Get Updates
Get notified of breaking news, exclusive insights, and must-see stories!

ದೇವಸ್ಥಾನದಲ್ಲಿ ಪ್ರಸಾದ ಹಂಚುವ ಮುನ್ನಾ ಪರೀಕ್ಷೆ ಕಡ್ಡಾಯ!

ಬೆಂಗಳೂರು, ಏಪ್ರಿಲ್ 30: ದೇವಸ್ಥಾನದಲ್ಲಿ ಕೋಸಂಬರಿ, ಪುಳಿಯೋಗರೆ ಹಂಚುವುದು ಇನ್ನು ಮುಂದೆ ಸುಲಭವಾಗಲಿಕ್ಕಿಲ್ಲ. ನೈವೇದ್ಯಕ್ಕೆ ಮುನ್ನಾ ಪ್ರಸಾದವು ಸರ್ಕಾರಿ ಲ್ಯಾಬೊರೇಟರಿಗಳ ಮೂಲಕ ಹಾದು ಬರಬೇಕಾಗುವ ಸಮಯ ಸಮೀಪವಿದೆ.

ಚಾಮರಾಜನಗರ ಕಿಚ್‌ಗುತ್ತ ಮಾರಮ್ಮ ದೇವಾಲಯದಲ್ಲಿ ಸಂಭವಿಸಿದ ಭಾರಿ ಪ್ರಮಾದದ ನಂತರ ಎಚ್ಚೆತ್ತುಕೊಂಡಿರುವ ಸರ್ಕಾರವು ಹೀಗೊಂದು ಆದೇಶ ತರಲು ಯೋಜಿಸಿದ್ದು, ಯಾವುದೇ ದೇವಸ್ಥಾನದಲ್ಲಿ ಪ್ರಸಾದ ವಿತರಣೆಗೆ ಮುನ್ನ ಪರೀಕ್ಷೆ ಕಡ್ಡಾಯವೆಂಬ ನಿಯಮವನ್ನು ಮುಜರಾಯಿ ಇಲಾಖೆ ಮೂಲಕ ಜಾರಿಗೆ ತರಲು ಯೋಜಿಸಿದೆ.

ಹೊಸ ನಿಯಮದನ್ವಯ ಸ್ಥಳೀಯ ಆರೋಗ್ಯಾಧಿಕಾರಿಗಳು ತಪಾಸಣೆ ನಡೆಸಿದ ಬಳಿಕವಷ್ಟೆ ದೇವಸ್ಥಾನಗಳಲ್ಲಿ ಪ್ರಸಾದ ವಿತರಿಸಬೇಕು, ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿ ಮಾತ್ರವೇ ಈ ನಿಯಮ ಜಾರಿ ಆಗಲಿದೆ ಎನ್ನಲಾಗುತ್ತಿದೆ.

Permission is compulsory before distributing prasada in Temples

ಮುಜರಾಯಿ ಇಲಾಖೆಗೆ ಒಳಪಡದ ದೇವಸ್ಥಾನಗಳಲ್ಲಿ ಸ್ಥಳೀಯರೆ, ಅಥವಾ ಸ್ಥಳೀಯ ಆಡಳಿತ ಮಂಡಳಿ ಉಸ್ತುವಾರಿಯಲ್ಲಿ ಪ್ರಸಾದವನ್ನು ಪರೀಕ್ಷೆ ನಡೆಸಿದ ಬಳಿಕವಷ್ಟೆ ಭಕ್ತಾದಿಗಳಿಗೆ ಹಂಚಬೇಕಾಗುತ್ತದೆ.

ಪ್ರಸಾದಕ್ಕೆ ಬಳಸುವ ಸಾಮಗ್ರಿಗಳು ಗುಣಮಟ್ಟದಿಂದ ಕೂಡಿರಬೇಕು ಮತ್ತು ಪ್ರಸಾದ ತಯಾರಿಕೆ ಸಹ ಶುಚಿತ್ವದಿಂದ ಕೂಡಿರಬೇಕು ಎಂದು ಮುಜರಾಯಿ ಇಲಾಖೆ ಹೇಳಿದ್ದು, ಅದಕ್ಕೆ ತಕ್ಕಂತೆ ನಿಯಮಗಳನ್ನು ರೂಪಿಸಲಾಗಿದೆ.

ರಾಜ್ಯದಲ್ಲಿ ಮುಜರಾಯಿ ವ್ಯಾಪ್ತಿಗೆ ಒಳಪಡುವ ಸುಮಾರು 35 ಸಾವಿರ ದೇವಾಲಯಗಳಿವೆ. ಈ ಎಲ್ಲ ದೇವಾಲಯಗಳಲ್ಲಿ ಪ್ರಸಾದ ವಿತರಣೆಗೆ ಮುನ್ನಾ ಆರೋಗ್ಯಾಧಿಕಾರಿಗಳು ಅಥವಾ ವೈದ್ಯಾಧಿಕಾರಿಗಳು ಪ್ರಸಾದವನ್ನು ಪರೀಕ್ಷೆ ಮಾಡಿದ ನಂತರವೇ ಭಕ್ತಾದಿಗಳಿಗೆ ವಿತರಣೆ ಮಾಡಬೇಕಾಗಿದೆ.

ಕಳೆದ ಡಿಸೆಂಬರ್‌ನಲ್ಲಿ ಚಾಮರಾಜನಗರದ ಸುಳ್ವಾಡಿಯ ಕಿಚ್‌ಗುತ್‌ ಮಾರಮ್ಮ ದೇವಾಲಯದಲ್ಲಿ ನಡೆದ ಆಡಳಿತ ಮಂಡಳಿ ಹಿತಾಸಕ್ತಿ ಸಂಘರ್ಷದಿಂದ ಪ್ರಸಾದದಲ್ಲಿ ವಿಷ ಬೆರೆಸಿದ್ದರಿಂದ 17 ಮಂದಿ ಸಾವನ್ನಪ್ಪಿದ್ದರು, ಇದು ದೇಶದಾದ್ಯಂತ ಸುದ್ದಿಯಾಗಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+