ಮೋದಿ ಎಂದು ಕೂಗುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದ ಸಚಿವರಿಗೆ ತಿರುಗೇಟು ಕೊಟ್ಟ ಮಾಜಿ ಸಿಎಂ
ಬೆಂಗಳೂರು, ಮಾರ್ಚ್ 26: ಮೋದಿ ಮೋದಿ ಎಂದು ಕೂಗುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಸಚಿವ ಶಿವರಾಜ್ ತಂಗಡಗಿ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಅವರು, ಇನ್ನು ಸ್ವಲ್ಪ ದಿನ ತಾಳಿ, ಮತಗಳ ಮೂಲಕ ಜನ ಪರೋಕ್ಷವಾಗಿ ಕಾಂಗ್ರೆಸ್ ಗೆ ಕಪಾಳಕ್ಕೆ ಹೊಡೆಯುತ್ತಾರೆ ಎಂದು ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಕೇಂದ್ರದಿಂದ ಯುಪಿಎ ಕಾಲದಲ್ಲಿ ಎಷ್ಟು ಹಾಗೂ ಎನ್ ಡಿಎ ಕಾಲದಲ್ಲಿ ಎಷ್ಟು ಎನ್ ಡಿಆರ್ ಎಫ್ ಹಣ ಬಂದಿದೆ ಅನ್ನುವುದನ್ನು ರಾಜ್ಯ ಸರ್ಕಾರ ಬಹಿರಂಗ ಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸವಾಲ್ ಹಾಕಿದ್ದಾರೆ.

ರಾಜ್ಯ ಸರ್ಕಾರ ಅಧೋಗತಿಗೆ ಗೋಗಿದೆ. ಅದೇ ಕಾರಣಕ್ಕೆ ಸುಪ್ರೀಂ ಕೋರ್ಟ್ ಗೆ ಹೋಗಿದ್ದಾರೆ. ಸುಪ್ರೀಂ ಕೋರ್ಟ್ ಗೆ ಹೋಗಿರುವುದು ರಾಜಕೀಯ ತಂತ್ರಗಾರಿಕೆ. ರಾಜ್ಯ ಸರ್ಕಾರ ಕೇಂದ್ರದಿಂದ ಹಣ ಬಂದಿಲ್ಲ ಎಂದು ಹೇಳುವುದನ್ನು ಬಿಟ್ಟು, ಯುಪಿಎ ಅವಧಿಯಲ್ಲಿ ಹಾಗೂ ಎನ್ ಡಿಎ ಅವಧಿಯಲ್ಲಿ ಎನ್ ಡಿ ಆರ್ ಎಫ್ ನಿಧಿಯಿಂದ ಎಷ್ಟು ಹಣ ಬಂದಿದೆ ಎಂದು ಬಹಿರಂಗಪಡಿಸಲಿ ಎಂದು ಆಗ್ರಹಿಸಿದರು.
ಇನ್ನು ರಾಜ್ಯದಲ್ಲಿ ವಾತಾವರಣ ಉತ್ತಮವಾಗಿದೆ. ಎಲ್ಲ ಕಡೆ ಮೋದಿ ಪರ ಅಲೆ ಇದೆ. ರಾಜ್ಯದಲ್ಲಿ ಭಿನ್ನಮತ ಶಮನ ಆಗುತ್ತಿದೆ. ಸಂಗಣ್ಣ ಕರಡಿ ಅವರು ಸಮಾಧಾನ ಆಗಿದ್ದಾರೆ. ಲೋಕಸಭೆ ಚುನಾವಣಾ ಪ್ರಚಾರಕ್ಕೆ ರಾಷ್ಟ್ರೀಯ ನಾಯಕರು ಎಲ್ಲ ಕಡೆ ಬರುತ್ತಾರೆ. ರಾಷ್ಟ್ರೀಯ ನಾಯಕರ ಜೊತೆ ಸೆಲೆಬ್ರೆಟಿಗಳು ಕೂಡಾ ಪ್ರಚಾರಕ್ಕೆ ಬರುತ್ತಾರೆ. ಎರಡು ಮೂರು ದಿನಗಳಲ್ಲಿ ರಾಷ್ಟ್ರೀಯ ನಾಯಕರ ಪ್ರಚಾರ ಪ್ರವಾಸದ ನಿರ್ಧಾರ ಆಗುತ್ತದೆ. ಧಾರವಾಡ ಹಾಗೂ ನಮ್ಮ ಕ್ಷೇತ್ರಕ್ಕೂ ಪ್ರಚಾರಕ್ಕೆ ಬರುತ್ತಾರೆ. ನಮ್ಮ ಕ್ಷೇತ್ರಕ್ಕೆ ಯಡಿಯೂರಪ್ಪ, ವಿಜಯೇಂದ್ರ ಸೇರಿ ಎಲ್ಲರೂ ಪ್ರಚಾರಕ್ಕೆ ಬರುತ್ತಾರೆ ಎಂದು ಹೇಳಿದರು.
ಮಾಜಿ ಸಚಿವ ಜನಾರ್ದನ ರೆಡ್ಡಿ ಪಕ್ಷಕ್ಕೆ ಬಂದಿರುವುದು ಬಲ ಬಂದಿದೆ. ಮೂರ್ನಾಲ್ಕು ಜಿಲ್ಲೆಗಳಲ್ಲಿ ಅವರ ಪ್ರಭಾವ ಇದೆ ಎಂದರು. ಇನ್ನು ಬಿಜೆಪಿಗೆ ಬಂದರೆ ಎಲ್ಲರೂ ಶುದ್ಧವಾಗುತ್ತಾರೆ ಅನ್ನುವ ಸಚಿವ ಸಂತೋಷ್ ಲಾಡ್ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಅವರ ಅನುಭವದ ಮಾತು ಎಂದು ಲಾಡ್ ಗೆ ತಿರುಗೇಟು ನೀಡಿದರು.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಎಲ್ಪಿಜಿ ಪೂರೈಕೆಯಲ್ಲಿ ತೊಂದರೆ ಇಲ್ಲ, ಕೇಂದ್ರ ಸಚಿವರಿಂದ ಭರವಸೆ ಸಿಕ್ಕಿದೆ: ಸಿಎಂ ಸಿದ್ದರಾಮಯ್ಯ -
HPCL Recruitment 2026: HPCL ನಿಂದ 731 ಹುದ್ದೆಗಳಿಗೆ ಬೃಹತ್ ನೇಮಕಾತಿ, ವಾರ್ಷಿಕ 60 ಲಕ್ಷ ರೂ. ವರೆಗೆ ಸಂಬಳ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart











Click it and Unblock the Notifications