ನೂಪುರ್ ಶರ್ಮಾ ವಿರುದ್ಧ ಕ್ರಮ ಕೋರಿ ಹೈಕೋರ್ಟ್ಗೆ ಪಿಐಎಲ್
ಬೆಂಗಳೂರು, ಜೂ.20: ಇಸ್ಲಾಂ ಧರ್ಮದ ಸಂಸ್ಥಾಪಕ ಪ್ರವಾದಿ ಮೊಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ರಾಷ್ಟ್ರೀಯ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ವಿರುದ್ಧ ದೇಶಾದ್ಯಂತ ಪ್ರತಿಭಟನೆ ಮುಂದುವರಿದಿದೆ.
ಅದರ ಮಧ್ಯೆಯೇ ಆಕೆಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಸರ್ಕಾರ ಮತ್ತು ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ ಅಕೋಶ ನಗರದ ನಿವಾಸಿ ಕೆ.ಕೆ. ಶರೀಫುದ್ದೀನ್ ಹೈಕೋರ್ಟ್ನಲ್ಲಿ ಪಿಐಎಲ್ ಹೂಡಲಾಗಿದೆ.
ಅದರಲ್ಲಿ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ನಗರ ಪೊಲೀಸ್ ಆಯುಕ್ತರು ಮತ್ತು ಅಶೋಕ ನಗರ ಠಾಣಾ ಇನ್ಸ್ಪೆಕ್ಟರ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಅರ್ಜಿ ಹೈಕೋರ್ಟ್ ನ ಮುಂದೆ ವಿಚಾರಣೆಗೆ ಬರಬೇಕಿದೆ.

ನೂಪರ್ ಶರ್ಮಾ ವಿರುದ್ಧ ದೂರು ನೀಡಿದ್ದರೂ, ಅಶೋಕ ನಗರದ ಠಾಣಾ ಇನ್ಸ್ಪೆಕ್ಟರ್ ಆ ದೂರು ಪರಿಗಣಿಸಿ ಎಫ್ಐಆರ್ ದಾಖಸಿಲ್ಲ ಹಾಗೂ ನೂಪುರ್ ಶರ್ಮಾ ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ. ಆದ್ದರಿಂದ ತಮ್ಮ ದೂರು ಆಧರಿಸಿ ನುಪೂರ್ ಶರ್ಮಾ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ನಿರ್ದೇಶಿಸಬೇಕು ಎಂದು ನ್ಯಾಯಾಲಯವನ್ನು ಅರ್ಜಿದಾರರು ಕೋರಿದ್ದಾರೆ.
ಮೇ 27ರಂದು ಇಂಗ್ಲೀಷ್ ಖಾಸಗಿ ಸುದ್ದಿ ವಾಹಿನಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಕೋಮು ಸೌಹಾರ್ದತೆ ಕದಡುವ ಉದ್ದೇಶದಿಂದ ಇಂತಹ ಹೇಳಿಕೆ ನೀಡಿದ್ದಾರೆ. ಇದರಿಂದ ದೇಶದಲ್ಲಿ ಮುಸ್ಲಿಂ ಸಮುದಾಯದವರ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಅಲ್ಲದೆ, ನೂಪುರ್ ಶರ್ಮಾ ಹೇಳಿಕೆ ಖಂಡಿಸಿ ದೇಶದಾದ್ಯಂತ ಪ್ರತಿಭಟನೆಗಳು ನಡೆದಿವೆ. ಈ ವೇಳೆ ಕೋಮು ಸೌಹಾರ್ದತೆ ಕದಡಿದೆ ಹಾಗೂ ಶಾಂತಿಭಂಗ ಉಂಟಾಗಿದೆ. ಇದರಿಂದ ನೂಪುರ್ ಶರ್ಮಾ ವಿರುದ್ದ 30ರಂದು ದೂರು ದಾಖಲಿಸಲಾಗಿದೆ.
Recommended Video
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications