ಸರ್ಕಾರಿ ಎಸಿ ಬಸ್ಗಳಲ್ಲಿ ಸಾಕು ಪ್ರಾಣಿಗಳನ್ನು ಒಯ್ಯುವಂತಿಲ್ಲ!
ಬೆಂಗಳೂರು, ಜು.14: ಇತ್ತೀಚೆಗಷ್ಟೇ ಕೆಎಸ್ಆರ್ಟಿಸಿ ಬಸ್ನಲ್ಲಿ ಸಾಕು ಪ್ರಾಣಿಗಳನ್ನು ತೆಗೆದುಕೊಂಡು ಹೋಗಬಹುದು ಎಂದು ಸೂಚನೆ ನೀಡಿತ್ತು, ಆದರೆ ಹವಾನಿಯಂತ್ರಿತ ಬಸ್ಗಳಲ್ಲಿ ಸಾಕು ಪ್ರಾಣಿಯನ್ನು ಕೊಂಡೊಯ್ಯುವಂತಿಲ್ಲ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮ ತಿಳಿಸಿದೆ.
ಕೆಎಸ್ಆರ್ಟಿಸಿ ಪ್ರತಿ ಐದು ವರ್ಷಕ್ಕೊಮ್ಮೆ ದರ ಪರಿಷ್ರಣೆ ಮಾಡುತ್ತದೆ, ಸಾಕು ನಾಯಿ, ಮೊಲ, ಬೆಕ್ಕು ಮತ್ತು ಗಿಳಿಗಳಿಗೆ ಈ ವರ್ಷ ಫೆಬ್ರವರಿಯಲ್ಲಿ ದರ ಪರಿಷ್ಕರಣೆ ಮಾಡಲಾಗಿತ್ತು, ಸಾಕು ನಾಯಿಗಳನ್ನು ತಮ್ಮ ಜೊತೆ ಬಸ್ಗಳಲ್ಲಿ ಕರೆದೊಯ್ಯಬೇಕಿದ್ದರೆ ಒಬ್ಬ ವ್ಯಕ್ತಿಯ ಸರಿಸಮನಾದ ಪ್ರಯಾಣ ದರವನ್ನು ನೀಡಬೇಕಾಗುತ್ತದೆ.
ಇತ್ತೀಚೆಗೆ ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ ಬಸ್ ಕಂಡಕ್ಟರ್ ಒಬ್ಬರು ಪ್ರಯಾಣಿಕರೊಬ್ಬರಿಂದ ಎರಡು ಹುಂಜಗಳನ್ನು ಕೊಂಡೊಯ್ಯುತ್ತಿದ್ದುದಕ್ಕೆ ಅರ್ಧ ಟಿಕೆಟ್ ನೀಡಿದ್ದು ಸುದ್ದಿಯಾಗಿತ್ತು. ಇದೀಗ ಕೆಎಸ್ಆರ್ ಟಿಸಿ ಹವಾನಿಯಂತ್ರಿತ ಬಸ್ಸುಗಳಲ್ಲಿ ಸಾಕುಪ್ರಾಣಿಗಳನ್ನು ಕೊಂಡೊಯ್ಯುವುದಕ್ಕೆ ನಿಷೇಧ ಹೇರಲಿದೆ.

ಈ ಬಗ್ಗೆ ಕೆಎಸ್ ಆರ್ ಟಿಸಿಯ ಎಲ್ಲಾ 15 ವಿಭಾಗಗಳಲ್ಲಿ ಸದ್ಯದಲ್ಲಿಯೇ ಸುತ್ತೋಲೆ ಹೊರಡಿಸಲಾಗುವುದು ಎಂದು ಇಲಾಖೆಯ ಮೂಲಗಳು ತಿಳಿಸಿವೆ. ಇದಕ್ಕೆ ಪ್ರಾಣಿದಯಾ ಕಾರ್ಯಕರ್ತರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬ ಕುತೂಹಲವಿದೆ.
ಇದಕ್ಕೆ ಮುಖ್ಯ ಕಾರಣ ಪ್ರಯಾಣಿಕರಿಂದ ಬರುತ್ತಿರುವ ದೂರುಗಳು ಮತ್ತು ಬಸ್ ಸಿಬ್ಬಂದಿಯ ಅಭಿಪ್ರಾಯಗಳು ಎನ್ನುತ್ತಾರೆ ಕೆಎಸ್ಆರ್ ಟಿಸಿ ಅಧಿಕಾರಿಗಳು. ಹವಾನಿಯಂತ್ರಿತ ಬಸ್ಸುಗಳಲ್ಲಿ ಕಿಟಕಿ ಬಾಗಿಲುಗಳನ್ನು ತೆರೆಯದಿರುವುದರಿಂದ ಹೊರಗಿನ ಗಾಳಿಯಿಲ್ಲದಿರುವುದರಿಂದ ಸಾಕು ಪ್ರಾಣಿಗಳನ್ನು ಕರೆದೊಯ್ಯುವುದು ಅಪಾಯಕಾರಿಯಾಗಿದೆ.
ಇದರಿಂದ ಪ್ರಯಾಣಿಕರಿಗೆ ವಾಸನೆ ಬರುತ್ತದೆ, ಹೀಗಾಗಿ ಪ್ರಯಾಣಿಕರು ದೂರುತ್ತಾರೆ, ಬಸ್ಸಿನಲ್ಲಿ ಸಾಕುಪ್ರಾಣಿಗಳನ್ನು ಕರೆದೊಯ್ದರೆ ಇತರ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಸಹ ತೊಂದರೆಯಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಶ್ರೀಶೈಲ ಮಲ್ಲಿಕಾರ್ಜುನನ ದರ್ಶನಕ್ಕೆ NWKRTC ವೇಗದೂತ ಬಸ್ಗಳ ವ್ಯವಸ್ಥೆ: ಟಿಕೆಟ್ ದರ, ಮಾರ್ಗ-ವೇಳಾಪಟ್ಟಿ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
NWKRTC ನೇಮಕಾತಿ: ಏಪ್ರಿಲ್ನಲ್ಲಿ ವಿವಿಧ ಹುದ್ದೆಗಳ ಪರೀಕ್ಷೆ, ವೇಳಾಪಟ್ಟಿ ಪ್ರಕಟಿಸಿದ ಕೆಇಎ, ಪ್ರವೇಶ ಪತ್ರದ ಅಪ್ಡೇಟ್ -
BMTC: 3 ನಿಲ್ದಾಣಗಳಿಂದ ಮೆಟ್ರೋ ಫೀಡರ್ ಬಸ್ ಸೇವೆ ಆರಂಭ: ಸಂಚಾರ ಮಾರ್ಗ, ಸಮಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ











Click it and Unblock the Notifications