ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ ಏರಿಕೆಗೆ ಪ್ಲಾನ್
ಬೆಂಗಳೂರು, ಜುಲೈ 14: ಈಗಾಗಲೇ ರಾಜ್ಯದ ಜನರು ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಬೇಸತ್ತಿದ್ದಾರೆ. ಈ ನಡುವೆಯೇ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆ ಆಗುವ ಸಾಧ್ಯತೆ ಇದೆ. ಎಸ್ಕಾಂಗಳ ಆದಾಯದ ಅಂತರವನ್ನ ಸರಿದೂಗಿಸಲು ಜನರ ಜೇಬು ಸುಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ವಾಣಿಜ್ಯ ಮತ್ತು ಕೈಗಾರಿಕಾ ಗ್ರಾಹಕರಿಗೆ ವಿದ್ಯುತ್ ದರವನ್ನ ಹೆಚ್ಚಿಸುವ ಮೂಲಕ ತಮ್ಮ 4,620 ಕೋಟಿ ರೂಪಾಯಿಗಳ ಆದಾಯದ ಅಂತರವನ್ನು ಸರಿದೂಗಿಸಲು ವಿದ್ಯುತ್ ಸರಬರಾಜು ನಿಗಮ ನಿಯಮಿತ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದಿಂದ (ಕೆಇಆರ್ಸಿ) ತಿದ್ದುಪಡಿ ಕೋರಿದೆ ಎಂದು ತಿಳಿದುಬಂದಿದೆ.

ತಮ್ಮ ಆದಾಯದ ಅಂತರವನ್ನು ಸರಿ ಮಾಡಿಕೊಳ್ಳಲು ಎಸ್ಕಾಂಗಳು ಮಾರ್ಚ್ 23, 2025ರಂದು ಮೊದಲ ಬಾರಿಗೆ ಕೆಇಆರ್ಸಿಗೆ ಮೇಲ್ಮನವಿ ಸಲ್ಲಿಕೆ ಮಾಡಿದ್ದವು. ಈ ಕುರಿತ ಚರ್ಚೆಯನ್ನು ಜುಲೈ 8ರಂದು ನಡೆಸಲಾಯಿತು. 30 ದಿನಗಳೊಳಗೆ ಎಲ್ಲಾ ಪಾಲುದಾರರಿಂದ ಸಾರ್ವಜನಿಕ ಅಭಿಪ್ರಾಯವ ಸಂಗ್ರಹಿಸಲು ಮತ್ತು ಅಫಿಡವಿಟ್ ಮೂಲಕ ಆಯೋಗಕ್ಕೆ ವಿವರಗಳನ್ನು ಸಲ್ಲಿಕೆ ಮಾಡಲು ವಿದ್ಯುತ್ ಸರಬರಾಜು ನಿಗಮ ನಿಯಮಿತಕ್ಕೆ ಅನುಮತಿ ನೀಡಿದೆ.
ಆದರೆ, ಈ ರೀತಿಯ ಪರಿಷ್ಕರಣೆ ಕೋರಿರುವುದು ಇದೇ ಮೊದಲು, ಯಾಕಂದ್ರೆ ಸರ್ಕಾರಕ್ಕೆ ಬಾಕಿ ಹಣವನ್ನ ತೆರವುಗೊಳಿಸಲು ಕಷ್ಟವರ ಆಗುತ್ತಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ವರದಿ ಆಗಿದೆ.
ಇನ್ನು ಖ್ಯಾತ ಇಂಧನ ತಜ್ಞ ಎಂ.ಜಿ. ಪ್ರಭಾಕರ್ ಅವರು ಮಾತನಾಡಿ, ಕಾನೂನು ಎಸ್ಕಾಂಗಳು ಅಂತಹ ತಿದ್ದುಪಡಿಗಳನ್ನು ಅನುಮತಿಸುವುದಿಲ್ಲ ಎಂದು ಹೇಳಿದ್ದಾರೆ ಅಂತಾ ವರದಿಯಾಗಿದೆ. ಸರ್ಕಾರವು ಐಪಿ ಸೆಟ್ಗಳಿಗೆ ನೀಡಿರುವ ಸಬ್ಸಿಡಿ ಹೆಚ್ಚಾಗಿದೆ. ಇದನ್ನು ಎಸ್ಕಾಂಗಳು ನಿರ್ವಹಿಸಲು ಕಷ್ಟಕರ ಆಗಿದೆ. ಆದ್ದರಿಂದ ಆದಾಯವನ್ನು ಹೊಂದಿಸಲು, ಎಸ್ಕಾಂಗಳು ಗ್ರಾಹಕರ ಮೇಲೆ ಹೆಚ್ಚಿನ ಸುಂಕ ಹೇರಲು ಬಯಸುತ್ತಿದ್ದಾರೆ.
ಗೃಹ ಜ್ಯೋತಿ ಯೋಜನೆಗೂ ಸಹ ಕ್ರಮೇಣ ಅದೇ ರೀತಿ ಮಾಡುವ ಸಾಧ್ಯತೆಗಳಿವೆ. 2025-26ನೇ ಸಾಲಿಗೆ ಐಪಿ ಸೆಟ್ಗಳ ಅನುಮೋದಿತ ಮಾರಾಟವು 24,868.10 ಮಿಲಿಯನ್ ಯೂನಿಟ್ಗಳು ಆಗಿದ್ದು, ಅವುಗಳಿಗೆ ಪ್ರತಿ ಯೂನಿಟ್ಗೆ 8.30 ರೂಪಾಯಿಗಳಿಗೆ ವಿದ್ಯುತ್ ಪೂರೈಸುವ ಜವಾಬ್ದಾರಿಯನ್ನ ಸರ್ಕಾರ ಹೊಂದಿದೆ ಎಂದು ಅವರು ತಿಳಿಸಿದ್ದಾರೆ.
ಈ ಸುಂಕವನ್ನು ಕೆಇಆರ್ಸಿ ನಿಗದಿಪಡಿಸಿದೆ. ಆದರೆ, ಕರ್ನಾಟಕ ವಿದ್ಯುತ್ ಕಾಯ್ದೆ 2003, ವಿಭಾಗ 63, ಉಪ-ವಿಭಾಗ- 4ರ ಪ್ರಕಾರ, ಯಾವುದೇ ಸುಂಕ ಅಥವಾ ಯಾವುದೇ ಸುಂಕದ ಭಾಗವನ್ನು ಸಾಮಾನ್ಯವಾಗಿ ಯಾವುದೇ ಹಣಕಾಸು ವರ್ಷದಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ತಿದ್ದುಪಡಿ ಮಾಡಲಾಗುವುದಿಲ್ಲ ಎಂದು ಹೇಳಿದ್ದಾರೆ. ಈ ನಡುವೆ ವಿವಿಧ ಕೈಗಾರಿಕಾ ಸಂಸ್ಥೆಗಳ ಸದಸ್ಯರು ಕೆಎಆರ್ಸಿ ಮತ್ತು ಎಸ್ಕಾಂಗಳ ಮುಂದೆ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಕೆ ಮಾಡುವುದಾಗಿ ಹೇಳಿದ್ದಾರೆ. ಒಟ್ಟಿನಲ್ಲಿ ಈಗಾಗಲೇ ದಿನಬಳಕೆ ವಸ್ತುಗಳ ದರ ಏರಿಕೆಯಿಂದ ಸಾಮನ್ಯ ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆಯೇ ಇದೀಗ ವಿದ್ಯುತ್ ದರ ಏರಿಕೆಗೆ ಸರ್ಕಾರ ಚಿಂತನೆ ನಡೆಸುತ್ತಿದ್ದು, ಇದರಿಂದ ಜನರು ಮತ್ತಷ್ಟು ಆತಂಕ್ಕೆ ಒಳಗಾಗಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications