ಪಿಲಿಕುಳ ರೀತಿ ಹಾವೇರಿಯಲ್ಲಿ ವಿಜ್ಞಾನ ಕೇಂದ್ರ, ಆದರೆ 4 ಕೋಟಿ ಸಾಕಾ?
ಹಾವೇರಿ, ಜುಲೈ 18: ನಾಲ್ಕು ಕೋಟಿ ರುಪಾಯಿ ವೆಚ್ಚದಲ್ಲಿ ಸ್ಥಾಪನೆ ಆಗುತ್ತಿರುವ ಜಿಲ್ಲಾ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಇಲ್ಲಿನ ಜಿಲ್ಲಾಡಳಿತ ಭವನದ ಸಮೀಪದಲ್ಲಿರುವ ಒಂಬತ್ತೂವರೆ ಎಕರೆ ಪ್ರದೇಶದಲ್ಲಿ ತಲೆ ಎತ್ತಲಿದೆ. ಈಗಾಗಲೇ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಪಿಲಿಕುಳ ಮಾದರಿಯಲ್ಲಿ ಈ ಕೇಂದ್ರವನ್ನು ನಿರ್ಮಿಸಲು ಉದ್ದೇಶಿಸಲಾಗಿದೆ.
ಪದೇ ಪದೇ ಸ್ಥಳ ಬದಲಾವಣೆಯಿಂದ ನನೆಗುದಿಗೆ ಬಿದ್ದಿದ್ದ ಕಾಮಗಾರಿಯಿಂದಾಗಿ ವಿಜ್ಞಾನ ಕೇಂದ್ರ ಆರಂಭಕ್ಕೆ ಕಾರ್ಮೋಡ ಕವಿದಿತ್ತು. ಜಿಲ್ಲೆಯಾಗಿ ಎರಡು ದಶಕವಾದರೂ ವಿಜ್ಞಾನ ಕೇಂದ್ರ ಇಲ್ಲದಿರುವುದು ಭವಿಷ್ಯದ ವಿಜ್ಞಾಗಳ ಪಾಲಿಗೆ ತೊಡಕಾಗಿ ಪರಿಣಮಿಸಿತ್ತು. ಈಗ ವಿಜ್ಞಾನ ಕೇಂದ್ರಕ್ಕೆ ಬಾಲಗ್ರಹ ಪೀಡೆಯಿಂದ ಮುಕ್ತಿ ಸಿಕ್ಕಂತಾಗಿದ್ದು, ಆಕರ್ಷಕ ರೀತಿಯಲ್ಲಿ ಕೇಂದ್ರ ಸ್ಥಾಪನೆಯಾಗಲಿದೆ.

ಪಿಲಿಕುಳ ಮಾದರಿ
ರಾಜ್ಯದ ಗಮನ ಸಳೆದಿರುವ ಪಿಲಿಕುಳ ವಿಜ್ಞಾನ ಕೇಂದ್ರದ ಮಾದರಿಯಲ್ಲಿ ಕೇಂದ್ರ ಸ್ಥಾಪನೆಯಾಗಲಿದ್ದು, ವಿಷಯಾಧಾರಿತ ವಿಜ್ಞಾನ, ಮನರಂಜನಾ ವಿಜ್ಞಾನಕ್ಕೆ ಸಂಬಂಧಿಸಿದ ಗ್ಯಾಲರಿಗಳು ಇರಲಿವೆ. ಅದರಲ್ಲಿ ಜೀವವೈವಿಧ್ಯ ಮತ್ತು ಆಧುನಿಕ ಸಂಶೋಧನೆ, ತಂತ್ರಜ್ಞಾನಕ್ಕೆ ಸಂಬಂಧಿಸಿದ ವಿಭಾಗಗಳು ಇರಲಿವೆ.
ಈ ಗ್ಯಾಲರಿಗಳಲ್ಲಿ ವಿದ್ಯಾರ್ಥಿಗಳು ಸ್ವತಃ ಬಳಸಬಹುದಾದ ವಿಜ್ಞಾನ ಮಾದರಿಗಳಿರುತ್ತವೆ. ಅಲ್ಲದೇ ಮಾನವ ವಿಕಾಸ, ವಿನಾಶದ ಅಂಚಿನಲ್ಲಿರುವ ಪ್ರಭೇದಗಳು, ಅವುಗಳನ್ನು ಉಳಿಸುವುದರ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಮನದಟ್ಟಾಗುವ ರೀತಿಯಲ್ಲಿ ವಿವರಣೆ ನೀಡುವ ಪ್ರಯತ್ನಗಳು ಇಲ್ಲಿ ಮಾಡಲು ಉದ್ದೇಶಿಸಲಾಗಿದೆ.
ನ್ಯಾನೋ ತಂತ್ರಜ್ಞಾನ, ರಾಕೆಟ್ ತಂತ್ರಜ್ಞಾನ, ಸಂವಹನ ತಂತ್ರಜ್ಞಾನ, ವೈದ್ಯಕೀಯ ತಂತ್ರಜ್ಞಾನದ ಕುರಿತ ಮಾದರಿಗಳು ಹಾಗೂ ಪ್ರಾತ್ಯಕ್ಷಿಕೆಗಳು ಈ ಕೇಂದ್ರದಲ್ಲಿ ಇರಲಿವೆ. ಪರಿಸರ ಜಾಗೃತಿ ಜತೆಗೆ ವಿಜ್ಞಾನದ ವಿಸ್ಮಯಗಳು ಇಲ್ಲಿ ಅನಾವರಣಗೊಳ್ಳಲಿವೆ.
ಆದರೆ, ಕೇವಲ ನಾಲ್ಕು ಕೋಟಿ ರುಪಾಯಿ ಅನುದಾನದಲ್ಲಿ ಪಿಲಿಕುಳ ಮಾದರಿಯಲ್ಲಿ ವಿಜ್ಞಾನ ಕೇಂದ್ರ ಆರಂಭ ಸಾಧ್ಯವಿಲ್ಲ. ಇದಕ್ಕೆ ಕನಿಷ್ಠ ಹದಿಮೂರು ಕೋಟಿ ಅನುದಾನ ಅಗತ್ಯವಿದೆ ಎಂಬುದು ತಜ್ಞರ ಅಭಿಪ್ರಾಯವಾಗಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications