ಮತ್ತೆ ಇಳಿಯಿತು ಡೀಸೆಲ್, ಪೆಟ್ರೋಲ್ ಬೆಲೆ
ಬೆಂಗಳೂರು, ಡಿ.16 : ವಾಹನ ಸವಾರರಿಗೆ ಹೊಸ ವರ್ಷದ ಕೊಡುಗೆ ಸಿಕ್ಕಿದ್ದು ಪೆಟ್ರೋಲ್, ಡೀಸೆಲ್ ಬೆಲೆ ಸೋಮವಾರ ಮಧ್ಯ ರಾತ್ರಿಯಿಂದ ತಲಾ 2 ರೂ. ಕಡಿಮೆಯಾಗಿದೆ. ಕಳೆದ ಆಗಸ್ಟ್ನಿಂದ ಪೆಟ್ರೋಲ್ ದರ ಸತತ 8ನೇ ಬಾರಿ ಇಳಿಕೆ ಕಂಡಿದ್ದು, ಡೀಸೆಲ್ ಬೆಲೆ 4ನೇ ಬಾರಿ ಕಡಿಮೆಯಾಗಿದೆ.
ಪೆಟ್ರೋಲ್ ಹಾಗೂ ಡೀಸೆಲ್ ದರ ಲೀಟರ್ಗೆ ತಲಾ 2 ರೂ. ಕಡಿಮೆಯಾಗಿದೆ. ನೂತನ ದರ ಸೋಮವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೋರೆಷನ್ ತಿಳಿಸಿದೆ. ಡೀಸೆಲ್ ದರದಲ್ಲಿ ಇಳಿಕೆಯಾದ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಕೆಎಸ್ಆರ್ಟಿಸಿ ಬಸ್ ಪ್ರಯಾಣ ದರ ಕಡಿಮೆಯಾಗುವ ನಿರೀಕ್ಷೆಯೂ ಇದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲಗಳ ಬೆಲೆ ಇಳಿಕೆಯಾಗಿದ್ದರಿಂದ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗಿದೆ. ಈವರೆಗೆ ಪೆಟ್ರೋಲ್ ದರ ಬೆಂಗಳೂರಿನಲ್ಲಿ 69.45 ರೂ. ಮತ್ತು ಡೀಸೆಲ್ ಬೆಲೆ 57.04 ರೂ. ಇತ್ತು. [ತೈಲ ಬೆಲೆ ಇಳಿಕೆಯಿಂದ ರಾಜ್ಯಕ್ಕೆ 400 ಕೋಟಿ ನಷ್ಟ]
ಅಕ್ಟೋಬರ್ನಿಂದ ಡೀಸೆಲ್ ದರದಲ್ಲಿ ಇದು ನಾಲ್ಕನೇ ಕಡಿತವಾಗಿದೆ. ತೈಲ ಕಂಪನಿಗಳು, ಡಿಸೆಂಬರ್ 1ರಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಕ್ರಮವಾಗಿ ಲೀಟರ್ಗೆ 91 ಪೈಸೆ ಹಾಗೂ 84 ಪೈಸೆಗೆ ಇಳಿಸಿದ್ದವು.[ಅಬಕಾರಿ ಸುಂಕ ಹೆಚ್ಚಳ: ಗ್ರಾಹಕರಿಗಿಲ್ಲ ಹೊರೆ]
ಬಸ್ ದರ ಕಡಿಮೆ ಇಲ್ಲ : ಪೆಟ್ರೋಲ್ ಹಾಗೂ ಡೀಸೆಲ್ ದರ ಆಧರಿಸಿ ಬಸ್ ಪ್ರಯಾಣ ದರ ಇಳಿಕೆ ಮಾಡುವುದು ಅಸಾಧ್ಯ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬೆಳಗಾವಿಯ ಚಳಿಗಾದಲ ಅಧಿವೇಶನದಲ್ಲಿ ಹೇಳಿದ್ದಾರೆ.
ವಿಧಾನ ಪರಿಷತ್ನಲ್ಲಿ ಸೋಮವಾರ ರಾಮಚಂದ್ರ ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಡೀಸೆಲ್ ದರ ಇಳಿಕೆಯಾದರೂ ಬಸ್ ಪ್ರಯಾಣ ದರದಲ್ಲಿ ಏಕೆ ಇಳಿಕೆಯಿಲ್ಲ. ದೇಶದ ಯಾವ ರಾಜ್ಯಗಳಲ್ಲೂ ಪ್ರಯಾಣ ದರ ಇಳಿಕೆಯಾಗಿಲ್ಲ ಎಂದು ಸಮರ್ಥಿಸಿಕೊಂಡರು.
ಇನ್ನು ಪ್ರತಿಪಕ್ಷ ಬಿಜೆಪಿ ಇಂದು ಸದನದಲ್ಲಿ ಕೆಎಸ್ಆರ್ಟಿಸಿ ಪ್ರಯಾಣ ದರ ಇಳಿಕೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಲಿದೆ. ಸರ್ಕಾರ ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತದೆಯೇ? ಕಾದು ನೋಡಬೇಕು.
-
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ












Click it and Unblock the Notifications