'ರಾಯಣ್ಣ ಬ್ರಿಗೇಡ್' ಸಮಾವೇಶದಲ್ಲಿ ಜನರೇ ನಾಪತ್ತೆ
ಕೆ.ಎಸ್ ಈಶ್ವರಪ್ಪನವರ ಕನಸಿನ ಕೂಡಲ ಸಂಗಮ ಸಂಗೊಳ್ಳಿ 'ರಾಯಣ್ಣ ಬ್ರಿಗೇಡ್' ಸಮಾವೇಶದಿಂದ ಜನ ದೂರ ಉಳಿದಿದ್ದು, ವೇದಿಕೆ ಮುಂಭಾಗದಲ್ಲೇ ಖಾಲಿ ಕುರ್ಚಿಗಳು ಕಾಣಿಸುತ್ತಿವೆ.
ಬಾಗಲಕೋಟೆ, ಜನವರಿ 26: ಕೆ.ಎಸ್ ಈಶ್ವರಪ್ಪ ಕನಸಿನ ರಾಯಣ್ಣ ಬ್ರಿಗೇಡ್ ಸಮಾವೇಶ ಜನರಿಲ್ಲದೆ ಭಣಗುಡುತ್ತಿದೆ. ವೇದಿಕೆಯ ಮುಂಭಾಗ ಕುರ್ಚಿಗಳು ಖಾಲಿ ಬಿದ್ದಿದ್ದರೆ, ಜಯ ಮೃತ್ಯುಂಜಯ ಸ್ವಾಮೀಜಿ ಸಮಾವೇಶದಿಂದ ದೂರ ಉಳಿದಿದ್ದಾರೆ.
ಸ್ವಾತಂತ್ರ್ಯ ಸೇನಾನಿ ಸಂಗೊಳ್ಳಿ ರಾಯಣ್ಣ ಬಲಿದಾನದ ದಿನ ಬಾಗಲಕೋಟೆಯ ಕೂಡಲ ಸಂಗಮದಲ್ಲಿ ಕೆ.ಎಸ್. ಈಶ್ವರಪ್ಪ ಹಮ್ಮಿಕೊಂಡಿದ್ದ ರಾಯಣ್ಣ ಬ್ರಿಗೇಡ್ ಸಮಾವೇಶಕ್ಕೆ ನಿರೀಕ್ಷೆಯಷ್ಟು ಜನ ಬಂದಿಲ್ಲ. ಒಟ್ಟು 50 ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿತ್ತು. ಆದರೆ ವೇದಿಕೆಯ ಮುಂಭಾಗದಲ್ಲಿಯೇ ಕುರ್ಚಿಗಳು ಖಾಲಿ ಬಿದ್ದಿವೆ.[ಬಿಜೆಪಿ ಕಾರ್ಯಕಾರಿಣಿ, ಬಿಎಸ್ ವೈ ವಿರುದ್ಧ ಭುಗಿಲೆದ್ದ ಆಕ್ರೋಶ]

ಸಮಾವೇಶದಲ್ಲಿ ಮಾಜಿ ಸಂಸದ ವಿರೂಪಾಕ್ಷಪ್ಪ ಸೇರಿ ಹಲವು ಮುಖಂಡರು ಭಾಗಿಯಾಗಿದ್ದಾರೆ. ಇನ್ನು ಜಯ ಮೃತ್ಯುಂಜಯ ಸ್ವಾಮೀಜಿ ಸಮಾವೇಶದಿಂದ ದೂರ ಉಳಿದಿದ್ದಾರೆ. ಕಾಗಿನೆಲೆಯ ನಿರಂಜನಾಪುರಿ ಸ್ವಾಮಿ ಮತ್ತು ಸಿದ್ದರಾಮನಂದಪುರಿ ಸ್ವಾಮಿಗಳು ಸಮಾವೇಶದಲ್ಲಿ ಭಾಗಿಯಾದ ಇತರ ಧಾರ್ಮಿಕ ಮುಂದಾಳುಗಳಾಗಿದ್ದಾರೆ.[ರೆಬೆಲ್ ಸ್ಟಾರ್ ಈಶ್ವರಪ್ಪ ಬಿಜೆಪಿಯಿಂದ ಕಿಕ್ ಔಟ್?]
ಕೂಡಲ ಸಂಗಮ ಸಮಾವೇಶದ ಮೂಲಕ ಈಶ್ವರಪ್ಪ ಬಿಜೆಪಿಯಲ್ಲಿ ಯಡಿಯೂರಪ್ಪನವರಿಗೆ ಸಡ್ಡು ಹೊಡೆಯಲು ಹೊರಟಿದ್ದರು. ಹಲವು ಸುತ್ತಿನ ತಿಕ್ಕಾಟಗಳ ಬಳಿಕವೂ 'ಹಿಂದ' ಸಮಾವೇಶ ಮಾಡಿಯೇ ತೀರುತ್ತೇನೆ ಎಂದಿದ್ದರು. ಈಗ ಜನರಿಲ್ಲದೆ ಸಮಾವೇಶ ಭಣಗುಡುತ್ತಿದೆ. ಬಹುಶಃ ಯಡಿಯೂರಪ್ಪ ಈಗ ಮುಸಿ ಮುಸಿ ನಗುತ್ತಿರಬಹುದೋ ಏನೋ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications