ವಿದೇಶದಲ್ಲಿರುವವರಿಗೆ ಇ-ಮೇಲ್ ಮತದಾನಕ್ಕೆ ಅವಕಾಶ ಕೋರಿ ಪಿಐಎಲ್
ಬೆಂಗಳೂರು, ಮೇ.2: ಹೊರ ಊರುಗಳು ಅಥವಾ ವಿದೇಶಗಳಲ್ಲಿರುವ ಮತದಾರರಿಗೆ ಇ-ಮೇಲ್ ಮೂಲಕ ಮತ ಚಲಾಯಿಸಲು ಅನುಮತಿ ನೀಡಲು ನಿರ್ದೇಶಿಸುವಂತೆ ಕೋರಿ ವಕೀಲ ಮಿಟ್ಟಿ ನರಸಿಂಹ ಮೂರ್ತಿ ಅವರಿಂದ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಕೇಂದ್ರ ಚುನಾವಣಾ ಆಯೋಗ ಹಾಗೂ ಕೇಂದ್ರ ಕಾನೂನು ಸಚಿವಾಲಯದ ಕಾರ್ಯದರ್ಶಿಯನ್ನು ಅರ್ಜಿಯಲ್ಲಿ ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಬುಧವಾರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರಜಾಕಾಲದ ಪೀಠ, ಕೇಂದ್ರ ಚುನಾವಣಾ ಆಯೋಗದ ಪರ ವಕೀಲರಿಗೆ ಅರ್ಜಿ ಪ್ರತಿ ನೀಡುವಂತೆ ಅರ್ಜಿದಾರರಿಗೆ ಸೂಚಿಸಿ ವಿಚಾರಣೆಯನ್ನು ಮೇ 4 ಕ್ಕೆ ಮುಂದೂಡಿದೆ.
ಅರ್ಜಿದಾರರ ಮನವಿ ಏನು?: ಬಹಳಷ್ಟು ಮತದಾರರು ಉದ್ಯೋಗ, ವಿದ್ಯಾಭ್ಯಾಸ ಮತ್ತು ಆರೋಗ್ಯದ ಕಾರಣಕ್ಕಾಗಿ ತಮ್ಮ ಮತಕ್ಷೇತ್ರಗಳಿಂದ ಹೊರಗೆ ಇರುವ ಸಂದರ್ಭಗಳಿರುತ್ತವೆ. ಹೀಗಾಗಿ ಅವರು ತಮ್ಮ ಮತ ಚಲಾಯಿಸುವ ಇರಾದೆ ಹೊಂದಿದ್ದರೂ ಸಾಧ್ಯವಾಗುವುದಿಲ್ಲ.

ಈಗಿರುವ ಸ್ಥಿತಿಯಲ್ಲಿ ಕೆಲವೇ ವರ್ಗದ ಜನರು ಮಾತ್ರ ಅಂಚೆ ಮೂಲಕ ಮತ ಚಲಾಯಿಸಲು ಅವಕಾಶ ಇದೆ. ಆದ್ದರಿಂದ ಮುಂಬರುವ ಚುನಾಚಣೆಯಲ್ಲಿ ತಮ್ಮ ಮತಗಟ್ಟೆಗಳಿಂದ ಹೊರಗೆ ಇರುವ ಮತದಾರರು ಇ-ಮೇಲ್ ಮೂಲಕ ಮತ ಚಲಾಯಿಸಲು ಅವಕಾಶ ನೀಡುವಂತೆ ಚುನಾಚಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು.
ಇಂತಹ ಮತದಾರರಿಗೆ ಬ್ಯಾಂಕ್ ಖಾತೆಗಳ ನಿರ್ವಹಣೆಯಲ್ಲಿ ನೀಡುವಂತಹ ಒ.ಟಿ.ಪಿ (ಒನ್ ಟೈಮ್ ಪಾಸ್ ವರ್ಡ್) ನೀಡಬೇಕು. ಇದರಿಂದ ಮತ ಚಲಾವಣೆ ಪ್ರಮಾಣವೂ ಏರಿಕೆಯಾಗುತ್ತದೆ. ಹೀಗಾಗಿ ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕೆಂದು ಅರ್ಜಿದಾರರು ಕೋರಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications