ಪಿಜಿ ಪ್ರವೇಶ ಅಕ್ರಮ: ವೈದ್ಯರ ವಿರುದ್ಧದ ಸಿಬಿಐ ಪ್ರಕರಣ ರದ್ದಿಲ್ಲ
ಬೆಂಗಳೂರು, ಅಕ್ಟೋಬರ್ 25; ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆದ ಹದಿನೇಳು ವರ್ಷಗಳ ಹಿಂದಿನ ಪಿಜಿ ಪ್ರವೇಶ ಅಕ್ರಮ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ವೈದ್ಯರ ವಿರುದ್ಧ ಸಿಬಿಐ ಹೂಡಿರುವ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.
2006ರಲ್ಲಿ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ನಡೆಸಿದ ಪರೀಕ್ಷೆಯಲ್ಲಿಅಕ್ರಮವೆಸಗಿದ ಆರೋಪದ ಸಂಬಂಧ ಡಾ. ನೇಹಾ ಬನ್ಸಾಲ್ ವಿರುದ್ಧ ಸಿಬಿಐ ಕ್ರಿಮಿನಲ್ ಪ್ರಕರಣ ದಾಖಲಿಸಿದೆ. ಈ ಪ್ರಕರಣ ರದ್ದುಗೊಳಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಅರ್ಜಿ ವಜಾಗೊಳಿಸಿದೆ. ಪೂರ್ಣ ಪ್ರಮಾಣದ ವಿಚಾರಣೆ ನಡೆದು ಸತ್ಯಾಂಶ ಹೊರಬರಲಿ ಎಂದು ಆದೇಶಿಸಿರುವ ನ್ಯಾಯಾಲಯ ಅರ್ಜಿದಾರರ ವಾದವನ್ನು ತಿರಸ್ಕರಿಸಿದೆ.

ಪ್ರಕರಣದ ಹಿನ್ನೆಲೆ: ಪ್ರಾಸಿಕ್ಯೂಷನ್ ಆರೋಪಿಸಿರುವಂತೆ ಅರ್ಜಿದಾರರು ಲಿಖಿತ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸಿ ಸ್ನಾತಕೋತ್ತರ ಕೋರ್ಸ್ಗೆ ಪ್ರವೇಶವನ್ನು ಪಡೆದಿದ್ದಾರೆ. ನಂತರ ಸ್ನಾತಕೋತ್ತರ ಪ್ರವೇಶ ಪರೀಕ್ಷೆಯಲ್ಲಿ ಕೆಲವು ಕಳಪೆ ವಿದ್ಯಾರ್ಥಿಗಳೂ ಸಹ ಅಧಿಕ ಅಂಕಗಳನ್ನು ಗಳಿಸಿರುವುದು ಕಂಡುಬಂದಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು.
ಆ ಹಿನ್ನೆಲೆಯಲ್ಲಿ ಸರ್ಕಾರ ಮಾಧ್ಯಮ ವರದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಸಮಿತಿಯೊಂದನ್ನು ರಚನೆ ಮಾಡಿತ್ತು. ಆ ಸಮಿತಿ ಸ್ನಾತಕೋತ್ತರ ಕೋರ್ಸ್ ಪ್ರವೇಶ ಪರೀಕ್ಷೆಯಲ್ಲಿಎಲ್ಲವೂ ಸರಿಯಾಗಿ ನಡೆದಿಲ್ಲಎಂಬ ಅಭಿಪ್ರಾಯ ವ್ಯಕ್ತಪಡಿಸಿತ್ತು. ಹಾಗಾಗಿ ಸರ್ಕಾರ ಇದರ ಹಿಂದೆ ಏನೋ ಪಿತೂರಿ ಇದೆ ಎಂದು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು.
ಸಿಬಿಐ ತನಿಖೆಯಲ್ಲಿ2005ರ ಜು.22ರಿಂದ 2007ರ ಜು.21ರವರೆಗೆ ಅಧಿಕಾರದಲ್ಲಿದ್ದ ವಿವಿಯ ಕುಲಪತಿ ಒಂದನೇ ಆರೋಪಿ, ರಿಜಿಸ್ಟ್ರಾರ್ ಎರಡನೇ ಆರೋಪಿ ಹಾಗೂ ಸಹಾಯಕ ರಿಜಿಸ್ಟ್ರಾರ್ ಡಾ. ಹನುಮಂತ ಪ್ರಸಾದ್ ಅವರು ಇತರೆ ಆರೋಪಿಗಳ ಜತೆ ಸೇರಿ ಪಿತೂರಿ ನಡೆಸಿದ್ದರು. ಅದರಂತೆ ಎಫ್ಐಆರ್ನಲ್ಲಿ ಉಲ್ಲೇಖಿಸಲಾದ ಕೆಲವು ವ್ಯಕ್ತಿಗಳಿಗೆ ಮಾತ್ರ ಲಭ್ಯವಾಗುವಂತೆ ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡಲಾಗಿತ್ತು ಎಂದು ಸಿಬಿಐ ಹೇಳಿತ್ತು.
ಬಳಿಕ ಸಿಬಿಐ ಅರ್ಜಿದಾರರನ್ನು 8ನೇ ಆರೋಪಿಯನ್ನಾಗಿ ಮಾಡಿತ್ತು. ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯಿದೆ ಸೆಕ್ಷನ್ 13(1)(ಡಿ) ಮತ್ತು 13(2) ಹಾಗೂ ಐಪಿಸಿ ಸೆಕ್ಷನ್ 409, 420 ಮತ್ತು 120 ಬಿಡಿ ಆರೋಪಗಳನ್ನು ಹೊರಿಸಲಾಗಿತ್ತು. ಅರ್ಜಿದಾರರು ತಮ್ಮ ವಿರುದ್ಧದ ಆರೋಪಗಳನ್ನು ಕೈ ಬಿಡುವಂತೆ ಕೋರಿದ್ದರು, ಆದರೆ ಅದನ್ನು ನ್ಯಾಯಾಲಯ ತಿರಸ್ಕರಿಸಿತ್ತು.
ಹೈಕೋರ್ಟ್ ಆದೇಶವೇನಿದೆ?; ಅರ್ಜಿದಾರರನ್ನು ಆರೋಪ ಮುಕ್ತಗೊಳಿಸಲಾಗದು ಮತ್ತು ಅವರು ವಿಚಾರಣೆ ಎದುರಿಸಬೇಕು, ಅರ್ಜಿದಾರರು ಬೇಕಿದ್ದರೆ ಸಾಕ್ಷಿಗಳ ಹೇಳಿಕೆಯನ್ನು ಪ್ರಶ್ನಿಸಲಿ ಎಂದು ನ್ಯಾಯಾಲಯ ಹೇಳಿದೆ. ಮೊದಲು ಕಡಿಮೆ ಅಂಕಗಳನ್ನು ತೆಗೆದುಕೊಂಡಿದ್ದ 16 ಅಭ್ಯರ್ಥಿಗಳು ಹೇಗೆ ಪಿಜಿಇಟಿಯಲ್ಲಿ ಹೆಚ್ಚಿನ ಅಂಕ ತೆಗೆದುಕೊಂಡರು ಎಂದು ಆರೋಪಿಸಲಾಗಿದೆ. ಆದರೆ ಅರ್ಜಿದಾರರು ಮೊದಲಿನಿಂದಲೂ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದರು. ಬೇರೆಯವರ ಜತೆ ಅವರನ್ನು ಹೋಲಿಕೆ ಮಾಡುವುದು ಸರಿಯಲ್ಲ ಎಂದು ಅರ್ಜಿದಾರರ ಪರ ವಕೀಲರು ಹೇಳಿದ್ದರು.
-
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
ಮರ್ಯಾದೆ ಹತ್ಯೆಗೆ ಬೀಳಲಿದೆ ಬ್ರೇಕ್: ವಿಧಾನಸಭೆಯಲ್ಲಿ ಐತಿಹಾಸಿಕ 'ಇವ ನಮ್ಮವ' ಮಸೂದೆ ಮಂಡಿಸಿದ ಸರ್ಕಾರ -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ











Click it and Unblock the Notifications