ದೇವಸ್ಥಾನದಲ್ಲಿ ಪ್ರಸಾದ ಹಂಚುವ ಮುನ್ನಾ ಪರೀಕ್ಷೆ ಕಡ್ಡಾಯ!
ಬೆಂಗಳೂರು, ಏಪ್ರಿಲ್ 30: ದೇವಸ್ಥಾನದಲ್ಲಿ ಕೋಸಂಬರಿ, ಪುಳಿಯೋಗರೆ ಹಂಚುವುದು ಇನ್ನು ಮುಂದೆ ಸುಲಭವಾಗಲಿಕ್ಕಿಲ್ಲ. ನೈವೇದ್ಯಕ್ಕೆ ಮುನ್ನಾ ಪ್ರಸಾದವು ಸರ್ಕಾರಿ ಲ್ಯಾಬೊರೇಟರಿಗಳ ಮೂಲಕ ಹಾದು ಬರಬೇಕಾಗುವ ಸಮಯ ಸಮೀಪವಿದೆ.
ಚಾಮರಾಜನಗರ ಕಿಚ್ಗುತ್ತ ಮಾರಮ್ಮ ದೇವಾಲಯದಲ್ಲಿ ಸಂಭವಿಸಿದ ಭಾರಿ ಪ್ರಮಾದದ ನಂತರ ಎಚ್ಚೆತ್ತುಕೊಂಡಿರುವ ಸರ್ಕಾರವು ಹೀಗೊಂದು ಆದೇಶ ತರಲು ಯೋಜಿಸಿದ್ದು, ಯಾವುದೇ ದೇವಸ್ಥಾನದಲ್ಲಿ ಪ್ರಸಾದ ವಿತರಣೆಗೆ ಮುನ್ನ ಪರೀಕ್ಷೆ ಕಡ್ಡಾಯವೆಂಬ ನಿಯಮವನ್ನು ಮುಜರಾಯಿ ಇಲಾಖೆ ಮೂಲಕ ಜಾರಿಗೆ ತರಲು ಯೋಜಿಸಿದೆ.
ಹೊಸ ನಿಯಮದನ್ವಯ ಸ್ಥಳೀಯ ಆರೋಗ್ಯಾಧಿಕಾರಿಗಳು ತಪಾಸಣೆ ನಡೆಸಿದ ಬಳಿಕವಷ್ಟೆ ದೇವಸ್ಥಾನಗಳಲ್ಲಿ ಪ್ರಸಾದ ವಿತರಿಸಬೇಕು, ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿ ಮಾತ್ರವೇ ಈ ನಿಯಮ ಜಾರಿ ಆಗಲಿದೆ ಎನ್ನಲಾಗುತ್ತಿದೆ.

ಮುಜರಾಯಿ ಇಲಾಖೆಗೆ ಒಳಪಡದ ದೇವಸ್ಥಾನಗಳಲ್ಲಿ ಸ್ಥಳೀಯರೆ, ಅಥವಾ ಸ್ಥಳೀಯ ಆಡಳಿತ ಮಂಡಳಿ ಉಸ್ತುವಾರಿಯಲ್ಲಿ ಪ್ರಸಾದವನ್ನು ಪರೀಕ್ಷೆ ನಡೆಸಿದ ಬಳಿಕವಷ್ಟೆ ಭಕ್ತಾದಿಗಳಿಗೆ ಹಂಚಬೇಕಾಗುತ್ತದೆ.
ಪ್ರಸಾದಕ್ಕೆ ಬಳಸುವ ಸಾಮಗ್ರಿಗಳು ಗುಣಮಟ್ಟದಿಂದ ಕೂಡಿರಬೇಕು ಮತ್ತು ಪ್ರಸಾದ ತಯಾರಿಕೆ ಸಹ ಶುಚಿತ್ವದಿಂದ ಕೂಡಿರಬೇಕು ಎಂದು ಮುಜರಾಯಿ ಇಲಾಖೆ ಹೇಳಿದ್ದು, ಅದಕ್ಕೆ ತಕ್ಕಂತೆ ನಿಯಮಗಳನ್ನು ರೂಪಿಸಲಾಗಿದೆ.
ರಾಜ್ಯದಲ್ಲಿ ಮುಜರಾಯಿ ವ್ಯಾಪ್ತಿಗೆ ಒಳಪಡುವ ಸುಮಾರು 35 ಸಾವಿರ ದೇವಾಲಯಗಳಿವೆ. ಈ ಎಲ್ಲ ದೇವಾಲಯಗಳಲ್ಲಿ ಪ್ರಸಾದ ವಿತರಣೆಗೆ ಮುನ್ನಾ ಆರೋಗ್ಯಾಧಿಕಾರಿಗಳು ಅಥವಾ ವೈದ್ಯಾಧಿಕಾರಿಗಳು ಪ್ರಸಾದವನ್ನು ಪರೀಕ್ಷೆ ಮಾಡಿದ ನಂತರವೇ ಭಕ್ತಾದಿಗಳಿಗೆ ವಿತರಣೆ ಮಾಡಬೇಕಾಗಿದೆ.
ಕಳೆದ ಡಿಸೆಂಬರ್ನಲ್ಲಿ ಚಾಮರಾಜನಗರದ ಸುಳ್ವಾಡಿಯ ಕಿಚ್ಗುತ್ ಮಾರಮ್ಮ ದೇವಾಲಯದಲ್ಲಿ ನಡೆದ ಆಡಳಿತ ಮಂಡಳಿ ಹಿತಾಸಕ್ತಿ ಸಂಘರ್ಷದಿಂದ ಪ್ರಸಾದದಲ್ಲಿ ವಿಷ ಬೆರೆಸಿದ್ದರಿಂದ 17 ಮಂದಿ ಸಾವನ್ನಪ್ಪಿದ್ದರು, ಇದು ದೇಶದಾದ್ಯಂತ ಸುದ್ದಿಯಾಗಿತ್ತು.
-
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್












Click it and Unblock the Notifications