ಕರ್ನಾಟಕದಲ್ಲಿ ವೇಶ್ಯಾವಾಟಿಕೆ ಕಾನೂನುಬದ್ಧವಾಗಬೇಕೆ?
ಬೆಂಗಳೂರು, ಸೆ. 3: ವೇಶ್ಯಾವಾಟಿಕೆಯನ್ನು ಕಾನೂನು ಬದ್ಧ ಮಾಡಲು ಒತ್ತಾಯಿಸಿ ಪ್ರಗತಿಪರ ಚಿಂತಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದ್ದಾರೆ.
ಬರಹಗಾರರು ಮತ್ತು ಅನೇಕ ದಲಿತ ಮುಖಂಡರು ಮನವಿ ಸಲ್ಲಿಕೆ ವೇಳೆ ಹಾಜರಿದ್ದರು. ಅಗ್ನಿ ಶ್ರೀಧರ್, ಇಂದುಧರ ಹೊನ್ನಾಪುರ, ಲೀಲಾ ಸಂಪಿಗೆ, ಮಾವಳ್ಳಿ ಶಂಕರ್ ಮತ್ತು ಎನ್ .ವಿ.ನರಸಿಂಹಪ್ಪ ಮುಖ್ಯಮಂತ್ರಿ ಜನತಾ ದರ್ಶನದ ವೇಳೆ ಮನವಿ ಸಲ್ಲಿಸಿದರು.(ಮತ್ತೆ ಜನರ ದುಃಖದುಮ್ಮಾನ ಆಲಿಸಲು ಆರಂಭಿಸಿದ ಸಿದ್ದು)

ರಾಜ್ಯಗಳಲ್ಲಿನ ಲೈಂಗಿಕ ಕಾರ್ಯಕರ್ತರ ಸ್ಥಿತಿ ಗತಿ ಹೇಗಿದೆ ಎಂದು ವರದಿ ನೀಡಲು ಸುಪ್ರೀಂ ಕೋರ್ಟ್ 2012ರಲ್ಲೇ ಕೇಳಿತ್ತು. ಆದರೆ ಇಲ್ಲಿಯವರೆಗೆ ಯಾವ ಸರ್ಕಾರಗಳು ವರದಿ ನೀಡಿಲ್ಲ ಎಂದು ಇಂದುಧರ ಹೊನ್ನಾಪುರ ಆರೋಪಿಸಿದರು.
ಮನವಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಭಾರತ ಒಂದು ಸಾಂಪ್ರದಾಯಿಕ ರಾಷ್ಟ್ರವಾಗಿದ್ದು, ವೇಶ್ಯಾವಾಟಿಕೆ ಕಾನೂನುಬದ್ಧ ಮಾಡಿದರೆ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ರೋಷನ್ ಬೇಗ್ ಪ್ರತಿಕ್ರಿಯೆ ನೀಡಿದ್ದಾರೆ.
ಹೇಳಿಕೆ ಸಮರ್ಥಿಸಿಕೊಂಡಿದ್ದ ನಿಸಾರ್ ಅಹಮದ್
ವೇಶ್ಯಾವಟಿಕೆ ಕಾನೂನು ಬದ್ಧಗೊಳಿಸಬೇಕು ಎಂಬ ವಿವಾದಾತ್ಮಕ ಹೇಳಿಕೆಯನ್ನು ನಾಡೋಜ ಕೆ.ಎಸ್.ನಿಸಾರ್ ಅಹಮದ್ ಸಮರ್ಥಿಸಿಕೊಂಡಿದ್ದರು.
ವೇಶ್ಯಾವಟಿಕೆ ಕಾನೂನು ಬದ್ಧವಾದರೆ ಅತ್ಯಾಚಾರ ಕಡಿಮೆಯಾಗುತ್ತದೆ. ಪುರುಷರ ಕಾಮಾಂಧತೆಗೆ ಕಡಿವಾಣ ಹಾಕಲು ಇದು ನೆರವಾಗುತ್ತದೆ ಎಂದು ಹೇಳಿದ್ದರು.
ರಾಜ, ಮಹಾರಾಜರ ಕಾಲದಿಂದಲೂ ಈ ಪದ್ಧತಿ ಇತ್ತು. ವಿವಾದ ಸೃಷ್ಟಿಸಲು ನಾನು ಈ ಹೇಳಿಕೆ ನೀಡಿಲ್ಲ. ಸಂಪ್ರದಾಯವಾದಿಗಳು ಇದನ್ನು ನಿರಾಕರಿಸಿದರೆ ಅದು ಅವರ ಮೂರ್ಖತನ ಎಂದು ನಿಸಾರ್ ಅಹಮದ್ ಪ್ರತಿಕ್ರಿಯೆ ನೀಡಿದ್ದರು.
ಬೆಂಬಲ ವ್ಯಕ್ತಪಡಿಸಿದ್ದ ಅಗ್ನಿ ಶ್ರೀಧರ್
'ವೇಶ್ಯಾವಾಟಿಕೆ ಕಾನೂನು ಬದ್ಧಗೊಳಿಸಿ' ಎಂಬ ನಾಡೋಜ ನಿಸಾರ್ ಅಹಮದ್ ಹೇಳಿಕೆಗೆ ಪತ್ರಕರ್ತ ಹಾಗೂ ನ್ಯಾಯಕ್ಕಾಗಿ ನಾವು ಸಂಘಟನೆಯ ಅಗ್ನಿ ಶ್ರೀಧರ್ ಬೆಂಬಲ ವ್ಯಕ್ತಪಡಿಸಿದ್ದರು.
ಸಚಿವ ರೋಷನ್ ಬೇಗ ಪ್ರಾಮುಖ್ಯತೆ ನೀಡದಿರುವುದು ಬೇಸರ ತಂದಿದೆ. ಈ ಬಗ್ಗೆ ನಾನು ಮತ್ತು ನಮ್ಮ ಸಂಘಟನೆ ಮುಖ್ಯಮಂತ್ರಿಯೊಂದಿಗೆ ಮಾತುಕತೆ ನಡೆಸಿ ಮನವಿ ನೀಡುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.
ಯಾವ ಯಾವ ದೇಶಗಳಲ್ಲಿ ವೇಶ್ಯಾವಾಟಿಕೆ ಕಾನೂನು ಬದ್ಧ
ಯುರೋಪಿನ ಸ್ವೀಟನ್, ನಾರ್ವೆ ಜರ್ಮನಿಯಲ್ಲಿ ವೇಶ್ಯಾವಾಟಿಕೆ ಕಾನೂನುಬದ್ಧವಾಗಿದೆ. ಇಂಗ್ಲೆಂಡ್, ನೆದರ್ಲ್ಯಾಂಡ್ ಮತ್ತು ಬೆಲ್ಜಿಯಂಗಳಲ್ಲಿ ಕೆಲ ನಿರ್ಬಂಧ ವಿಧಿಸಲಾಗಿದ್ದು, ಸಹೋದರ-ಸಹೋದರಿಯರು ಸಂಬಂಧ ಬೆಳೆಸುವಂತಿಲ್ಲ ಎಂದು ವಿವರಿಸಲಾಗಿದೆ.
ಇನ್ನು ಏಷ್ಯಾ ಖಂಡದ ಥೈಲಾಂಡ್ ಮತ್ತು ಜಪಾನ್ನಲ್ಲಿ ವೇಶ್ಯಾವಾಟಿಕೆ ಮುಕ್ತವಾಗಿದ್ದರೂ ಕೆಲ ಕಟ್ಟಳೆಗಳನ್ನು ಹೇರಲಾಗಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications