ್ತು. ಕಳೆದ ಬಾರಿಯ ಫಲಿತಾಂಶವನ್ನೇ ಪುನಾರ್ವತಿಸಲು ಬಿಜೆಪಿ ಪ್ಲ್ಯಾನ್ ಮಾಡಿಕೊಂಡಿದ್ದು ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಕಳೆದ ಬಾರಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಸೇರಿಕೊಂಡು ಲೋಕಸಭಾ ಚುನಾವಣೆಯನ್ನು ಎದುರಿಸಿದ್ದವು, ಈ ಬಾರಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಲೋಕ ಕಣಕ್ಕೆ ದುಮುಕಿವೆ.
ಬಹುನಿರೀಕ್ಷಿತ ಲೋಕಸಭಾ ಚುನಾವಣೆಗಳು ಮುಗಿದಿವೆ. ದೇಶದಲ್ಲಿ ಏಳು ಹಂತದಲ್ಲಿ ಚುನಾವಣೆಗಳು ನಡೆದಿವೆ. ಜೂನ್ 1 (ಇಂದು) ದೇಶದಲ್ಲಿ ಕೊನೆಯ ಹಂತದ ಮತದಾನ ನಡೆದಿದೆ. ಜೂನ್ 4 ಕ್ಕೆ ಚುನಾವಣಾ ಫಲಿತಾಂಶ ಹೊರ ಬೀಳಲಿದೆ. ಇದಕ್ಕೂ ಪೂರ್ವದಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಹೊರ ಬಿಳಲು ಕ್ಷಣಗಣನೆ ಆರಂಭವಾಗಿದೆ.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications