ಮಾನನಷ್ಟ ಮೊಕದ್ದಮೆ ಬೆನ್ನಲ್ಲೇ ಎಸಿಬಿ ತನಿಖೆಗೆ ಡಿ. ರೂಪಾ ಆಗ್ರಹ
Recommended Video

ಬೆಂಗಳೂರು, ನವೆಂಬರ್ 29: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆಯುತ್ತಿದ್ದ ಅಕ್ರಮಗಳನ್ನು ಬಯಲಿಗೆಳೆದಿದ್ದ ಡಿಐಜಿ ಡಿ. ರೂಪಾ ಈ ಸಂಬಂಧ ಎಸಿಬಿ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಡಿ. ರೂಪಾ ವಿರುದ್ಧ ಬಂಧೀಖಾನೆ ವಿಭಾಗದ ಮುಖ್ಯಸ್ಥರಾಗಿದ್ದು ನಿವೃತ್ತರಾಗಿರುವ ಎಂಎನ್ ಸತ್ಯನಾರಾಯಣ ರಾವ್ 20 ಕೋಟಿ ರೂಪಾಯಿ ಮೊತ್ತದ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬೆನ್ನಿಗೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ಜೈಲಿನಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಎಸಿಬಿ ತನಿಖೆಯಾಗಬೇಕು ಎಂದು ರೂಪಾ ಒತ್ತಾಯಿಸಿದ್ದಾರೆ. "ಜೈಲಿನಲ್ಲಿ ಅಕ್ರಮಗಳು ನಡೆದಿವೆ ಮತ್ತು ಕೆಲವು ಖೈದಿಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡಲಾಗಿತ್ತು ಎಂಬುದು ವಿನಯ್ ಕುಮಾರ್ ವರದಿಯಲ್ಲಿ ಬಹಿರಂಗವಾಗಿದೆ. ಇದೀಗ ಯಾಕೆ ವಿಶೇಷ ಸಲತ್ತುಗಳನ್ನು ನೀಡಲಾಗಿತ್ತು ಎಂಬುದನ್ನು ಪತ್ತೆ ಹಚ್ಚಬೇಕಾಗಿದೆ ಮತ್ತು ಈ ಕುರಿತು ಎಸಿಬಿ ತನಿಖೆ ನಡೆಯಬೇಕು. ನಾನು ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ ಮತ್ತು ಈ ಪ್ರಕರಣದಲ್ಲಿ ಎಸಿಬಿ ತನಿಖೆ ನಡೆಯಬೇಕು ಎಂದು ಆಗ್ರಹಿಸುತ್ತೇನೆ," ಎಂದು ಅವರು ಹೇಳಿದ್ದಾರೆ.
ಜೈಲಿನ ಅಧಿಕಾರಿಗಳಿಗೆ ಲಂಚ ನೀಡಲಾಗಿತ್ತು ಎಂದು ಹೇಳಿಕೆ ನೀಡಿದ್ದ ರೂಪಾ ವಿರುದ್ಧ ಸತ್ಯನಾರಾಯಣ ರಾವ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಇದರ ವಿರುದ್ಧ ನ್ಯಾಯಾಲಯದಲ್ಲಿ ಹೋರಾಟ ನಡೆಸುವುದಾಗಿ ರೂಪಾ ಈಗಾಗಲೇ ಹೇಳಿದ್ದಾರೆ.
ಜೈಲಿನಲ್ಲಿ ಅಕ್ರಮಗಳ ವಾಸನೆ ಹೊರ ಬಂದ ನಂತರ ಸತ್ಯನಾರಾಯಣ ರಾವ್ ನಿವೃತ್ತರಾಗಿದ್ದರು. ಈ ಕುರಿತು ತನಿಖೆ ನಡೆಸಲು ಸರಕಾರ ನೇಮಿಸಿದ್ದ ತನಿಖಾ ಸಮಿತಿ ವರದಿ ನೀಡಿದ್ದು ಜೈಲಿನಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಬೆಟ್ಟು ಮಾಡಿದೆ ಆದರೆ ಭ್ರಷ್ಟಾಚಾರ ಆರೋಪಗಳನ್ನು ವರದಿಯಿಂದ ಕೈ ಬಿಟ್ಟಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications