ಸ್ನಾತಕೋತ್ತರ ಮೆಡಿಕಲ್ ಸೀಟು ಹಂಚಿಕೆ ಮುಂದಕ್ಕೆ
ಬೆಂಗಳೂರು, ಏಪ್ರಿಲ್ 28: ವೈದ್ಯ ಮತ್ತು ಸಂತವೈದ್ಯ ಸ್ನಾತಕೋತ್ತರ ಸೀಟುಗಳ ಹಂಚಿಕೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತೀರ್ಪು ನೀಡಿ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಮುಂದಿನ ವಿಚಾರಣೆವರೆಗೂ ತಡೆಹಿಡಿಯಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಶುಕ್ರವಾರ ಆರಂಭಗೊಳ್ಳಬೇಕಿದ್ದ ಆಪ್ಷನ್ ಎಂಟ್ರಿ ಪ್ರಕ್ರಿಯೆಯನ್ನು ಕೂಡ ಮುಂದೂಡಲಾಗಿದೆ. ಪಿಜಿ ಸಿಇಟಿ-2018ರಲ್ಲಿ ಕನಿಷ್ಠ ಅರ್ಹತಾ ಅಂಕ ಗಳಿಸಿರುವ ಅಭ್ಯರ್ಥಿಗಳಿಗೆ ವೈದ್ಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಅಂತಿಮ ಸುತ್ತಿನ ನೋಂದಣಿಗೆ ಅವಕಾಶ ಕಲ್ಪಿಸುವಂತೆ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಸೂಚಿಸಿದೆ ಎಂದು ಕೆಇಎ ತಿಳಿಸಿದೆ.
ಹೈಕೋರ್ಟ್ ಮಧ್ಯಂತರ ತೀರ್ಪು ನೀಡಿರುವ ಕಾರಣ ಎರಡನೇ ಸುತ್ತಿನ ಸೀಟು ಹಂಚಿಕೆಯನ್ನು ಮುಂದಿನ ವಿಚಾರಣೆವರೆಗೆ ಮುಂದೂಡಿದೆ.ಖಾಸಗಿ ವೈದ್ಯಕೀಯ ಕಾಲೇಜುಗಳ ಲಾಭಿಗೆ ಕೊನೆಗೂ ಮಣಿದಿರುವ ರಾಜ್ಯ ಸರ್ಕಾರ 2018-19ನೇ ಸಾಲಿನಲ್ಲಿ ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತವೈದ್ಯಕೀಯ ಕೋರ್ಸ್ ಗಳ ಪ್ರವೇಶ ಶುಲ್ಕವನ್ನು ಶೇ.15ರಷ್ಟು ಹೆಚ್ಚಳ ಮಾಡಿದೆ.

ಖಾಸಗಿ ವೈದ್ಯ-ದಂತ ವೈದ್ಯಕೀಯ ಕಾಲೇಜು ಗಳ ಒಕ್ಕೂಟ ಸರ್ಕಾರಕ್ಕೆ ಮನವಿ ಮಾಡಿತ್ತು. ಬಳಿಕ ಒಕ್ಕೂಟದ ಪ್ರತಿನಿಧಿಗಳೋಂದಿಗೆ ಈ ಹಿಂದೆ ಎರಡು ಸುತ್ತಿನ ಸಭೆ ನಡೆಸಿದ ಸರ್ಕಾರ ಇದು ಚುನಾವಣಾ ವರ್ಷವಾದ್ದರಿಂದ ಶುಲ್ಕ ಹೆಚ್ಚಳ ಸಾಧ್ಯವಿಲ್ಲವೆಂದು ತಿಳಿಸಿತ್ತು.
ಆದರೆ, ಕಾಲೇಜುಗಳು ಶುಲ್ಕ ಹೆಚ್ಚಿಸಲಿದ್ದರೆ ಸರ್ಕಾರದೊಂದಿಗೆ ಸೀಟು ಹಂಚಿಕೆ ಮತ್ತು ಶುಲ್ಕ ನಿಗದಿ ಒಪ್ಪಂದಕ್ಕೆ ಸಹಿ ಹಾಕುವುದಿಲ್ಲವೆಂದು ಪಟ್ಟು ಹಿಡಿದಾಗ ಅಂತಿಮ ಕ್ಷಣದಲ್ಲಿ ಶೇ.15ರಷ್ಟು ಶುಲ್ಕ ಹೆಚ್ಚಳಕ್ಕೆ ಸರ್ಕಾರ ಒಪ್ಪಿಗೆ ಸೂಚಿಸಿದೆ.
-
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral












Click it and Unblock the Notifications