ದೇವಸ್ಥಾನದಲ್ಲಿ ಪ್ರಸಾದ ಹಂಚುವ ಮುನ್ನಾ ಪರೀಕ್ಷೆ ಕಡ್ಡಾಯ!
ಬೆಂಗಳೂರು, ಏಪ್ರಿಲ್ 30: ದೇವಸ್ಥಾನದಲ್ಲಿ ಕೋಸಂಬರಿ, ಪುಳಿಯೋಗರೆ ಹಂಚುವುದು ಇನ್ನು ಮುಂದೆ ಸುಲಭವಾಗಲಿಕ್ಕಿಲ್ಲ. ನೈವೇದ್ಯಕ್ಕೆ ಮುನ್ನಾ ಪ್ರಸಾದವು ಸರ್ಕಾರಿ ಲ್ಯಾಬೊರೇಟರಿಗಳ ಮೂಲಕ ಹಾದು ಬರಬೇಕಾಗುವ ಸಮಯ ಸಮೀಪವಿದೆ.
ಚಾಮರಾಜನಗರ ಕಿಚ್ಗುತ್ತ ಮಾರಮ್ಮ ದೇವಾಲಯದಲ್ಲಿ ಸಂಭವಿಸಿದ ಭಾರಿ ಪ್ರಮಾದದ ನಂತರ ಎಚ್ಚೆತ್ತುಕೊಂಡಿರುವ ಸರ್ಕಾರವು ಹೀಗೊಂದು ಆದೇಶ ತರಲು ಯೋಜಿಸಿದ್ದು, ಯಾವುದೇ ದೇವಸ್ಥಾನದಲ್ಲಿ ಪ್ರಸಾದ ವಿತರಣೆಗೆ ಮುನ್ನ ಪರೀಕ್ಷೆ ಕಡ್ಡಾಯವೆಂಬ ನಿಯಮವನ್ನು ಮುಜರಾಯಿ ಇಲಾಖೆ ಮೂಲಕ ಜಾರಿಗೆ ತರಲು ಯೋಜಿಸಿದೆ.
ಹೊಸ ನಿಯಮದನ್ವಯ ಸ್ಥಳೀಯ ಆರೋಗ್ಯಾಧಿಕಾರಿಗಳು ತಪಾಸಣೆ ನಡೆಸಿದ ಬಳಿಕವಷ್ಟೆ ದೇವಸ್ಥಾನಗಳಲ್ಲಿ ಪ್ರಸಾದ ವಿತರಿಸಬೇಕು, ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿ ಮಾತ್ರವೇ ಈ ನಿಯಮ ಜಾರಿ ಆಗಲಿದೆ ಎನ್ನಲಾಗುತ್ತಿದೆ.

ಮುಜರಾಯಿ ಇಲಾಖೆಗೆ ಒಳಪಡದ ದೇವಸ್ಥಾನಗಳಲ್ಲಿ ಸ್ಥಳೀಯರೆ, ಅಥವಾ ಸ್ಥಳೀಯ ಆಡಳಿತ ಮಂಡಳಿ ಉಸ್ತುವಾರಿಯಲ್ಲಿ ಪ್ರಸಾದವನ್ನು ಪರೀಕ್ಷೆ ನಡೆಸಿದ ಬಳಿಕವಷ್ಟೆ ಭಕ್ತಾದಿಗಳಿಗೆ ಹಂಚಬೇಕಾಗುತ್ತದೆ.
ಪ್ರಸಾದಕ್ಕೆ ಬಳಸುವ ಸಾಮಗ್ರಿಗಳು ಗುಣಮಟ್ಟದಿಂದ ಕೂಡಿರಬೇಕು ಮತ್ತು ಪ್ರಸಾದ ತಯಾರಿಕೆ ಸಹ ಶುಚಿತ್ವದಿಂದ ಕೂಡಿರಬೇಕು ಎಂದು ಮುಜರಾಯಿ ಇಲಾಖೆ ಹೇಳಿದ್ದು, ಅದಕ್ಕೆ ತಕ್ಕಂತೆ ನಿಯಮಗಳನ್ನು ರೂಪಿಸಲಾಗಿದೆ.
ರಾಜ್ಯದಲ್ಲಿ ಮುಜರಾಯಿ ವ್ಯಾಪ್ತಿಗೆ ಒಳಪಡುವ ಸುಮಾರು 35 ಸಾವಿರ ದೇವಾಲಯಗಳಿವೆ. ಈ ಎಲ್ಲ ದೇವಾಲಯಗಳಲ್ಲಿ ಪ್ರಸಾದ ವಿತರಣೆಗೆ ಮುನ್ನಾ ಆರೋಗ್ಯಾಧಿಕಾರಿಗಳು ಅಥವಾ ವೈದ್ಯಾಧಿಕಾರಿಗಳು ಪ್ರಸಾದವನ್ನು ಪರೀಕ್ಷೆ ಮಾಡಿದ ನಂತರವೇ ಭಕ್ತಾದಿಗಳಿಗೆ ವಿತರಣೆ ಮಾಡಬೇಕಾಗಿದೆ.
ಕಳೆದ ಡಿಸೆಂಬರ್ನಲ್ಲಿ ಚಾಮರಾಜನಗರದ ಸುಳ್ವಾಡಿಯ ಕಿಚ್ಗುತ್ ಮಾರಮ್ಮ ದೇವಾಲಯದಲ್ಲಿ ನಡೆದ ಆಡಳಿತ ಮಂಡಳಿ ಹಿತಾಸಕ್ತಿ ಸಂಘರ್ಷದಿಂದ ಪ್ರಸಾದದಲ್ಲಿ ವಿಷ ಬೆರೆಸಿದ್ದರಿಂದ 17 ಮಂದಿ ಸಾವನ್ನಪ್ಪಿದ್ದರು, ಇದು ದೇಶದಾದ್ಯಂತ ಸುದ್ದಿಯಾಗಿತ್ತು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ












Click it and Unblock the Notifications