ಕಿದ್ವಾಯಿ ಆಸ್ಪತ್ರೆಯಲ್ಲಿ ಕಡಿಮೆ ವೆಚ್ಚದಲ್ಲಿ ಪೆಟ್ಸ್ಕ್ಯಾನ್ ಸೌಲಭ್ಯ: ಬಸವರಾಜ ಬೊಮ್ಮಾಯಿ
ಬೆಂಗಳೂರು, ಫೆ.4: ಬಡ ರೋಗಿಗಳಿಗೆ ಅನುಕೂಲವಾಗಲು ಕಿದ್ವಾಯಿ ಆಸ್ಪತ್ರೆಯಲ್ಲಿ ಕಡಿಮೆ ದರದಲ್ಲಿ ಕ್ಯಾನ್ಸರ್ ರೋಗ ಪರೀಕ್ಷೆಯ ಪೆಟ್ ಸ್ಕ್ಯಾನ್ ಸೌಲಭ್ಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಜನಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ 'ಆರೈಕೆಯ ಅಂತರವನ್ನು ಕಡಿತಗೊಳಿಸಿ' ಎಂಬ ಘೋಷವಾಕ್ಯವನ್ನು ಬಿಡುಗಡೆ ಮಾಡಿದರು.
ಕಿದ್ವಾಯಿ ಸಂಸ್ಥೆಯ ಆಧುನೀಕರಣಕ್ಕಾಗಿ ಎರಡು ಪೆಟ್ಸ್ಕ್ಯಾನ್ ಯಂತ್ರಗಳ ಖರೀದಿಗೆ ಕ್ರಮ ಕೈಗೊಳ್ಳಲಾಗಿದೆ. ಕ್ಯಾನ್ಸರ್ ರೋಗವನ್ನು ಪತ್ತೆಹಚ್ಚುವ ಪೆಟ್ಸ್ಕ್ಯಾನ್ ಪರೀಕ್ಷೆ ಖಾಸಗಿ ಆಸ್ಪತ್ರೆಯಲ್ಲಿ 25,000 ರೂ.ಗಳವರೆಗೆ ವೆಚ್ಚವಾಗುತ್ತದೆ. ಬಡರೋಗಿಗಳಿಗೆ ಸಹಾಯ ಒದಗಿಸುವ ಉದ್ದೇಶದಿಂದ ಸರ್ಕಾರ ಈ ದುಬಾರಿ ಸ್ಕ್ಯಾನ್ ಸೌಲಭ್ಯವನ್ನು ಕೇವಲ 8 ರಿಂದ 10 ಸಾವಿರದೊಳಗೆ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಜನೌಷಧಿ ಕೇಂದ್ರದಲ್ಲಿ ಕ್ಯಾನ್ಸರ್ ಔಷಧಿಗೆ ಚಿಂತನೆ:
ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ಔಷಧಿಗಳು ಜನಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಔಷಧಿಗಳನ್ನು ಲಭ್ಯವಾಗಿಸಲು ಸಂಬಂಧಪಟ್ಟ ತಯಾರಿಕಾ ಸಂಸ್ಥೆ ಹಾಗೂ ಕೇಂದ್ರ ಸರ್ಕಾರದ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು.
ಜನೌಷಧಿ ಕೇಂದ್ರಗಳಲ್ಲಿ ಕ್ಯಾನ್ಸರ್ ಔಷಧಿಗಳು ಸುಲಭ ದರದಲ್ಲಿ ದೊರಕಿಸಿಕೊಡಲು ಚಿಂತನೆ ನಡೆಸಲಾಗಿದೆ. ಇಡೀ ರಾಜ್ಯದಲ್ಲಿ ಅಗ್ಗ ದರದಲ್ಲಿ ಕ್ಯಾನ್ಸರ್ ಔಷಧಿಗಳನ್ನು ಪೂರೈಸುವ ಸೊಸೈಟಿಯನ್ನು ಸ್ಥಾಪಿಸುವ ಯೋಜನೆಯಿದೆ. ಕ್ಯಾನ್ಸರ್ ಹಾಗೂ ಇನ್ನಿತರ ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಕಾರ್ಯಕ್ರಮಗಳೂ ಸೇರಿದಂತೆ ಆರೋಗ್ಯ ಮೂಲಸೌಕರ್ಯವನ್ನು ತಾಲ್ಲೂಕು ಮಟ್ಟದಿಂದ ಅಭಿವೃದ್ಧಿ ಮಾಡುವ ಮೂಲಕ ಆರೋಗ್ಯ ಕರ್ನಾಟಕದ ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಅಭಿಯಾನ:
ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಸ್ತನ ಕ್ಯಾನ್ಸರ್ ಸೇರಿದಂತೆ ಯಾವುದೇ ರೀತಿಯ ಕ್ಯಾನ್ಸರ್ಗೆ ಚಿಕಿತ್ಸೆ ಇದ್ದು, ಯಾರೂ ದೃತಿಗೆಡಬೇಕಾಗಿಲ್ಲ. ಚಿಕಿತ್ಸೆಯ ನಂತರ ಆರೋಗ್ಯಕರ ಜೀವನವನ್ನು ನಡೆಸಬಹುದಾಗಿದೆ. ತಾಲ್ಲೂಕಾ ಮಟ್ಟದ ಆಸ್ಪತ್ರೆಯಿಂದ ಹಿಡಿದು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯವರಗೆಗೂ ಒಂದು ವರ್ಷಗಳ ಕಾಲ, ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಸ್ತನ ಕ್ಯಾನ್ಸರ್ ನಿವಾರಣೆಯ ಬಗ್ಗೆ ಜಾಗೃತಿ ಅಭಿಯಾನ ಹಾಗೂ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಸಮೃದ್ಧ ಹಾಗೂ ಸದೃಢ ರಾಜ್ಯ ನಿರ್ಮಾಣವಾಗಲು ಆರೋಗ್ಯ ಕರ್ನಾಟಕ ಬಹಳ ಮುಖ್ಯ. ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ವಿಶೇಷ ಗಮನ ಹರಿಸಲಿದೆ. ಜನರನ್ನು ಸರ್ವರೀತಿಯಲ್ಲೂ ಸಶಕ್ತಗೊಳಿಸಿ ಕರ್ನಾಟಕದ ವಿಕಾಸದಲ್ಲಿ ಪಾಲುದಾರರಾಗುವಂತೆ ಮಾಡಲಾಗುವುದು. ಸಮುದಾಯ ಹಾಗೂ ಸರ್ಕಾರ ಒಟ್ಟುಗೂಡಿ ಕ್ಯಾನ್ಸರ್ ರೋಗವನ್ನು ಸಮಾಜದಿಂದ ದೂರವಾಗಿಸಬಹುದು. ಜಾಗೃತಿ ಅಭಿಯಾನ ಈ ಉದ್ದೇಶದ ಈಡೇರಿಕೆಗೆ ಪೂರಕವಾಗಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
Recommended Video
ಕ್ಯಾನ್ಸರ್ ಗೆದ್ದ ಮಹಿಳೆಯ ಆತ್ಮಸ್ಥೈರ್ಯವನ್ನು ಪ್ರಶಂಸಿದ ಸಿಎಂ
ಕಳೆದ 10-12 ವರ್ಷಗಳಿಂದ ಧ್ವನಿಪಟಲದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಚಿಕಿತ್ಸೆಯ ನಂತರ ಮಾತನಾಡಬಲ್ಲವರಾಗಿದ್ದಾರೆ. ಮಾನಸಿಕವಾಗಿ ಗಟ್ಟಿಯಾಗಿದ್ದ ಮಹಿಳೆ ತಮ್ಮ ಕ್ಯಾನ್ಸರ್ನ ಅನುಭವಗಳನ್ನು, ಮನೋಬಲವನ್ನು ಹಾಗೂ ಧೂಮಪಾನದ ಅಪಾಯಗಳು ಹಾಗೂ ಕ್ಯಾನ್ಸರ್ ತಡೆಗಟ್ಟಬಹುದಾದ ಬಗೆಯ ಕುರಿತು ಆತ್ಮಸ್ಥೈರ್ಯದಿಂದ ಕಾರ್ಯಕ್ರಮದಲ್ಲಿ ಮಾತನಾಡಿದನ್ನು ಮುಖ್ಯಮಂತ್ರಿಗಳು ಪ್ರಶಂಸಿದರು.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications