Get Updates
Get notified of breaking news, exclusive insights, and must-see stories!

ರಾಕ್ಷಸರನ್ನು ದೇವರೇ ಶಿಕ್ಷಿಸಲಿ: ಸದಾನಂದ ಗೌಡ್ರ ಟಾರ್ಗೆಟ್ ಯಾರು?

ಬೆಂಗಳೂರು, ಸೆ 29: ಫೋನ್ ಕದ್ದಾಲಿಕೆ ಪ್ರಕರಣದ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಬಿಜೆಪಿ ಮತ್ತು ಜೆಡಿಎಸ್ ನಡುವೆ ವಾಕ್ಸಮರಕ್ಕೆ ಇದು ಕಾರಣವಾಗಿದೆ.

ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳ ಫೋನ್ ಕದ್ದಾಲಿಕೆ ವಿಚಾರದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಾಲುಸಾಲು ಟ್ವೀಟ್ ಮಾಡಿದ್ದರು.

ಈಗ ಅದಕ್ಕೆ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಸೇರ್ಪಡೆಯಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಿವಿಎಸ್, " ರಾಕ್ಷಸರನ್ನು ದೇವರೇ ಶಿಕ್ಷಿಸಲಿ" ಎಂದು ಟ್ವೀಟ್ ಮಾಡಿದ್ದಾರೆ.

Phone Tapping Of Adichunchanagiri Seer: Union Minister D V Sadananada Gowda Tweet

ಡಿವಿಎಸ್ ಮಾಡಿರುವ ಟ್ವೀಟ್ ಹೀಗಿದೆ, " ಕೆಲ ಸಮಯದ ಹಿಂದೆ ಗುರುಪೀಠ ಶ್ರೀ ಆದಿಚುಂಚನಗಿರಿ ಶ್ರೀ ನಿರ್ಮಲಾನಂದ ಸ್ವಾಮೀಜಿಯವರ ಫೋನ್ ಕದ್ದಾಲಿಕೆ ನಡೆದಿದೆ ಅನ್ನೋ ಮಾಧ್ಯಮ ವರದಿಗಳು ಆಘಾತಕಾರಿಯಾದದ್ದು".

" ಅಂತಹ ಕೆಲಸ ಯಾರೇ ಮಾಡಿರಲಿ ಅವರು ಸಾರ್ವಜನಿಕ ಜೀವನದಲ್ಲಿ ಇರಲು ಅರ್ಹರಲ್ಲ . ದೇವರು, ಗುರುಗಳು, ತಂದೆ ತಾಯಿಯ ವ್ಯತ್ಯಾಸ ಗೊತ್ತಿಲ್ಲದ ರಾಕ್ಷಸರನ್ನು ದೇವರೇ ಶಿಕ್ಷಿಸಲಿ " ಎಂದು ಸದಾನಂದ ಗೌಡರು ಖಾರವಾಗಿ ಟ್ವೀಟ್ ಮಾಡಿದ್ದಾರೆ.

" ನನ್ನ ಅಧಿಕಾರವಧಿಯಲ್ಲಿ ಆದಿ ಚುಂಚನಗಿರಿ ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ನಡೆದಿತ್ತು ಎಂಬ ವರದಿಗಳು, ಅದಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ಹೇಳಿಕೆಗಳು ನನ್ನ ಹೃದಯದಲ್ಲಿ ಸಹಿಸಲಾಗದ ನೋವುಂಟು ಮಾಡಿವೆ. ಎಲ್ಲಕ್ಕೂ ಮಿಗಿಲಾಗಿ ಸ್ವಾಮೀಜಿಗಳಲ್ಲಿ ಮೂಡಿರಬಹುದಾದ ಬೇಸರ ನನ್ನ ನೋವನ್ನು ಹೆಚ್ಚಿಸಿದೆ‌ " ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+