ಸಿದ್ದರಾಮಯ್ಯ ಯಾತ್ರೆ ವಿರುದ್ಧ ಹೈಕೋರ್ಟ್‌ಗೆ ಪಿಐಎಲ್!

ಬೆಂಗಳೂರು, ಜನವರಿ 05 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನವ ಕರ್ನಾಟಕ ನಿರ್ಮಾಣ ಯಾತ್ರೆ ವಿರುದ್ಧ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಲಾಗಿದೆ. ಯಾತ್ರೆ ವಿರುದ್ಧ ಕಳೆದ ವಾರ ಎಸಿಬಿಗೆ ದೂರು ನೀಡಲಾಗಿತ್ತು.

ಬೆಂಗಳೂರಿನ ಹನುಮಂತನಗರದ ನಿವಾಸಿ ಕೀರ್ತಿವರ್ಧನ ಜೋಶಿ ಎಂಬುವವರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಯಾತ್ರೆಗೆ ಸರ್ಕಾರದ ಬೊಕ್ಕಸದ ಹಣವನ್ನು ಖರ್ಚು ಮಾಡಲಾಗುತ್ತಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

state tuor

ರಾಜ್ಯ ಸರ್ಕಾರದ ನಾಲ್ಕೂವರೆ ವರ್ಷದ ಸಾಧನೆ ಹೆಸರಿನಲ್ಲಿ ಸಿದ್ದರಾಮಯ್ಯ ಡಿಸೆಂಬರ್ 13ರಿಂದ ರಾಜ್ಯದಲ್ಲಿ ಸಮಾವೇಶಗಳನ್ನು ನಡೆಸುತ್ತಿದ್ದಾರೆ. ಬೊಕ್ಕಸದ ಹಣವನ್ನು ಸಿದ್ದರಾಮಯ್ಯ ತಮ್ಮ ಸ್ವಾರ್ಥ ಮತ್ತು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಯಾತ್ರೆ ನಡೆಯುತ್ತಿದೆ. ಆದರೆ, ಯಾತ್ರೆಯಲ್ಲಿ ಸರ್ಕಾರದ ಸಾಧನೆ ಬಗ್ಗೆ ಮಾತನಾಡುವುದು ಬಿಟ್ಟು, ವಿರೋಧ ಪಕ್ಷದವನ್ನು ಟೀಕಿಸುತ್ತಿದ್ದಾರೆ ಎಂದು ಅರ್ಜಿಯಲ್ಲಿ ಆರೋಪ ಮಾಡಲಾಗಿದೆ.

ಸಮಾವೇಶಕ್ಕೆ ಮುಖ್ಯಮಂತ್ರಿಗಳು ಖರ್ಚು ಮಾಡಿದ ಹಣವನ್ನು ಅವರಿಂದ ವಾಪಸ್ ಪಡೆಯಬೇಕು. ಸಾರ್ವಜನಿಕರ ಹಣ ದುರುಪಯೋಗ ಮಾಡಿಕೊಂಡ ಬಗ್ಗೆ ವಿಚಾರಣೆ ನಡೆಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಇಂದು ಸಿದ್ದರಾಮಯ್ಯ ಅವರ ನವ ಕರ್ನಾಟಕ ನಿರ್ಮಾಣ ಯಾತ್ರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಂಚಾರ ನಡೆಸಲಿದೆ. ಮೂಡಿಗೆರೆ, ತರೀಕೆರೆಯಲ್ಲಿ ಸಮಾವೇಶಗಳನ್ನು ಉದ್ದೇಶಿಸಿ ಸಿದ್ದರಾಮಯ್ಯ ಭಾಷಣ ಮಾಡಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+