Phone Tapping: "ಬಿಜೆಪಿಯಿಂದ ಫೋನ್ ಕದ್ದಾಲಿಕೆ" ಕಾಂಗ್ರೆಸ್ ಪ್ರಭಾವಿ ಶಾಸಕ!
Phone Tapping: ರಾಜ್ಯದಲ್ಲಿ ಹನಿಟ್ರ್ಯಾಪ್ನೊಂದಿಗೆ ಪೋನ್ ಕದ್ದಾಲಿಕೆಯ ಬಗ್ಗೆಯೂ ಜೋರು ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್ನಿಂದ ಪೋನ್ ಕದ್ದಾಲಿಕೆ ಆಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಗಂಭೀರ ಆರೋಪ ಮಾಡಿದ ಮೇಲೆ ಈ ಇದೀಗ ಕಾಂಗ್ರೆಸ್ನಿಂದಲೂ ಇದೇ ರೀತಿಯ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಕಾಂಗ್ರೆಸ್ನ ಪ್ರಭಾವಿ ಶಾಸಕರು ಬಿಜೆಪಿಯಿಂದಲೇ ಪೋನ್ ಕದ್ದಾಲಿಕೆ ಆಗುತ್ತಿದೆ ಎಂದು ಹೇಳಿದ್ದಾರೆ.
ಕರ್ನಾಟಕದ ರಾಜಕೀಯದಲ್ಲಿ ಹನಿಟ್ರ್ಯಾಪ್ ಹಾಗೂ ಪೋನ್ ಕದ್ದಾಲಿಕೆ ಎರಡೂ ವಿಷಯಗಳು ಏಕಕಾಲಕ್ಕೆ ಚರ್ಚೆಯಾಗುತ್ತಿವೆ. ರಾಜ್ಯದಲ್ಲಿ ಸಿಡಿ ಪ್ರಕರಣ ಈ ಹಿಂದೆ ಭಾರೀ ಸದ್ದು ಮಾಡಿತ್ತು. ಇದೀಗ ಪೋನ್ ಕದ್ದಾಲಿಕೆ ವಿಚಾರ ಮುನ್ನೆಲೆಗೆ ಬಂದಿದೆ.

ಇವತ್ತಿಗೂ ಬಿಜೆಪಿಯವರು ಫೋನ್ ಕದ್ದಾಲಿಕೆ ಮಾಡುತಿದ್ದಾರೆ ಎಂದು ಧಾರವಾಡ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ವಿನಯ ಕುಲಕರ್ಣಿ ಗಂಭೀರ ಸ್ವರೂಪದ ಆರೋಪ ಮಾಡಿದ್ದಾರೆ. ಫೋನ್ ಕದ್ದಾಲಿಕೆ ವಿಚಾರವಾಗಿ ಬಹಳ ಆತಂಕ ಇದ್ದು ಬಿಜೆಪಿಯವರೇ ಹೆಚ್ಚು ಮಾಡಿದ್ದಾರೆ. ಈಗ ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರ ಫೋನ್ ಕದ್ದಾಲಿಕೆ ಬಗ್ಗೆ ನನಗೆ ಗೊತ್ತಿಲ್ಲ. ನಾನು ಪ್ರವಾಸದಲ್ಲಿ ಇದ್ದೇನೆ. ಅದಕ್ಕೆ ಆ ವಿಚಾರ ಗಮನಕ್ಕೆ ಬಂತು ಎಂದು ಹೇಳಿದ್ದಾರೆ.
ಇನ್ನು ರಾಜ್ಯದಲ್ಲಿ ಹನಿಟ್ರ್ಯಾಪ್ ವಿಚಾರ ಪ್ರತಿಕ್ರಿಯೆ ಕೊಟ್ಟ ಅವರು, ಅದನ್ನು ಸಿಬಿಐಗೆ ಕೊಡುವ ಅವಶ್ಯಕತೆ ಏನಿಲ್ಲ. ನಮ್ಮಲ್ಲೇ ಒಳ್ಳೆ ಪೊಲೀಸ್ ಅಧಿಕಾರಿಗಳು ಇದ್ದಾರೆ. ಅದನ್ನ ನಿಭಾಯಿಸುವ ಅಧಿಕಾರಿಗಳು ಇದ್ದಾರೆ. ಹನಿಟ್ರ್ಯಾಪ್ ಮಾಡೊದು ರಾಜಕಾರಣದಲ್ಲಿ ಕೀಳುಮಟ್ಟದ್ದು ಅದನ್ನು ಮಾಡಬಾರದು ಎಂದರು.
ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಂವಿಧಾನದ ಪರ ಇದ್ದಾರೆ. ಅವರು ಯಾವತ್ತೂ ವಿರುದ್ಧ ಇದ್ದವರಲ್ಲಾ. ಗಾಂಧಿ ಕಾರ್ಯಕ್ರಮದಲ್ಲಿ ಅವರು ಏನೆಲ್ಲಾ ಮಾಡಿದ್ದರು ನೋಡಿದ್ದಿರಿ. ಅವರು ಏಕೆ ಸಂವಿಧಾನದ ಬಗ್ಗೆ ಹೇಳ್ತಾರೆ. ಅವರು ಯಾವತ್ತೂ ಅದನ್ನ ಹೇಳಲು ಸಾಧ್ಯವಿಲ್ಲ ಎಂದರು.
ಶಾಸಕರಿಗೆ ಅನುದಾನ ಕೊರತೆ ವಿಚಾರವಾಗಿ ಮಾತನಾಡಿದ ಅವರು, ಬಜೆಟ್ನಲ್ಲಿ ಸ್ಪೇಷಲ್ ಗ್ರ್ಯಾಂಟ್ ಏನು ನಮಗೆ ಬಂದಿಲ್ಲ
ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ನಾವು ಮಾತಾಡಿದ್ದೇವೆ. ನಮಗೆ ಹೆಚ್ಚು ಅನುದಾನ ಕೊಡುವ ಮಾತನ್ನು ಸಿಎಂ ಕೊಟ್ಟಿದ್ದಾರೆ. ನಮ್ಮ ಭಾಗದ ಕಿತ್ತೂರು ಕರ್ನಾಟಕ ಭಾಗದ ಶಾಸಕರಿಗೆ ಹೆಚ್ಚು ಅನುದಾನದ ಭರವಸೆ ಇದೆ. ಇನ್ನು ಹೈದರಾಬಾದ್ ಕರ್ನಾಟಕ ಭಾಗದವರಿಗೆ ಐದು ಸಾವಿರ ಕೋಟಿ ಇಟ್ಟಿದ್ದಾರೆ. ಹಲವು ಕಾರ್ಯಕ್ರಮದ ಬಗ್ಗೆ ಕೊಡಲಾಗಿದ್ದು ನಮಗೆ ಅನುದಾನ ಕೊರತೆ ಅನಿಸುತ್ತಿದೆ ಅದನ್ನ ಸರಿ ಮಾಡುವುದಾಗಿ ಹೇಳಿದ್ದಾರೆ.
8 ಸಾವಿರ ಕೋಟಿ ಕೊಡುವುದಾಗಿ ಹೇಳಿದ್ದಾರೆ. ಬ್ಯಾಲೆನ್ಸ್ ಮಾಡಿ ಕೊಡ್ತೆನೆ ಎಂದಿದ್ದಾರೆ. ಹುಬ್ಬಳ್ಳಿ - ಧಾರವಾಡ ಪಾಲಿಕೆ ಪ್ರತ್ಯೇಕ ಆಗಿದ್ದು ನಾನು ಅದಕ್ಕೆ ನೂರು ಕೋಟಿ ಕೇಳಿದ್ದೇನೆ. ಎರಡು ನೂರು ಕೋಟಿ ಕೊಡಬಹುದು ಎಂದು ಅವರು ಹೇಳಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications