ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಕ್ಷಸರನ್ನು ದೇವರೇ ಶಿಕ್ಷಿಸಲಿ: ಸದಾನಂದ ಗೌಡ್ರ ಟಾರ್ಗೆಟ್ ಯಾರು?

|
Google Oneindia Kannada News

ಬೆಂಗಳೂರು, ಸೆ 29: ಫೋನ್ ಕದ್ದಾಲಿಕೆ ಪ್ರಕರಣದ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಬಿಜೆಪಿ ಮತ್ತು ಜೆಡಿಎಸ್ ನಡುವೆ ವಾಕ್ಸಮರಕ್ಕೆ ಇದು ಕಾರಣವಾಗಿದೆ.

ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳ ಫೋನ್ ಕದ್ದಾಲಿಕೆ ವಿಚಾರದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಾಲುಸಾಲು ಟ್ವೀಟ್ ಮಾಡಿದ್ದರು.

ನಿರ್ಮಲಾನಂದನಾಥ ಸ್ವಾಮೀಜಿ ಫೋನ್ ಕದ್ದಾಲಿಕೆ: ಎಚ್ಡಿಕೆ ಏನಂದ್ರು?ನಿರ್ಮಲಾನಂದನಾಥ ಸ್ವಾಮೀಜಿ ಫೋನ್ ಕದ್ದಾಲಿಕೆ: ಎಚ್ಡಿಕೆ ಏನಂದ್ರು?

ಈಗ ಅದಕ್ಕೆ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಸೇರ್ಪಡೆಯಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಿವಿಎಸ್, " ರಾಕ್ಷಸರನ್ನು ದೇವರೇ ಶಿಕ್ಷಿಸಲಿ" ಎಂದು ಟ್ವೀಟ್ ಮಾಡಿದ್ದಾರೆ.

Phone Tapping Of Adichunchanagiri Seer: Union Minister D V Sadananada Gowda Tweet

ಡಿವಿಎಸ್ ಮಾಡಿರುವ ಟ್ವೀಟ್ ಹೀಗಿದೆ, " ಕೆಲ ಸಮಯದ ಹಿಂದೆ ಗುರುಪೀಠ ಶ್ರೀ ಆದಿಚುಂಚನಗಿರಿ ಶ್ರೀ ನಿರ್ಮಲಾನಂದ ಸ್ವಾಮೀಜಿಯವರ ಫೋನ್ ಕದ್ದಾಲಿಕೆ ನಡೆದಿದೆ ಅನ್ನೋ ಮಾಧ್ಯಮ ವರದಿಗಳು ಆಘಾತಕಾರಿಯಾದದ್ದು".

" ಅಂತಹ ಕೆಲಸ ಯಾರೇ ಮಾಡಿರಲಿ ಅವರು ಸಾರ್ವಜನಿಕ ಜೀವನದಲ್ಲಿ ಇರಲು ಅರ್ಹರಲ್ಲ . ದೇವರು, ಗುರುಗಳು, ತಂದೆ ತಾಯಿಯ ವ್ಯತ್ಯಾಸ ಗೊತ್ತಿಲ್ಲದ ರಾಕ್ಷಸರನ್ನು ದೇವರೇ ಶಿಕ್ಷಿಸಲಿ " ಎಂದು ಸದಾನಂದ ಗೌಡರು ಖಾರವಾಗಿ ಟ್ವೀಟ್ ಮಾಡಿದ್ದಾರೆ.

" ನನ್ನ ಅಧಿಕಾರವಧಿಯಲ್ಲಿ ಆದಿ ಚುಂಚನಗಿರಿ ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ನಡೆದಿತ್ತು ಎಂಬ ವರದಿಗಳು, ಅದಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ಹೇಳಿಕೆಗಳು ನನ್ನ ಹೃದಯದಲ್ಲಿ ಸಹಿಸಲಾಗದ ನೋವುಂಟು ಮಾಡಿವೆ. ಎಲ್ಲಕ್ಕೂ ಮಿಗಿಲಾಗಿ ಸ್ವಾಮೀಜಿಗಳಲ್ಲಿ ಮೂಡಿರಬಹುದಾದ ಬೇಸರ ನನ್ನ ನೋವನ್ನು ಹೆಚ್ಚಿಸಿದೆ‌ " ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು.

English summary
News On Phone Tapping Of Adichunchanagiri Seer: Union Minister D V Sadananada Gowda Tweet
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X