Puneeth Rajkumar: ಮೆಟ್ರೋ ಸ್ಟೇಷನ್ ಗೆ ಪುನೀತ್ ರಾಜ್ಕುಮಾರ್ ಹೆಸರು: ಪಿಎಂ ಕಚೇರಿಯಿಂದ ಬಂದ ಉತ್ತರವೇನು?
ಬೆಂಗಳೂರು, ಜೂನ್ 10: ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅಭಿಮಾನಿಗಳಿಗೆ ಸದ್ಯದಲ್ಲೇ ಖುಷಿ ಸುದ್ದಿ ಸಿಗಲಿದೆ. ಗೊಟ್ಟಿಗೆರೆ ಹಾಗೂ ನಾಗವಾರ ನಡುವಣ ನಮ್ಮ ಮೆಟ್ರೋ ಪಿಂಕ್ ಮಾರ್ಗದ ಪಾಟರಿ ಟೌನ್ ಸ್ಟೇಷನ್ಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರಿಡಲು ಒತ್ತಡ ಹೆಚ್ಚಾಗಿದೆ.
ಹೌದು, ಪಾಟರಿ ಟೌನ್ ಮೆಟ್ರೋ ಸ್ಟೇಷನ್ಗೆ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಹೆಸರಿಡುವಂತೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ರಾಜ್ಯಪಾಲರು ಹಾಗೂ ಮೆಟ್ರೋ ಎಂಡಿಗೆ ಕರ್ನಾಟಕ ಬಹುಜನ ಫೆಡರೇಶನ್ ಪತ್ರ ಬರೆದಿದೆ. ಈ ಪತ್ರಕ್ಕೆ ಪ್ರಧಾನಿ ಕಾರ್ಯಾಲಯದಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದ್ದು, ಈ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಮೆಟ್ರೋ ಎಂಡಿಗೆ ಮನವಿ ಪರಿಶೀಲಿಸಲು ಪತ್ರ ಬರೆದಿದ್ದಾರೆ.

ನಮ್ಮ ಮೆಟ್ರೋ ಪಿಂಕ್ ಮಾರ್ಗದ ಪಾಟರಿ ಟೌನ್ ಸ್ಟೇಷನ್ಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರಿಡುವ ಸಾಧ್ಯತೆ ದಟ್ಟವಾಗಿದೆ. ಈ ವಿಚಾರವಾಗಿ ಸಲ್ಲಕೆಯಾಗಿರುವ ಮನವಿಗೆ ಪಿಎಂ ಮೋದಿ ಕಚೇರಿಯಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ. ಇನ್ನೂ ಮೆಟ್ರೋ ಸ್ಟೇಷನ್ ಗೆ ಹೆಸರಿಡುವ ಕುರಿತು ಈಗಾಗಲೇ ನಿಯಮಾನುಸಾರು ಅಪ್ಪು ಹೆಸರು ಇಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಹೋರಾಟಗಾರರಿಗೆ ಬಿಎಂಆರ್ಸಿಎಲ್ ತಿಳಿಸಿದೆ. ಹೀಗಾಗಿ ಅಪ್ಪು ಅಭಿಮಾನಿಗಳಿಗೆ ಸದ್ಯದಲ್ಲೇ ಗುಡ್ ನ್ಯೂಸ್ ಸಿಗಲಿದೆ.
ಪಾಟರಿ ಟೌನ್ ಮೆಟ್ರೋ ಸ್ಟೇಷನ್ ಮಾರ್ಗದ ಕಾಮಗಾರಿ ಈಗಾಗಲೇ ಶೇ 50 ರಷ್ಟು ಮುಗಿದಿದ್ದು ಕಾಮಗಾರಿ ಪೂರ್ಣವಾಗುವಷ್ಟರಲ್ಲಿ ಕರ್ನಾಟಕ ರತ್ನ ಪುನೀತ್ ಕುಮಾರ್ ಅವರ ಹೆಸರಿಡುವ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿಗಳು ಕೂಡ ಮನವಿ ಮಾಡಿದ್ದಾರೆ. ಇತ್ತ ಪಿಂಕ್ ಮಾರ್ಗದ ಪಾಟರಿ ಟೌನ್ ಮೆಟ್ರೋ ಸ್ಟೇಷನ್ಗೆ ಪುನೀತ್ ರಾಜ್ಕುಮಾರ್ ಹೆಸರಿಡುವಂತೆ ಪ್ರಧಾನಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯಪಾಲರಿಗೂ ಪತ್ರ ಬರೆದು ಮನವಿ ಮಾಡಲಾಗಿದೆ. ಕೆಲ ದಿನಗಳಲ್ಲಿ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications